ಜಾತಿ ಮಧ್ಯೆ ವಿಷ ಬೀಜ ಬಿತ್ತುವವರನ್ನು ದೂರವಿಡಿ: ಪ್ರಧಾನಿ
Team Udayavani, Dec 23, 2018, 6:25 AM IST
ಅಹಮದಾಬಾದ್: ಜಾತಿ ಮಧ್ಯೆ ವಿಷ ಬೀಜ ಬಿತ್ತುವವರ ಬಗ್ಗೆ ಎಚ್ಚರ ವಹಿಸುವಂತೆ ಪೊಲೀಸ್ ಪಡೆಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ. ಇವರನ್ನು ಬೇರುಮಟ್ಟದಲ್ಲಿ ನಿಷ್ಕ್ರಿಯ ಗೊಳಿಸ ಬೇಕಿದೆ. ಅಷ್ಟೇ ಅಲ್ಲ, ಧರ್ಮ ದ್ವೇಷ ಬಿತ್ತುವವರು ಮತ್ತು ಸಮುದಾಯಗಳ ಮಧ್ಯದ ವಿಶ್ವಾಸವನ್ನು ಕೆಡಿಸುವವರ ಬಗ್ಗೆಯೂ ಎಚ್ಚರಿಕೆ ವಹಿಸಬೇಕು ಎಂದು ಮೋದಿ ಹೇಳಿದ್ದಾರೆ.
ಗುಜರಾತ್ನಲ್ಲಿ ನಡೆದ ಡಿಜಿಪಿ, ಐಜಿಪಿ ಸಮ್ಮೇಳನದಲ್ಲಿ ಮಾತನಾಡಿದ ಅವರು ಈ ಕಿವಿಮಾತನ್ನು ಪೊಲೀಸರಿಗೆ ಹೇಳಿದ್ದಾರೆ.
ದೇಶದ ಸಮಗ್ರತೆಗಾಗಿ ಪೊಲೀಸರು ಶ್ರಮಿಸಬೇಕು ಎಂದ ಅವರು ಉಗ್ರರನ್ನು ಸದೆಬಡಿಯುವದಲ್ಲಿ ಮತ್ತು ಉಗ್ರರನ್ನು ಕೆಲವೇ ಪ್ರದೇಶಗಳಿಗೆ ಸೀಮಿತಗೊಳಿಸುವಲ್ಲಿ ಪೊಲೀಸರ ಶ್ರಮವನ್ನು ಅವರು ಶ್ಲಾಘಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಉಗ್ರರನ್ನು ಸದೆಬಡಿಯುವಲ್ಲಿ ಯಶಸ್ವಿಯಾದ ಪೊಲೀಸರ ಬಗ್ಗೆ ಇಡೀ ದೇಶದ ಜನರಿಗೆ ಹೆಮ್ಮೆಯಿದೆ. ವಿಪರೀತ ಸನ್ನಿವೇಶದಲ್ಲಿ ಪೊಲೀಸರು ಕೆಲಸ ಮಾಡಬೇಕಾಗುತ್ತದೆ. ಆದರೆ ಅವರಿಗೆ ಅಗತ್ಯ ಗೌರವ ಬಹಳಷ್ಟು ಬಾರಿ ಸಿಗುವುದಿಲ್ಲ. ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಪೊಲೀಸರನ್ನು ಗುರುತಿಸುವ ನಿಟ್ಟಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಶ್ರಮಿಸಬೇಕು ಎಂದೂ ಅವರು ಈ ವೇಳೆ ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ