ನನ್ನ ಇಮೇಜ್ ಹಾಳು ಮಾಡುವ ಯತ್ನ
Team Udayavani, May 16, 2019, 1:00 AM IST
ಇತ್ತೀಚೆಗೆ ಅಮೆರಿಕದ ಟೈಮ್ ನಿಯತಕಾಲಿಕೆಯಲ್ಲಿ ತಮ್ಮನ್ನು ಕಟುವಾಗಿ ಟೀಕಿಸಿದ್ದರ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಳೆದ 20 ವರ್ಷಗಳಿಂದಲೂ ನನ್ನ ಇಮೇಜ್ ಹಾಳು ಮಾಡುವ ಯತ್ನ ನಡೆಯುತ್ತಿದೆ. ಆದರೆ ನನ್ನ ಇಮೇಜ್ ಹಾಳು ಮಾಡಲು ಯತ್ನಿಸಿದವರ ಇಮೇಜ್ ಹಾಳಾಗುತ್ತಿದೆ ಎಂದಿದ್ದಾರೆ. ಪಟನಾ ರ್ಯಾಲಿಯ ವೇಳೆ ಮಾತ ನಾಡಿದ ಅವರು, ವಿಭಜನೆ ಮಾಡಲಾಗುತ್ತಿದೆ ಎಂದಾದರೆ ಜನರು ಯಾಕೆ ಮೋದಿಯನ್ನು ಮೆಚ್ಚುತ್ತಿದ್ದರು ಎಂದು ಪ್ರಶ್ನಿಸಿದ್ದಾರೆ. ಬಡವರು ಸುಧಾರಣೆಯಾಗಲು ಬಯಸಿದ್ದರೆ, ಅದರಿಂದ ದೇಶಕ್ಕೆ ಅನುಕೂಲವಾಗುತ್ತದೆ ಎಂದಾದರೆ ಸಮಸ್ಯೆಯೇನಿದೆ? ಬಡವರು ಜಾತಿ ಹಾಗೂ ಸಮುದಾಯಗಳ ಕಟ್ಟಳೆ ಯನ್ನು ಬಿಟ್ಟು ತಮ್ಮ ಮಕ್ಕಳ ಭವಿಷ್ಯ ಉತ್ತಮವಾಗಬೇಕು ಎಂದು ಬಯಸುತ್ತಿದ್ದಾರೆ. ಅದಕ್ಕೆ ಇವರಿಗೆ ಏಕೆ ಸಿಟ್ಟು ಎಂದು ಮೋದಿ ಪ್ರಶ್ನಿಸಿದ್ದಾರೆ.
ಇಬ್ಬರು ಬ್ಯಾಟ್ಸ್ಮನ್: ಮೋದಿ
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಸೋಲು ಖಚಿತ ಎಂದು ಹೇಳಿ ರುವ ಪ್ರಧಾನಿ ನರೇಂದ್ರ ಮೋದಿ, “ಆ ಸೋಲಿನ ಹೊಣೆ ಹೊತ್ತುಕೊಳ್ಳಲು ಈಗಾಗಲೇ ಕಾಂಗ್ರೆಸ್ ಇಬ್ಬರು ಬ್ಯಾಟ್ಸ್ಮನ್ಗಳನ್ನು ಸಿದ್ಧಪಡಿಸಿದೆ’ ಎಂದು ವ್ಯಂಗ್ಯವಾಡಿದ್ದಾರೆ. ಬುಧವಾರ ಜಾರ್ಖಂಡ್ನಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, “ಕಾಂಗ್ರೆಸ್ಗೆ ಸೋಲಿನ ಮಾಹಿತಿ ಸಿಕ್ಕಾಗಿದೆ. ಯಾರ ತಲೆಯ ಮೇಲೆ ಆ ಸೋಲಿನ ಹೊಣೆ ಹೊರಿಸುವುದು ಎಂದು ಕಾಂಗ್ರೆಸ್ ಯೋಚಿಸುತ್ತಿತ್ತು. ಕೊನೆಗೆ ನಾಮ್ಧಾರ್(ರಾಹುಲ್) ನನ್ನು ರಕ್ಷಿಸಲು ಇಬ್ಬರು ಬ್ಯಾಟ್ಸ್ಮನ್(ಸ್ಯಾಮ್ ಪಿತ್ರೋಡಾ ಮತ್ತು ಮಣಿ ಶಂಕರ್ ಅಯ್ಯರ್)ಗಳನ್ನು ಸಿದ್ಧಪಡಿಸಿದೆ. ಅದರಲ್ಲಿ ಒಬ್ಬರು ಸಿಕ್ಖ್ ದಂಗೆ ಬಗ್ಗೆ ಹುವಾ ತೋ ಹುವಾ ಎಂದು ಹೇಳುತ್ತಾರೆ. ಮತ್ತೂಬ್ಬರು ನನ್ನ ಮೇಲೆ ಕೆಂಡಕಾರುತ್ತಾರೆ. ಇದು ಮೇ 23ರಂದು ಏನಾಗುತ್ತದೆ ಎನ್ನುವುದಕ್ಕೆ ಜೀವಂತ ಉದಾಹರಣೆ’ ಎಂದು ಟೀಕಿಸಿದ್ದಾರೆ. ಇದೇ ವೇಳೆ, ಬಿಹಾರ ದಲ್ಲೂ ಪ್ರಚಾರ ನಡೆಸಿ ಮಾತನಾಡಿದ ಮೋದಿ, ಮುಂದಿನ ಆಡಳಿತಾ ವಧಿಯಲ್ಲಿ ನಾನು ಬಿಹಾರಕ್ಕೆ ವಿಕಾಸದ ಗಂಗೆಯನ್ನು ಹರಿಸುತ್ತೇನೆ ಎಂದು ವಾಗ್ಧಾನ ನೀಡಿದ್ದಾರೆ. ಜತೆಗೆ, ರಾಷ್ಟ್ರೀಯ ಭದ್ರತೆಯನ್ನು ಚುನಾವಣಾ ವಿಚಾರ ವನ್ನಾಗಿ ಏಕೆ ಬಳಸಬಾರದು ಎಂದು ಪ್ರಶ್ನಿಸುವ ಮೂಲಕ ವಿಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ. ನಮ್ಮ ಸರಕಾರ ಕೈಗೊಂಡಂಥ ಆಕ್ರಮಣಕಾರಿ ಕಾರ್ಯತಂತ್ರದಿಂದ ಮಾತ್ರವೇ ಭಯೋತ್ಪಾದನೆ ನಿರ್ಮೂಲನೆ ಸಾಧ್ಯ. ಅದನ್ನು ಚುನಾವಣಾ ಪ್ರಚಾರಕ್ಕೆ ಬಳಸದೇ ಮತ್ತೇನು ಮಾಡಬೇಕು ಎಂದೂ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ