Ayodhya: ಪೇಜಾವರ ಶ್ರೀಗಳ ನೇತೃತ್ವದ ಮಂಡಲೋತ್ಸವ ಇಂದು ಸಂಪನ್ನ


Team Udayavani, Mar 10, 2024, 7:10 AM IST

Ayodhya: ಪೇಜಾವರ ಶ್ರೀಗಳ ನೇತೃತ್ವದ ಮಂಡಲೋತ್ಸವ ಇಂದು ಸಂಪನ್ನ

ಅಯೋಧ್ಯೆ: ಅಯೋಧ್ಯೆಯಲ್ಲಿ ಜ. 22ರಂದು ಬಾಲರಾಮನ ಪ್ರಾಣಪ್ರತಿಷ್ಠೆ ಬಳಿಕ ಆರಂಭವಾದ ಮಂಡಲೋತ್ಸವ ಮಾ. 10ರಂದು ಸಹಸ್ರ ಕಲಶಾಭಿಷೇಕ ದೊಂದಿಗೆ ಸಮಾಪನಗೊಳ್ಳಲಿದೆ.

ಶ್ರೀ ರಾಮಲಲ್ಲಾನ ಪ್ರಾಣಪ್ರತಿಷ್ಠೆಯು ಜ. 22ರಂದು ನೆರವೇರಿತ್ತು. ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿಯೂ ಆಗಿರುವ ಪೇಜಾವರ ಮಠಾ ಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ನೇತೃತ್ವದಲ್ಲಿ ಜ. 23ರಿಂದ ಮಂಡಲೋತ್ಸವ ಆರಂಭವಾಗಿತ್ತು. ಮಾ. 10ರಂದು 48 ದಿನಗಳ ಮಂಡಲೋತ್ಸವ ಸಂಪನ್ನಗೊಳ್ಳಲಿದೆ. ರವಿವಾರ ನಡೆಯುವ ಸಹಸ್ರ ಕಲಶಾಭಿಷೇಕದೊಂದಿಗೆ ಮಂಡ ಲೋತ್ಸವ ಪೂರ್ಣಗೊಳ್ಳಲಿದ್ದು, ಈ ಮೂಲಕ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆಗೆ ಸಂಬಂಧಿಸಿದ ಧಾರ್ಮಿಕ ವಿಧಿ, ವಿಧಾನಗಳು ಸಂಪೂರ್ಣವಾಗಲಿವೆ.

ಈ ಬಗ್ಗೆ “ಉದಯವಾಣಿ’ಯೊಂದಿಗೆ ಮಾತನಾಡಿದ ಶ್ರೀಪಾದರು, ಸಮಾಜದಲ್ಲಿ ಸೇವಾ ಕಾರ್ಯ ಮಾಡಿಕೊಂಡು ಬರುತ್ತಿರುವ ದಾನಿಗಳು ಸೇವೆಯ ರೂಪದಲ್ಲಿ ಶ್ರೀ ರಾಮದೇವರಿಗೆ ರಜತ ಕಲಶ ಅಭಿಷೇಕವನ್ನು ಮಂಡಲೋತ್ಸವ ದಲ್ಲಿ ಮಾಡಿಸಿದ್ದಾರೆ.

ಮಾ. 10ರಂದು 48ನೇ ದಿನ. ಈ ಸಹಸ್ರ ಕಲಶಾಭಿಷೇಕದೊಂದಿಗೆ ಶ್ರೀ ದೇವರ ಪ್ರಾಣಪ್ರತಿಷ್ಠೆಗೆ ಪೂರಕವಾದ ಧಾರ್ಮಿಕ ವಿಧಿ ವಿಧಾನಗಳು ಸಂಪನ್ನಗೊಳ್ಳಲಿವೆ. ಇದಾದ ಬಳಿಕ ಪ್ರಾಣಪ್ರತಿಷ್ಠೆಗೆ ಸಂಬಂಧಿಸಿದ ಧಾರ್ಮಿಕ ಕಾರ್ಯಕ್ರಮಗಳು ಇರುವುದಿಲ್ಲ. ದೊಡ್ಡ ಹೋಮ, ಹವನ ಯಾವುದೂ ಸದ್ಯಕ್ಕೆ ಇರದು. ಉಳಿದಂತೆ ನಿತ್ಯಪೂಜೆಯೊಂದಿಗೆ ಕಾಲ ಕಾಲಕ್ಕೆ ನಡೆಯುವ ಉತ್ಸವಗಳು ಎಂದಿನಂತೆ ಇರಲಿವೆ ಎಂದು ಮಾಹಿತಿ ನೀಡಿದರು.

ಕಲಶಾಭಿಷೇಕದ ಅನಂತರ ರಜತ ಕಲಶ ಸಹಿತವಾಗಿ ಪ್ರಸಾದವನ್ನು ದಾನಿಗಳಿಗೆ ನೀಡಲಾಗುತ್ತದೆ ಎಂದು ತಿಳಿಸಿದ ಅವರು, ಮಂಡಲೋತ್ಸವದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ನ್ಯಾಯಾಧೀಶರು, ತಾರೆಯರ ಸಹಿತ ದೇಶದ ವಿವಿಧ ಭಾಗದ ಕ್ಷೇತ್ರದ ಹಲವು ಗಣ್ಯರು ಪಾಲ್ಗೊಂಡು ರಜತ ಕಲಶ ಸೇವೆಯನ್ನು ಒಪ್ಪಿಸಿದ್ದಾರೆ. ಮಂಡಲೋತ್ಸವದಲ್ಲಿ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ ಸಹಿತ ದೇಶದ ವಿವಿಧ ಭಾಗದ ವಿದ್ಯಾಪೀಠಗಳ ವಿದ್ವಾಂಸರು ಪಾಲ್ಗೊಂಡು ನಾನಾ ಹೋಮ, ಹವನಾದಿಗಳನ್ನು ನಡೆಸಿದ್ದಾರೆ. ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ವಾಂಸರು ಪಾಲ್ಗೊಂಡಿರುವುದು ವಿಶೇಷ ಎಂದರು.

ಮಂಡಲೋತ್ಸವದ ಹಿನ್ನೆಲೆಯಲ್ಲಿ ನಿತ್ಯವೂ ಅಯೋಧ್ಯೆಯಲ್ಲಿ ಪಲ್ಲಕ್ಕಿ ಉತ್ಸವ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿವೆ. ರಾಜ್ಯದ ಹಲವು ಪ್ರಮುಖರು ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಒಟ್ಟಾರೆಯಾಗಿ ಅಯೋಧ್ಯೆಯಲ್ಲಿ ಶ್ರೀ ರಾಮ ದೇವರ ಪ್ರಾಣಪ್ರತಿಷ್ಠೆಯ ಅನಂತರದಲ್ಲಿ ನಡೆಯುತ್ತ ಬಂದ ಮಂಡಲೋತ್ಸವವು ಹಬ್ಬದ ವಾತಾವರಣಕ್ಕೆ ಇನ್ನಷ್ಟು ಮೆರುಗು ತುಂಬಿದೆ ಎಂದು ವಿವರಿಸಿದರು.

ಟಾಪ್ ನ್ಯೂಸ್

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.