ಅಯೋಧ್ಯೆ,ಬಾಬ್ರಿ ಪ್ರಕರಣದ ಅಂತಿಮ ವಿಚಾರಣೆ ಶುರು, ಮತ್ತೆ ಮುಂದಕ್ಕೆ


Team Udayavani, Dec 5, 2017, 3:41 PM IST

sc.jpg

ನವದೆಹಲಿ:ಬಾಬ್ರಿ ಮಸೀದಿ ಧ್ವಂಸ ಹಾಗೂ ರಾಮಜನ್ಮಭೂಮಿ ವಿವಾದ ಪ್ರಕರಣದ ಅಂತಿಮ ವಿಚಾರಣೆ ಸುಪ್ರೀಂಕೋರ್ಟ್ ನ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ವಿಶೇಷ ಪೀಠದಲ್ಲಿ ಮಂಗಳವಾರ ಆರಂಭಗೊಂಡಿದೆ. ಪೀಠ ಜಸ್ಟೀಸ್ ಅಶೋಕ್ ಭೂಷಣ್ ಹಾಗೂ ಅಬ್ದುಲ್ ನಜೀರ್ ಅವರನ್ನೊಳಗೊಂಡಿದೆ.

ಬಾಬ್ರಿ ಮಸೀದಿ, ರಾಮಜನ್ಮಭೂಮಿ ವಿವಾದದ ಪ್ರಕರಣದ ಬಗ್ಗೆ ಅಲಹಾಬಾದ್ ಹೈಕೋರ್ಟ್ 2010ರಲ್ಲಿ ನೀಡಿರುವ ತೀರ್ಪಿನ ವಿರುದ್ಧ 13 ಮೇಲ್ಮನವಿಗಳು ಸುಪ್ರೀಂಕೋರ್ಟ್ ನಲ್ಲಿ ದಾಖಲಾಗಿದ್ದವು. ಈ ಎಲ್ಲಾ ಮೇಲ್ಮನವಿಗಳ ಅಂತಿಮ ವಿಚಾರಣೆಯನ್ನು ಸುಪ್ರೀಂ ವಿಶೇಷ ಪೀಠ ಕೈಗೆತ್ತಿಕೊಂಡಿದೆ.

ಸುನ್ನಿ ವಕ್ಫ್ ಬೋರ್ಡ್ ಪರ ವಕೀಲರಾಗಿ ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್ ವಾದ ಮಂಡಿಸಿದ್ದು, ಈ ಪ್ರಕರಣದ ತುರ್ತು ವಿಚಾರಣೆ ಕೈಗೆತ್ತಿಕೊಂಡ ಬಗ್ಗೆ ಕೋರ್ಟ್ ಕಾರಣ ನೀಡಬೇಕೆಂದು ಹೇಳಿದರು.

ಸುಪ್ರೀಂಕೋರ್ಟ್ ಯಾವಾಗಲೇ ಆಗಲಿ ಅಯೋಧ್ಯೆ ವಿಷಯವನ್ನು ಕೈಗೆತ್ತಿಕೊಂಡಾಗ ಕೋರ್ಟ್ ಹೊರಗೆ ಗಂಭೀರ ಚರ್ಚೆಗಳು ನಡೆಯುತ್ತಿರುತ್ತದೆ. ಆ ನಿಟ್ಟಿನಲ್ಲಿ ಈ ವಿಚಾರಣೆಯನ್ನು 2019ರ ಜುಲೈ 15ರ ಹೊತ್ತಿಗೆ ನಡೆಸಬೇಕೆಂದು ಸಿಬಲ್ ಮನವಿ ಮಾಡಿಕೊಂಡರು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಂತಿಮ ವಿಚಾರಣೆ ಮುಗಿದ ಬಳಿಕ, 2019ರ ಸಾರ್ವತ್ರಿಕ ಚುನಾವಣೆಯ ಫಲಿತಂಶ ಪ್ರಕಟವಾದ ನಂತರವೇ ತೀರ್ಪು ಪ್ರಕಟಿಸಬೇಕೆಂದು ವಿನಂತಿಸಿಕೊಂಡರು.

ಏತನ್ಮಧ್ಯೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಮತ್ತೆ ವಿಚಾರಣೆ ಮುಂದಕ್ಕೆ:

ಬಾಬ್ರಿ ಮಸೀದಿ ಧ್ವಂಸ, ಅಯೋಧ್ಯೆ ಪ್ರಕರಣದ ಬಗ್ಗೆ ಡಿಸೆಂಬರ್ 5ರಿಂದ ಪ್ರತಿದಿನ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿತ್ತು. ಆದರೆ ಇದೀಗ ತ್ರಿಸದಸ್ಯ ಪೀಠ ವಿಚಾರಣೆಯನ್ನು 2018ರ ಫೆ.8ಕ್ಕೆ ಮುಂದೂಡಿದೆ. ಅಲ್ಲದೇ  ಎಲ್ಲಾ ದಾಖಲೆಗಳನ್ನು ಸಲ್ಲಿಸಿ ಎಂದು ಸುಪ್ರೀಂಕೋರ್ಟ್ ವಕೀಲರಿಗೆ ಸೂಚಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.