ಕೋರ್ಟ್ ನಿಗಾವಣೆಯ ಅಯೋಧ್ಯೆ ಮಧ್ಯಸ್ಥಿಕೆ: ಆದೇಶ ಕಾದಿರಿಸಿದ ಸುಪ್ರೀಂ
Team Udayavani, Mar 6, 2019, 11:04 AM IST
ಹೊಸದಿಲ್ಲಿ : ಅಯೋಧ್ಯೆ ವಿವಾದವನ್ನು ಪರಿಹರಿಸುವ ನಿಟ್ಟಿನಲ್ಲಿ ಕೋರ್ಟ್ ನಿಗಾವಣೆಯ ಮಧ್ಯಸ್ಥಿಕೆಯನ್ನು ನಡೆಸುವ ಕುರಿತ ಆದೇಶವನ್ನು ಸುಪ್ರೀಂ ಕೋರ್ಟ್ ಕಾದಿರಿಸಿತು.
ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್, ಜಸ್ಟಿಸ್ ಗಳಾದ ಎಸ್ ಎ ಬೋಬಡೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್ ಅಬ್ದುಲ್ನಜೀರ್ ಅವರನ್ನು ಒಳಗೊಂಡ ಐವರು ನ್ಯಾಯಮೂರ್ತಿಗಳ ಪೀಠವು ಇಂದು ಬುಧವಾರ ಅಯೋಧ್ಯೆ ಭೂ ವಿವಾದದ ವಿಚಾರಣೆ ನಡೆಸಿತು.
ದಶಕಗಳಷ್ಟು ಹಳೆಯ ಬಾಬರಿ ಮಸೀದಿ – ರಾಮಜನ್ಮಭೂಮಿಯ ಒಡೆತನಕ್ಕೆ ಸಂಬಂಧಿಸಿದ ವಿವಾದವನ್ನು ಕೋರ್ಟ್ ನಿಗಾವಣೆಯ ಮಧ್ಯಸ್ಥಿಕೆ ಮೂಲಕ ಬಗೆಹರಿಸಲು ಯತ್ಸಿಸುವುದಕ್ಕೆ ಅವಕಾಶ ಕಲ್ಪಿಸುವ ಸಿವಿಲ್ ಪ್ರೊಸೀಜರ್ ಕೋಡ್ ನ ಸೆ.89ನ್ನು ಬಳಸಬಹುದೇ ಎಂಬುದನ್ನು ಐವರು ನ್ಯಾಯಮೂರ್ತಿಗಳ ಸುಪ್ರೀಂ ಪೀಠ ಇಂದು ವಿಶ್ಲೇಷಿಸಿತು.
ಅಯೋಧ್ಯೆ ಭೂವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ನೀಡುವ ಆದೇಶಕ್ಕೆ ತಾವು ಬದ್ಧರಿರುವುದಾಗಿ ಮುಸ್ಲಿಂ ಅರ್ಜಿದಾರರು ಹೇಳಿದರು.