ಇಂದು ಅಯೋಧ್ಯೆ ಪ್ರಕರಣ ವಿಚಾರಣೆ
Team Udayavani, Jul 18, 2019, 5:00 AM IST
ಹೊಸದಿಲ್ಲಿ: ರಾಮಮಂದಿರ ಪ್ರಕರಣದಲ್ಲಿ ನಡೆಯುತ್ತಿರುವ ರಾಜಿ ಸಂಧಾನ ಪ್ರಗತಿಯನ್ನು ಸುಪ್ರೀಂಕೋರ್ಟ್ ಜುಲೈ 18 ರಂದು ಪರಿಶೀಲನೆ ನಡೆಸಲಿದೆ. ಐವರು ನ್ಯಾಯ ಮೂರ್ತಿಗಳನ್ನೊಳಗೊಂಡ ಸಾಂವಿಧಾನಿಕ ಪೀಠವು ಜುಲೈ 11 ರಂದು ರಾಜಿ ಸಂಧಾನ ಸಮಿತಿಯಿಂದ ವರದಿ ಆಗ್ರಹಿಸಿತ್ತು. ಅಷ್ಟೇ ಅಲ್ಲ, ರಾಜಿ ಸಂಧಾನ ಪ್ರಕ್ರಿಯೆ ವಿಫಲವಾದರೆ ಜುಲೈ 25 ರಿಂದ ದೈನಂದಿನ ವಿಚಾರಣೆ ನಡೆಸಲಾಗುತ್ತದೆ ಎಂದು ತಿಳಿಸಿತ್ತು. ಅಯೋಧ್ಯೆ ಪ್ರಕರಣದಲ್ಲಿ ಮೂಲ ದಾವೆದಾರ ಗೋಪಾಲ್ ಸಿಂಗ್ ವಿಶಾರದ ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಈ ನಿರ್ದೇಶನ ಹೊರಡಿಸಿತ್ತು. ಅದರಂತೆ ಗುರವಾರ ರಾಜಿ ಸಂಧಾನ ಸಮಿತಿ ಮುಖ್ಯಸ್ಥ ನಿವೃತ್ತ ನ್ಯಾಯಮೂರ್ತಿ ಎಫ್ಎಂಐ ಖಲೀಫುಲ್ಲಾ ಸುಪ್ರೀಂಕೋರ್ಟ್ಗೆ ಗುರುವಾರ ಹಾಜರಾಗಿ, ಸಂಧಾನ ಪ್ರಕ್ರಿಯೆಯ ಪ್ರಗತಿ ಹಾಗೂ ಸ್ಥಿತಿಗತಿಯನ್ನು ವರದಿ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ