ಅಯೋಧ್ಯೆ ವಿವಾದ ಇತ್ಯರ್ಥಕ್ಕೆ ಸಂಧಾನ ಅಲ್ಲ, ವಿಧೇಯಕ ಅಗತ್ಯ: ಶಿವಸೇನೆ
Team Udayavani, Mar 9, 2019, 9:59 AM IST
ಮುಂಬಯಿ : ‘ರಾಮ ಜನ್ಮಭೂಮಿಯು ಭಾವನಾತ್ಮಕ ವಿಷಯವಾಗಿರುವುದರಿಂದ ಅದನ್ನು ಸಂಧಾನದ ಮೂಲಕ ಬಗೆಹರಿಸಲಾಗದು; ಆದುದರಿಂದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರಕಾರ ವಿಧೇಯಕವನ್ನು ಹೊರಡಿಸಬೇಕು’ ಎಂದು ಶಿವ ಸೇನೆ ಇಂದು ಶನಿವಾರ ಹೇಳಿದೆ.
‘ರಾಮ ಜನ್ಮಭೂಮಿ ವಿವಾದವನ್ನು ಬಗೆಹರಿಸಲು ದೇಶದ ರಾಜಕಾರಣಿಗಳು, ಆಡಳಿತಗಾರರು ಮತ್ತು ಸುಪ್ರೀಂ ಕೋರ್ಟಿಗೆ ಆಸಾಧ್ಯವಾಗಿರುವಾಗ ಮೂವರು ಸಂಧಾನಕಾರರಿಗೆ ಅದು ಹೇಗೆ ಸಾಧ್ಯವಾದೀತು’ ಎಂದು ಶಿವಸೇನೆ ಪ್ರಶ್ನಿಸಿದೆ.
ಬಾಬರಿ ಮಸೀದಿ – ರಾಮಜನ್ಮಭೂಮಿ ಭೂ ಒಡೆತನದ ವಿವಾದವನ್ನು ಸಂಧಾನದ ಮೂಲಕ ಬಗೆ ಹರಿಸುವ ಪ್ರಯತ್ನವಾಗಿ ನಿನ್ನೆಯಷ್ಟೇ ಸುಪ್ರೀಂ ಕೋರ್ಟ್, ಮಾಜಿ ನ್ಯಾಯಾಮೂರ್ತಿ ಎಫ್ಎಂಐ ಖಲೀಫುಲ್ಲ ನೇತೃತ್ವದ ಮೂವರು ಸದಸ್ಯರ ಸಂಧಾನಕಾರರ ಸಮಿತಿಯೊಂದನ್ನು ರಚಿಸಿತ್ತು.
ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ನ ಶ್ರೀ ಶ್ರೀ ರವಿಶಂಕರ್ ಮತ್ತು ಹಿರಿಯ ನ್ಯಾಯವಾದಿ ಶ್ರೀರಾಮ್ ಪಂಚು ಅವರು ಈ ಸಂಧಾನ ಸಮಿತಿಯ ಇನ್ನಿಬ್ಬರು ಸದಸ್ಯರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್