ಅಯೋಧ್ಯೆ ತೀರ್ಪು ಶನಿವಾರವೇ ಯಾಕೆ ?


Team Udayavani, Nov 9, 2019, 2:50 PM IST

ayodhya

ನವದೆಹಲಿ: ಅಯ್ಯೋಧ್ಯೆಯಲ್ಲಿನ ರಾಮ ಜನ್ಮಭೂಮಿ- ಬಾಬರಿ ಮಸೀದಿ ಸಂಬಂಧಿಸಿ ಸುವರ್ಣ ವರ್ಷದ ವಿವಾದಕ್ಕೆ ತೆರೆ ಬಿದ್ದಿದ್ದು, ಶನಿವಾರ ತೀರ್ಪು ಘೋಷಣೆಯಾಗಿದೆ.

ಆದರೆ ಶನಿವಾರವೇ ಯಾಕೆ ಎಂಬ ಪ್ರಶ್ನೆ ಇದೀಗ ಟ್ರೆಂಡ್‌ ಸೃಷ್ಟಿಸುತ್ತಿದ್ದು, ಇದರ ಹಿಂದಿರುವ ಕಾರಣ ಏನು ಎಂಬುದರ ಮಾಹಿತಿ ಇಲ್ಲಿದೆ.

ನವೆಂಬರ್‌ ಮಧ್ಯಾಂತರದಲ್ಲಿ ಅಯೋಧ್ಯೆ ವಿವಾದಕ್ಕೆ ಸಂಬಂಧಪಟ್ಟಂತೆ ತೀರ್ಪು ಹೊರಬರಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಇದ್ದಕ್ಕಿದ್ದಂತೆ ಶುಕ್ರವಾರ ರಾತ್ರಿ ಅಯೋಧ್ಯೆ ಪ್ರಕರಣದ ತೀರ್ಪನ್ನು ಶನಿವಾರ ಬೆಳಿಗ್ಗೆ 10.30ಕ್ಕೆ ಪ್ರಕಟಿಸಲಾಗುವುದು ಎಂದು ಘೋಷಿಸಲಾಯಿತು. ಈ ದಿಢೀರ್‌ ಬೆಳವಣಿಗೆ ದೇಶದೆಲ್ಲಡೆ ಸಂಚಲನ ಮೂಡಿಸಿದಲ್ಲದೇ ಕಸಿವಿಸಿ ವಾತಾವರಣವು ಸೃಷ್ಟಿಯಾಗಿತ್ತು. ಆದರೆ ಈ ನಿರ್ಧಾರ ಸಾಮಾಜಿಕ ವಿರೋಧಿ ಶಕ್ತಿಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಕಾರ್ಯತಂತ್ರದ ನಿಲುವಾಗಿದ್ದು, ಯಾವುದೇ ರೀತಿಯಲ್ಲೂ ಧಾರ್ಮಿಕ ಸೂಕ್ಷ್ಮ ಭಾವನೆಗಳಿಗೆ ದಕ್ಕೆ ಉಂಟಾಗದಂತೆ, ಗಲಭೆ ,ಪಿತೂರಿಗೆ ಅವಕಾಶ ನೀಡದಂತೆ ನಿರ್ವಹಿಸುವುದು ಇದರ ಉದ್ದೇಶವಾಗಿತ್ತು.

ಅಯೋಧ್ಯೆಯಲ್ಲಿನ 2.77 ಎಕರೆ ವಿವಾದಿತ ಭೂಮಿಯನ್ನು ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾಡ ಹಾಗೂ ರಾಮ್‌ಲಲ್ಲಾ ನಡುವೆ ಸಮಾನವಾಗಿ ಹಂಚಿಕೆ ಮಾಡಲು ಅಲಹಬಾದ್‌ ಹೈಕೋರ್ಟ್‌ ಆದೇಶಿಸಿತ್ತು. ಆದರೆ ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದ್ದು, ಆಗಸ್ಟ್ 6ರಿಂದ ಸುಪ್ರೀಂಕೋರ್ಟ್‌ ನಿತ್ಯ ವಿಚಾರಣೆ ನಡೆಸಿ 40 ದಿನಗಳ ಬಳಿಕ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ನ್ಯಾಯಪೀಠ ಇಂದು ತೀರ್ಪು ನೀಡಿದೆ.

ಮರುಪರಿಶೀಲನೆಗೆ ಅನುಕೂಲವಾಗುವಂತೆ
ಸಾಮಾನ್ಯವಾಗಿ ನ್ಯಾಯಾಲಯವು ತೀರ್ಪನ್ನು ಪ್ರಕಟಿಸಿದರೆ, ಮರುದಿನ ಫಿರ್ಯಾದಿ ಅಥವಾ ಪ್ರತಿವಾದಿಗಳಲ್ಲಿ ಒಬ್ಬರು ನಿರ್ಧಾರವನ್ನು ಮತ್ತೂಮ್ಮೆ ಪರಿಶೀಲಿಸುವಂತೆ ನ್ಯಾಯಾಲಯವನ್ನು ಕೋರುತ್ತಾರೆ. ಈ ಪ್ರಕ್ರಿಯೆಯು ಒಂದು ಅಥವಾ ಎರಡು ದಿನ ತೆಗೆದುಕೊಳ್ಳಬಹುದು. ಈ ನಿಟ್ಟಿನಲ್ಲಿ ಮರುವಿಚಾರಣೆಗೆ ಅನೂಕೂಲವಾಗಲಿ ಎಂದು ನಿರೀಕ್ಷೆ ಮಾಡಿದ ಅವಧಿಗಿಂತ ಮೊದಲ್ಲೇ ತೀರ್ಪುನ್ನು ನೀಡಲಾಗಿದೆ.

ಗೊಗೊಯ್‌ ನಿವೃತ್ತಿಯೂ ಒಂದು ಕಾರಣ
ನ್ಯಾಯಮೂರ್ತಿ ಗೊಗೊಯ್‌ ಅವರು ನವೆಂಬರ್‌ 17ರಂದು ನಿವೃತ್ತರಾಗಲಿದ್ದು, ನ್ಯಾಯಾಲಯವು ಯಾವುದೇ ದಿನ ವಿಚಾರಣೆ ನಡೆಸಿ, ಪ್ರಕರಣವನ್ನು ಅದಕ್ಕೆ ಸಂಬಂಧಿಸಿದ ತೀರ್ಪು ಸಹ ನೀಡಬಹುದಿತ್ತು. ಆದರೆ, ಪ್ರಮುಖವಾದ ಪ್ರಕರಣದ ತೀರ್ಪನ್ನು ರಜಾ ದಿನಗಳಲ್ಲಿ ಘೋಷಿಸಲು ಆಗುವುದಿಲ್ಲ. ನ್ಯಾಯಾಧೀಶರು ನಿವೃತ್ತರಾಗುವ ಒಂದು ದಿನ ಮೊದಲು ತೀರ್ಪುಗಳನ್ನು ನೀಡುವಂತಿಲ್ಲ. ಹೀಗಾಗಿ, ನವೆಂಬರ್‌ 16 ಕೂಡ ಶನಿವಾರ ಬಂದಿದ್ದು. ಇದಲ್ಲದೇ ನ್ಯಾಯಮೂರ್ತಿ ಗೊಗೊಯ್‌ ಅವರ ಕೊನೆಯ ಕೆಲಸದ ದಿನ ನವೆಂಬರ್‌ 15 ಆಗಿದೆ. ಈ ಹಿನ್ನಲೆ ಅಯೋಧ್ಯೆ ಪ್ರಕರಣದ ತೀರ್ಪನ್ನು ನವೆಂಬರ್‌ 14 ಅಥವಾ ನವೆಂಬರ್‌ 15 ಕ್ಕಿಂತ ಮುನ್ನವೇ ಘೋಷಿಸಿದ್ದು, ನ್ಯಾಯಮೂರ್ತಿ ಗೊಗೊಯಿ ನಿವೃತ್ತಿ ಮೊದಲು ಪ್ರಕರಣ ಇತ್ಯರ್ಥವಾಗಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.