ಅಯೋಧ್ಯೆ ತೀರ್ಪು; ನಾಳೆ ಸುಪ್ರೀಂನಲ್ಲಿ ಮರುಪರಿಶೀಲನಾ ಅರ್ಜಿಯ ಇನ್ ಚೇಂಬರ್ ವಿಚಾರಣೆ, ಏನಿದು?
Team Udayavani, Dec 11, 2019, 7:45 PM IST
ನವದೆಹಲಿ: ಅಯೋಧ್ಯೆ ಭೂ ವಿವಾದದ ಕುರಿತು ನೀಡಿರುವ ತೀರ್ಪಿನ ಬಗ್ಗೆ ಸಲ್ಲಿಕೆಯಾದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ತೆರೆದ ಕೋರ್ಟ್ (ಒಪನ್ ಕೋರ್ಟ್) ನಲ್ಲಿ ನಡೆಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಗುರುವಾರ ಸುಪ್ರೀಂಕೋರ್ಟ್ ನ ಪಂಚಸದಸ್ಯ ಪೀಠ ಇನ್ ಚೇಂಬರ್ (ಆಂತರಿಕ) ವಿಚಾರಣೆ ನಡೆಸಿ ನಿರ್ಧಾರ ಕೈಗೊಳ್ಳಲಿದೆ.
ಒಂದು ವೇಳೆ ತೆರೆದ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವುದಾಗಿ ನಿರ್ಧರಿಸಿದರೆ, ನಂತರ ಎಲ್ಲಾ ಕಕ್ಷಿ(ಪಾರ್ಟಿ)ದಾರರ ವಿಚಾರಣೆ ಮತ್ತೊಮ್ಮೆ ಆಲಿಸಬೇಕಾಗುತ್ತದೆ. ಒಂದು ವೇಳೆ ತೆರೆದ ನ್ಯಾಯಾಲಯದ ವಿರುದ್ಧ ನಿರ್ಧಾರ ಕೈಗೊಂಡರೆ, ನಾಳೆಯೇ ಮರುಪರಿಶೀಲನಾ ಅರ್ಜಿ ವಜಾಗೊಳ್ಳುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದಕ್ಕೆ ಸಂಬಂಧಿಸಿದಂತೆ ನವೆಂಬರ್ 9ರಂದು ಸುಪ್ರೀಂಕೋರ್ಟ್ ನ ಪಂಚಸದಸ್ಯ ಸಾಂವಿಧಾನಿಕ ಪೀಠ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಮಾರು ಏಳು ಮೇಲ್ಮನವಿಗಳು ದಾಖಲಾಗಿವೆ. ಸೋಮವಾರವೂ ಅಯೋಧ್ಯೆ ಪ್ರಕರಣದಲ್ಲಿ ಮರು ಪರಿಶೀಲನೆ ನಡೆಸಬೇಕೆಂದು ಸುಮಾರು 40 ಮಂದಿ ಸಾಮಾಜಿಕ ಕಾರ್ಯಕರ್ತರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಮುಸ್ಲಿಮರಿಗೆ ಅಯೋಧ್ಯೆಯಲ್ಲಿಯೇ ಮಸೀದಿ ನಿರ್ಮಿಸಲು ಐದು ಎಕರೆ ಭೂಮಿಯನ್ನು ನೀಡಬೇಕೆಂಬ ಸುಪ್ರೀಂ ತೀರ್ಪಿನ ವಿರುದ್ಧ ಹಿಂದೂ ಮಹಾಸಭಾ ಕೂಡಾ ಮರುಪರಿಶೀಲನಾ ಅರ್ಜಿಯನ್ನು ದಾಖಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ