ಅಯೋಧ್ಯೆ: ಜನಜಾಗೃತಿಗೆ ಧರ್ಮಗುರುಗಳ ಸಂಕಲ್ಪ

ದೋವಲ್‌ ಅಧಿಕೃತ ನಿವಾಸದಲ್ಲಿ ನಡೆದ ಸಭೆಯಲ್ಲಿ ಪೇಜಾವರ ಶ್ರೀ, ನಿರ್ಮಲಾನಂದನಾಥ ಶ್ರೀ ಭಾಗಿ

Team Udayavani, Nov 11, 2019, 5:30 AM IST

1-1-10111-PTI11_10_2019_000080B

ಹೊಸದಿಲ್ಲಿ: ಅಯೋಧ್ಯೆ ಜಮೀನು ಮಾಲಕತ್ವಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ಅನಂತರ ಜನರಲ್ಲಿ ಜನ ಜಾಗೃತಿ ಮೂಡಿಸಿ ದೇಶದಲ್ಲಿ ಶಾಂತಿ, ಸೌಹಾರ್ದ ಕಾಪಾಡಲು ಹಿಂದೂ ಮತ್ತು ಮುಸ್ಲಿಂ ಧರ್ಮಗುರುಗಳು ರವಿವಾರ ಸಂಕಲ್ಪ ಮಾಡಿದರು.

ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್‌ ದೋವಲ್‌ ಅವರು ಭಾರತದ ವಿವಿಧ ಮಠಾಧೀಶರ ಹಾಗೂ ಧಾರ್ಮಿಕ ಮುಖಂಡರ ಜತೆಗೆ ರವಿವಾರ ದಿಲ್ಲಿಯಲ್ಲಿನ ತನ್ನ ನಿವಾಸದಲ್ಲಿ ಸಭೆ ನಡೆಸಿದರು. ಉಡುಪಿ ಪೇಜಾವರ ಮಠದ ಹಿರಿಯ ಯತಿ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ, ಯೋಗಗುರು ಬಾಬಾ ರಾಮದೇವ್‌ ಹಾಗೂ ಮುಸ್ಲಿಂ ಧರ್ಮದ ಪ್ರಮುಖರು ಭಾಗವಹಿಸಿದ್ದರು.

ಸಭೆಯಲ್ಲಿ ಪ್ರಮುಖವಾಗಿ, ರಾಮ ಜನ್ಮಭೂಮಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನ ಅನಂತರ, ಮುಂದೆ ಕೈಗೊಳ್ಳ ಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸ ಲಾಯಿತು. ದೇಶದ ಒಳಗೆ ಹಾಗೂ ಹೊರಗೆ ಇರುವ ಕೆಲವು ರಾಷ್ಟ್ರವಿರೋಧಿ ಶಕ್ತಿಗಳು ಭಾರತೀಯ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಆತಂಕ ಎದ್ದಿದ್ದು, ಆ ಹಿನ್ನೆಲೆಯಲ್ಲಿ ಕೋಮು ಸೌಹಾರ್ದ, ಶಾಂತಿ, ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಧಾರ್ಮಿಕ ಮುಖಂಡರ ನೆರವನ್ನು ಕೋರಲಾಯಿತು. ಡಿಜಿಟಲ್‌ ಮಾಧ್ಯಮಗಳ ಮೂಲಕ ಸಮಾಜವನ್ನು ಒಡೆಯುವಂಥ ಕೆಲಸಗಳು ನಡೆಯಬಹುದು ಎಂಬ ಬಗ್ಗೆ ಮಠಾಧೀಶರ ಗಮನ ಸೆಳೆದ ದೋವಲ್‌, ಅಂಥ ಯಾವುದೇ ಪ್ರಯತ್ನಗಳು ಸಫ‌ಲವಾಗದಂತೆ ಸಮಾಜದಲ್ಲಿ ಜನಜಾಗೃತಿ ಮೂಡಿಸಬೇಕು ಎಂದು ಮಠಾಧೀಶರಲ್ಲಿ ವಿನಂತಿಸಿಕೊಂಡರು ಎಂದು ಸಭೆಯ ಅನಂತರ ಹೊರಡಿಸಲಾದ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ದೋವಲ್‌ ಮನವಿಗೆ ಸ್ಪಂದಿಸಿದ ಧಾರ್ಮಿಕ ಮುಖಂಡರು, ತಮ್ಮ ಅನುಯಾಯಿಗಳ ಮೂಲಕ ಸಮಾಜದಲ್ಲಿ ಜನಜಾಗೃತಿಯನ್ನು ಮೂಡಿಸಿ, ಯಾವುದೇ ಬಾಹ್ಯಶಕ್ತಿಗಳಿಂದ ಸಮಾಜ ಒಡೆಯದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು ಎಂದು ಪ್ರಕಟನೆಯಲ್ಲಿ ಹೇಳಲಾಗಿದೆ.

ವಿವಿಧ ಮತ ಧರ್ಮಗಳಲ್ಲಿ ಭಿನ್ನತೆ ಇದ್ದರೂ ಸಾಮ್ಯಗಳೂ ಇವೆ. ನಾವು ಪರಧರ್ಮ ಸಹಿಷ್ಣುಗಳು. ಅಯೋಧ್ಯೆ ಕುರಿತು ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪನ್ನು ಎಲ್ಲರೂ ಗೌರವಿಸಿದ್ದಾರೆ. ಇದು ವಿಶ್ವ ಕಲ್ಯಾಣ ಮತ್ತು ರಾಷ್ಟ್ರದ ಪ್ರಗತಿಗೆ ಕಾರಣವಾಗಬೇಕು. ಮುಂದಿನ ಎಲ್ಲ ಕೆಲಸಗಳಿಗೆ ಸಮನ್ವಯ ಸಮಿತಿ ರಚನೆಯಾಗಬೇಕು
– ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ, ಪೇಜಾವರ ಮಠ

ಟಾಪ್ ನ್ಯೂಸ್

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.