ಅಯೋಧ್ಯೆ: ಯಾವುದೇ ಹೇಳಿಕೆ ನೀಡದಂತೆ ಸಚಿವರಿಗೆ ಆದೇಶ
Team Udayavani, Nov 4, 2019, 1:02 AM IST
ಲಕ್ನೋ: ಅಯೋಧ್ಯೆ ಭೂವಿವಾದದ ತೀರ್ಪಿಗೆ ದಿನಗಣನೆ ಆರಂಭವಾಗಿರುವಂತೆಯೇ, ಪ್ರಕರಣದ ಕುರಿತು ಯಾವುದೇ ಹೇಳಿಕೆ ನೀಡದಂತೆ ತಮ್ಮ ಸಚಿವರಿಗೆ ಉತ್ತರಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.
ತೀರ್ಪು ಯಾರ ಪರವೇ ಬಂದರೂ, ಯಾವುದೇ ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದು, ಅಲ್ಲದೆ ಇದು ಬಹಳ ಸೂಕ್ಷ್ಮ ವಿಚಾರವಾದ ಕಾರಣ ಸಂಭ್ರಮಾ ಚರಣೆಯನ್ನೂ ಮಾಡಬಾರದು ಎಂದು ತಮ್ಮ ಸಂಪುಟದ ಸಚಿವರಿಗೆ ಸಿಎಂಯೋಗಿ ಖಡಕ್ ಸೂಚನೆ ರವಾನಿಸಿದ್ದಾರೆ.
ವರದಿ ತಿರಸ್ಕರಿಸಿದ್ದ ರಾವ್: ಈ ನಡುವೆ, ಅಂದಿನ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರಿಗೆ ರಾಜಕೀಯ ಇಚ್ಛಾಶಕ್ತಿ ಇದ್ದಿದ್ದರೆ, ಬಾಬರಿ ಮಸೀದಿಯನ್ನು ಉಳಿಸ ಬಹುದಿತ್ತು ಎಂದು ಆಗ ಕೇಂದ್ರದ ಗೃಹ ಕಾರ್ಯದರ್ಶಿಯಾಗಿದ್ದ ಮಾಧವ್ ಗೋಡೊºಳೆ ಹೇಳಿಕೊಂಡಿದ್ದಾರೆ. ಬಾಬರಿ ಮಸೀದಿ ಧ್ವಂಸಕ್ಕೂ ಮುನ್ನ ಗೃಹ ಸಚಿವಾಲಯವು ಒಂದು ಸಮಗ್ರವಾದ ತುರ್ತು ಯೋಜನೆ ರೂಪಿಸಿ, ಅದರ ವರದಿಯನ್ನು ಪ್ರಧಾನಿ ಪಿವಿಎನ್ಗೆ ಸಲ್ಲಿಸಿತ್ತು.
ಆದರೆ, ಅದನ್ನು ಅವರು ತಿರಸ್ಕರಿ ಸಿದರು. ಇಲ್ಲದಿದ್ದರೆ ಈ ರಾಮಾಯಣದಲ್ಲಿನ ಮಹಾಭಾರತವನ್ನು ತಡೆಯ ಬಹುದಿತ್ತು ಎಂದು ಗೋಡೊºಳೆ ಅವರು ಬರೆದಿರುವ ಹೊಸ ಕೃತಿಯಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ