ಅಯೋಧ್ಯೆ ಪ್ರಕರಣ: ಅರ್ಜಿ ವಿಚಾರಣೆಗೆ ನಿರ್ಧಾರ
Team Udayavani, Feb 16, 2019, 12:30 AM IST
ಹೊಸದಿಲ್ಲಿ: ಅಯೋಧ್ಯೆಯಲ್ಲಿ ವಿವಾದಿತ ರಾಮ ಜನ್ಮಭೂಮಿ ಸಮೀಪದ 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲು 1993ರಲ್ಲಿ ಕೇಂದ್ರ ಸರಕಾರ ಜಾರಿಗೊಳಿಸಿದ ಕಾನೂನಿನ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸಮ್ಮತಿಸಿದೆ.
ಸಂವಿಧಾನದ ಪೀಠದಲ್ಲಿ ವಿಚಾರಣೆಗೆ ಬಾಕಿ ಇರುವ ಮುಖ್ಯ ಪ್ರಕರಣದೊಂದಿಗೆ ಈ ಅರ್ಜಿಯನ್ನೂ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಸೇರಿಸಿದ್ದಾರೆ. ವಿವಾದವಿಲ್ಲದ 67 ಎಕರೆ ಭೂಮಿಯನ್ನು ಮೂಲ ಮಾಲಕರಿಗೆ ಹಸ್ತಾಂತರಿಸುವ ಕುರಿತು ಅನುಮತಿ ನೀಡುವಂತೆ ಕೇಂದ್ರ ಸರಕಾರ ಅರ್ಜಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ವಕೀಲರಾದ ಶಿಶಿರ್ ಚತುರ್ವೇದಿ ಮತ್ತು ಸಂಜಯ್ ಮಿಶ್ರಾ ಈ ಅರ್ಜಿ ಸಲ್ಲಿಸಿದ್ದಾರೆ. ಧಾರ್ಮಿಕ ಉದ್ದೇಶದ ಭೂಮಿಯನ್ನು ಕೇಂದ್ರ ಸರಕಾರ ಸ್ವಾಧೀನಪಡಿಸಿಕೊಳ್ಳಲಾಗದು. ಭೂಮಿಯು ರಾಜ್ಯದ ಅಧೀನಕ್ಕೊಳಪಟ್ಟಿದ್ದು, 1993ರಲ್ಲಿ ರೂಪಿಸಲಾದ ಕಾನೂನು ಸಂವಿಧಾನ ಬಾಹಿರವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.
ಕೇಂದ್ರ ಸರಕಾರದ ಅರ್ಜಿಯ ಬೆನ್ನಲ್ಲೇ ಇಬ್ಬರು ವಕೀಲರಿಂದ ಸುಪ್ರೀಂ ಕೋರ್ಟ್ಗೆ ಮೊರೆ
ಮೂಲ ಪ್ರಕರಣದಲ್ಲಿ ಅರ್ಜಿ ವಿಲೀನಗೊಳಿಸಿದ ಕೋರ್ಟ್
1993ರಲ್ಲಿ ಜಾರಿಗೊಳಿಸಿದ ಕಾನೂನಿನ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಅರ್ಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ