ಅಯೋಧ್ಯೆ ವಿವಾದ : ವಾರದೊಳಗೆ ತಾಜಾ ಸಂಧಾನ ವರದಿ ಸಲ್ಲಿಸಲು ಸುಪ್ರೀಂ ಆದೇಶ
Team Udayavani, Jul 11, 2019, 12:07 PM IST
ಹೊಸದಿಲ್ಲಿ : ರಾಮ ಜನ್ಮಭೂಮಿ ಬಾಬರಿ ಮಸೀದಿ ಅಯೋಧ್ಯೆ ಭೂ ಒಡೆತನ ವಿವಾದವನ್ನು ಬಗೆ ಹರಿಸುವ ನಿಟ್ಟಿನಲ್ಲಿ ಮೂರು ಸದಸ್ಯರ ಸಂಧಾನ ಸಮಿತಿಯ ಕಾರ್ಯ ಪ್ರಗತಿಯ ತಾಜಾ ವರದಿಯನ್ನು ಒಂದು ವಾರದೊಳಗೆ ತನಗೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಇಂದು ಗುರುವಾರ ಆದೇಶಿಸಿದೆ.
ಒಂದೊಮ್ಮೆ ಅಯೋಧ್ಯೆ ಭೂವಿವಾದ ಒಡೆತನ ವಿವಾದವನ್ನು ಸೌಹಾರ್ದಯುತವಾಗಿ ಬಗೆ ಹರಿಸಲು ಅಸಾಧ್ಯವೆಂದು ಗೊತ್ತಾದಲ್ಲಿ ಇದೇ ಜು.25ರಿಂದ ತಾನು ದಿನ ನಿತ್ಯದ ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ಅಯೋಧ್ಯೆ ಭೂ ಒಡೆತನದ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವ ಸಾಧ್ಯತೆಯನ್ನು ಕಂಡುಕೊಳ್ಳಲು ಸುಪ್ರೀಂ ಕೋರ್ಟ್ ನ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠದಿಂದ ನೇಮಕಗೊಂಡಿದ್ದ ಮೂವರು ಸಮಿತಿಯ ಸದಸ್ಯರನ್ನು ಒಳಗೊಂಡ ಸಮಿತಿಯ ಅಧ್ಯಕ್ಷ, ನಿವೃತ್ತ ನ್ಯಾಯಾಧೀಶ ಎಫ್ ಎಂ ಐ ಕಲೀಫುಲ್ಲಾ ಅವರನ್ನು ಸರ್ವೋಚ್ಚ ನ್ಯಾಯಾಲಯ ಇಂದು ಗುರುವಾರ, ಜು.18ರೊಳಗೆ ತಾಜಾ ಕಾರ್ಯ ಪ್ರಗತಿಯ ವರದಿಯನ್ನು ಸಲ್ಲಿಸುವಂತೆ ಕೇಳಿಕೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…