ಅಯೋಧ್ಯೆ ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆಗೆ ನಕಾರ
Team Udayavani, Apr 7, 2018, 10:10 AM IST
ಹೊಸದಿಲ್ಲಿ: ಅಯೋಧ್ಯೆಯ ಭೂವಿವಾದ ಪ್ರಕರಣವು ಮುಸ್ಲಿಮರಲ್ಲಿ ಜಾರಿಯಲ್ಲಿರುವ ಬಹು ಪತ್ನಿತ್ವಕ್ಕಿಂತಲೂ ಮುಖ್ಯವಾದದ್ದು. ಹಾಗಾಗಿ, ಇದನ್ನು ಸುಪ್ರೀಂ ಕೋರ್ಟ್ನ ವಿಸ್ತೃತ ಪೀಠಕ್ಕೆ ವರ್ಗಾಯಿಸಬೇಕು. ಹೀಗೆಂದು ಹಿರಿಯ ನ್ಯಾಯವಾದಿ ರಾಜೀವ್ ಧವನ್ ಶುಕ್ರವಾರ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಪೀಠಕ್ಕೆ ಮನವಿ ಮಾಡಿದ್ದಾರೆ. ಆದರೆ, ಇವರ ಕೋರಿಕೆಯನ್ನು ನ್ಯಾಯಪೀಠ ವಜಾ ಮಾಡಿದ್ದು, ಪ್ರಕರಣದ ಇತರ ಅರ್ಜಿದಾರರ ವಾದಗಳನ್ನು ಆಲಿಸಿದ ಬಳಿಕವಷ್ಟೇ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದೆ.
ಮುಸ್ಲಿಂ ಅರ್ಜಿದಾರರ ಪರ ವಾದಿಸಿದ ರಾಜೀವ್ ಧವನ್ ಅವರು, ‘ಅಯೋಧ್ಯೆ ವಿವಾದವು ಬಹು ಪತ್ನಿತ್ವಕ್ಕಿಂತಲೂ ಹೆಚ್ಚು ಮಹತ್ವವುಳ್ಳದ್ದು ಮತ್ತು ಇಡೀ ದೇಶವೇ ಈ ಬಗ್ಗೆ ಉತ್ತರಕ್ಕಾಗಿ ಕಾಯುತ್ತಿದೆ. ಹಾಗಾಗಿ, ವಿಚಾರಣೆಯನ್ನು ವಿಸ್ತೃತ ಪೀಠವೇ ನಡೆಸಬೇಕು’ ಎಂದು ಕೋರಿದರು. ಆದರೆ, ಇದಕ್ಕೆ ನ್ಯಾಯಪೀಠ ಸಮ್ಮತಿಸಲಿಲ್ಲ. ಅಯೋಧ್ಯೆ ವಿವಾದ ಕುರಿತು ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ 14 ಅರ್ಜಿಗಳು ಸುಪ್ರೀಂ ಕೋರ್ಟ್ಗೆ ಸಲ್ಲಿಕೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’