3 ದಶಕಗಳ ನಂತರ ಬಂದ ನಟರಾಜ

37 ವರ್ಷಗಳ ನಂತರ ಆಸ್ಟ್ರೇಲಿಯಾದಲ್ಲಿ ಪತ್ತೆ; 1982ರಲ್ಲಿ ಕಳವಾಗಿದ್ದ ಪೂಜಾ ಮೂರ್ತಿ

Team Udayavani, Sep 13, 2019, 6:00 AM IST

q-48

ನವದೆಹಲಿ: 37 ವರ್ಷಗಳ ಹಿಂದೆ, ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಕಲ್ಲಿದೈಕುರುಚಿ ಎಂಬ ಹಳ್ಳಿಯ ‘ಕುಲಸೇಕರ ಮುದಯಾರ್‌ ಅರಾಮ್‌ವಲಾತ ನಾಯಕಿ ಅಮ್ಮನ್‌’ ಎಂಬ ದೇವಸ್ಥಾನದಿಂದ ಕಳವಾಗಿದ್ದ ನಟರಾಜ ದೇವರ ಪುರಾತನ ಕಂಚಿನ ವಿಗ್ರಹವನ್ನು ಪತ್ತೆ ಹಚ್ಚಿ ಪುನಃ ಭಾರತಕ್ಕೆ ತರಲಾಗಿದೆ.

ಸುಮಾರು 600 ವರ್ಷಗಳಷ್ಟು ಹಳೆಯದಾದ, 100 ಕೆಜಿ ತೂಕವಿರುವ ವಿಗ್ರಹವನ್ನು 1982ರ ಜು. 5ರಂದು ಡಕಾಯಿತರು ದೇಗುಲದ ಬಾಗಿಲು ಒಡೆದು ಗರ್ಭಗುಡಿಯ ಒಳಬಂದು ಅಪಹರಿಸಿದ್ದರು. ಅದರ ಜತೆಗೆ, ಪಂಚಲೋಹದ ಶಿವಕಾಮಿ, ಮಣಿಕವಾಸಾಗರ್‌ ಹಾಗೂ ಶ್ರೀಬಲಿ ನಾಯಗರ್‌ ದೇವರುಗಳ ವಿಗ್ರಹಗಳೂ ಕಳುವಾಗಿದ್ದವು.

ಮರೆಯಾದ ದಾರಿ ಮತ್ತೆ ಗೋಚರ: ದೇವಸ್ಥಾನದ ಟ್ರಸ್ಟಿಯವರ ದೂರಿನ ಮೇರೆಗೆ, ಕಳ್ಳಿದೈಕುರಿಚಿ ಪೊಲೀಸ್‌ ಠಾಣೆಯಲ್ಲಿ 1982ರ ಜು. 6ರಂದು ಎಫ್ಐಆರ್‌ ದಾಖಲಾಗಿತ್ತು. ಅದಾಗಿ, ಎರಡು ವರ್ಷಗಳಾದರೂ ಕಾಣೆಯಾದ ವಿಗ್ರಹದ ಬಗ್ಗೆ ಕಿಂಚಿತ್ತೂ ಮಾಹಿತಿಗಳು ಲಭ್ಯವಾಗದ ಕಾರಣ, ಪೊಲೀಸರು ಪ್ರಕರಣವನ್ನು ಅಂತ್ಯಗೊಳಿಸಿದ್ದರು. ಆದರೆ, ಕೆಲವು ವರ್ಷಗಳ ಹಿಂದೆ, ಸ್ಥಳೀಯ ನ್ಯಾಯಾಲಯವು ವಿಗ್ರಹದ ಪತ್ತೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿತು. ಅದಕ್ಕೆ ನಿವೃತ್ತ ಪೊಲೀಸ್‌ ಮಹಾ ನಿರ್ದೇಶಕ ಮಣಿಕವೇಲು ಅವರನ್ನು ಮುಖ್ಯಸ್ಥರನ್ನಾಗಿಸಿತು. ತಿರುನೆಲ್ವೇಲಿ ಜಿಲ್ಲೆಯ ಹೆಚ್ಚುವರಿ ಎಸ್‌ಪಿ ರಾಜಾರಾಂ ಅವರೂ ತಂಡದಲ್ಲಿದ್ದರು. ಆಗ, ಮತ್ತೆ ಆರಂಭವಾದ ತನಿಖೆಯಲ್ಲಿ ಕಳುವಾದ ವಿಗ್ರಹ ದಕ್ಷಿಣ ಆಸ್ಟ್ರೇಲಿಯಾದ ‘ಆರ್ಟ್‌ ಗ್ಯಾಲರಿ ಆಫ್ ಸೌತ್‌ ಆಸ್ಟ್ರೇಲಿಯಾ’ (ಎಜಿಎಸ್‌ಎ) ಎಂಬ ವಸ್ತು ಸಂಗ್ರಹಾಲಯವೊಂದರಲ್ಲಿ ಇರುವುದು ಪತ್ತೆಯಾಗಿತ್ತು.

ಭಾರತಕ್ಕೆ ಬಂದ ನಟರಾಜ: ವಿಗ್ರಹ ಹಸ್ತಾಂತರಕ್ಕೆ ಸಂಬಂಧಿಸಿದಂತೆ, ಭಾರತ ಮತ್ತು ಆಸ್ಟ್ರೇಲಿಯಾ ಸರ್ಕಾರಗಳ ನಡುವೆ ಸಾಕಷ್ಟು ಪತ್ರ ವ್ಯವಹಾರಗಳು ನಡೆದ ನಂತರ, ಇತ್ತೀಚೆಗೆ, ಎಜಿಎಸ್‌ಎ ರಿಜಿಸ್ಟ್ರಾರ್‌ ಜೇನ್‌ ರಾಬಿನ್ಸನ್‌ ಅವರು, ತನಿಖಾ ತಂಡಕ್ಕೆ ವಿಗ್ರಹವನ್ನು ಹಸ್ತಾಂತರಿಸಿದ್ದಾರೆ. ಕಾನೂನು ಕ್ರಮ ನಂತರ ದೇಗುಲಕ್ಕೆ ನಟರಾಜನನ್ನು ಮರಳಿಸಲಾಗುತ್ತದೆ.

ವಿಗ್ರಹ ವಿಶೇಷ
•16ನೇ ಶತಮಾನದಲ್ಲಿ ತಯಾರು
•600 ವರ್ಷಗಳಷ್ಟು ಹಿಂದಿನದ್ದು
•ಬಳಕೆಯಾದ ಪ್ರಧಾನ ಲೋಹ ಕಂಚು
•ವಿಗ್ರಹದ ತೂಕ ಸುಮಾರು 100 ಕೆಜಿ
•ವಿಗ್ರಹದ ಎತ್ತರ ಎರಡೂವರೆ ಅಡಿ

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Hunsur: ಯುಪಿಎಸ್‌ಸಿ ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.