ನೋಟು ಅಮಾನ್ಯದ ಪ್ರಮಾದ ಪುನರಪಿ ಎಸಗದಿರಿ: ಮೋದಿಗೆ ಸಿಂಗ್ ಪಾಠ
Team Udayavani, Dec 7, 2017, 3:18 PM IST
ರಾಜ್ಕೋಟ್, ಗುಜರಾತ್ : “ಮೋದಿಜೀ, ನೋಟು ಅಪನಗದೀಕರಣದಂತಹ ಮಹಾ ಪ್ರಮಾದವನ್ನು ಇನ್ನು ಮುಂದೆ ಎಂದೂ ಪುನರಪಿ ಎಸಗದಿರಿ’ ಎಂದು ಮಾಜಿ ಪ್ರಧಾನಿ, ಹಿರಿಯ ಕಾಂಗ್ರೆಸ್ ನಾಯಕ, ಮನಮೋಹನ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿಗೆ ನೀಡಿದ್ದಾರೆ.
ಇಂದಿಲ್ಲಿ ಸಂವಹನ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಮನಮೋಹನ್ ಸಿಂಗ್, “ನೋಟು ಅಪನಗದೀಕರಣ ಒಂದು ಮಹಾ ಪ್ರಮಾದ. ಇದರಿಂದಾಗಿ ಬೃಹತ್ ಪ್ರಮಾಣದ ಕಪ್ಪು ಹಣ ಬಿಳಿಯಾಗುವುದಕ್ಕೆ ಉತ್ತಮ ಅವಕಾಶ ಕಲ್ಪಿಸಲಾಯಿತು. ದುರದೃಷ್ಟವಶಾತ್ ಅದೇ ವೇಳೆ ಲಕ್ಷಾಂತರ ಜನರ ಜೀವನಾಧಾರ ಉದ್ಯೋಗಗಳನ್ನು ಅದು ಕಸಿದು ಕೊಂಡು ಅಸಂಖ್ಯರನ್ನು ಬೀದಿಪಾಲು ಮಾಡಿತು; ನೋಟು ಅಪನಗದೀಕರಣದಿಂದ ಭ್ರಷ್ಟಾಚಾರ ನಿಲ್ಲಲಿಲ್ಲ; ಕಪ್ಪು ಹಣಕ್ಕೆ ಕಡಿವಾಣ ಬೀಳಲಿಲ್ಲ; ಮೇಲಾಗಿ ಅದು ಯುವ ಜನತೆಗೆ ಹೊಸ ಉದ್ಯೋಗಾವಕಾಶಗಳನ್ನು ಕೂಡ ಸೃಷ್ಟಿಸಲಿಲ್ಲ’ ಎಂದು ಟೀಕಿಸಿದರು.
ನೋಟು ಅಪನಗದೀಕರಣದ ಮೋದಿ ಸರಕಾರದ ಕ್ರಮ ದೇಶದ ಆರ್ಥಿಕತೆಗೆ, ಜನರಿಗೆ, ಬಡವರಿಗೆ ವಿನಾಶಕಾರಿಯಾಯಿತು; ನಮ್ಮ ಆಡಳಿತೆಯ ಸಂದರ್ಭದಲ್ಲಿ ನಾವೆಂದೂ ಈ ರೀತಿಯ ಪ್ರಮಾದಕರ ನಿರ್ಧಾರಗಳನ್ನು, ಕ್ರಮಗಳನ್ನು ತೆಗೆದುಕೊಳ್ಳಲಿಲ್ಲ’ ಎಂದು ಸಿಂಗ್ ಹೇಳಿದರು.
ಶಿಕ್ಷಕರು, ಪ್ರೊಫೆಸರ್ಗಳು ಮತ್ತು ವೃತ್ತಿಪರರೊಂದಿಗೆ ಸಂವಾದ ನಡೆಸುವುದಕ್ಕಾಗಿ ಸಿಂಗ್ ಅವರು ರಾಜ್ಕೋಟ್ಗೆ ಭೇಟಿ ನೀಡುತ್ತಿರುವುದಾಗಿ ಕಾಂಗ್ರೆಸ್ ಹೇಳಿದೆ.
ಈ ತಿಂಗಳ ಆದಿಯಲ್ಲಿ ಸಿಂಗ್ ಅವರು ಪ್ರಧಾನಿ ಮೋದಿ ಅವರ ಮೇಲೆ ವಾಕ್ದಾಳಿ ನಡೆಸಿ ನೋಟು ಅಪನಗದೀಕರಣದ ಸಂದರ್ಭದಲ್ಲಿ ಜನರು ಪಟ್ಟ ಪಾಡನ್ನು ಉಲ್ಲೇಖೀಸಿ ಸರಕಾರಿ ಯೋಜನೆಗಳನ್ನು ಟೀಕಿಸಿದ್ದರು. ನೋಟು ಅಮಾನ್ಯಗೊಂಡಾಗ ಜನರು ಹಣಕ್ಕಾಗಿ ಕ್ಯೂನಲ್ಲಿ ನಿಂತದ್ದನ್ನು ಮತ್ತು ನೂರಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡದ್ದನ್ನು ತಾನು ಇಂದಿಗೂ ಮರೆತಿಲ್ಲ ಎಂದು ಮನಮೋಹನ್ ಸಿಂಗ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ