ಬಾಬರಿ-ರಾಮ ಮಂದಿರ: ನನ್ನದು ಶಾಂತಿದೂತನ ಪಾತ್ರ: ಶ್ರೀ ಶ್ರೀ
Team Udayavani, Oct 28, 2017, 3:37 PM IST
ಹೊಸದಿಲ್ಲಿ : ಬಾಬರಿ ಮಸೀದಿ – ರಾಮ ಮಂದಿರ ವಿವಾದದಲ್ಲಿ ತಾನು ಶಾಂತಿದೂತನ ಪಾತ್ರವಹಿಸುತ್ತಿರುವುದಾಗಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಗುರು ಶ್ರೀ ಶ್ರೀ ರವಿಶಂಕರ್ ಹೇಳಿದ್ದಾರೆ.
ಬಾಬರಿ ಮಸೀದಿ – ರಾಮ ಮಂದಿರ ವಿವಾದವನ್ನು ಕೋರ್ಟ್ ಹೊರಗೆ ಬಗೆಹರಿಸುವ ಪ್ರಸ್ತಾವವನ್ನು ಶ್ರೀ ಶ್ರೀ ಉಭಯ ಕಡೆಯವರ ಮುಂದೆ ಇಟ್ಟಿದ್ದಾರೆ ಮತ್ತು ಆ ನಿಟ್ಟಿನಲ್ಲಿ ಪ್ರಯತ್ನವನ್ನು ಆರಂಭಿಸಿದ್ದಾರೆ ಎಂಬ ವದಂತಿಗಳ ನಡುವೆ ಶ್ರೀ ಶ್ರೀ ರವಿಶಂಕರ್ ತಾನು ಶಾಂತಿದೂತನ ಪಾತ್ರ ವಹಿಸುತ್ತಿರುವುದಾಗಿ ಸ್ಪಷ್ಟಪಡಿಸಿದರು. ಹಿಂದು – ಮುಸ್ಲಿಂ ಸಹೋದರತೆಗೆ ಅವರು ಕರೆ ನೀಡಿದರು.
2003-04ರಲ್ಲೇ ಈ ನಿಟ್ಟಿನಲ್ಲಿ ಪ್ರಯತ್ನಿಸಲಾಗಿತ್ತು. ಆದರೆ ಇಂದು ಅಂದಿಗಿಂತಲೂ ಹೆಚ್ಚು ಧನಾತ್ಮಕ ವಾತಾವರಣವಿದೆ. ಅಂತೆಯೇ ನಾನೀಗ ಈ ನಿಟ್ಟಿನಲ್ಲಿ ಶಾಂತಿದೂತನ ಪಾತ್ರ ವಹಿಸಲು ಮುಂದಾಗಿದ್ದೇನೆ. ಇದು ಸಂಪೂರ್ಣವಾಗಿ ರಾಜಕಾರಣೇತರ ಯತ್ನವಾಗಿದೆ ಎಂದು ಶ್ರೀ ಶ್ರೀ ರವಿಶಂಕರ್ ಹೇಳಿದರು.
ಡಿಸೆಂಬರ್ 5ರಿಂದ ಸುಪ್ರೀಂ ಕೋರ್ಟ್ ಐತಿಹಾಸಿಕ ಬಾಬರಿ ಮಸೀದಿ ಮತ್ತು ರಾಮ ಮಂದಿರ ಪ್ರಕರಣದ ಅಂತಿಮ ವಿಚಾರಣೆಯನ್ನು ಆರಂಭಿಸಲಿದೆ. ಡಿ.6 ಬಾಬರಿ ಮಸೀದಿ ಧ್ವಂಸದ 25ನೇ ವರ್ಷವಾಗಿದೆ.
ಹಿಂದುಗಳು ಮತ್ತು ಮುಸ್ಲಿಮರು ಪರಸ್ಪರರ ನಡುವಿನ ಹಗೆತನವನ್ನು ಬದಿಗಿರಿಸಿ ಶಾಂತಿ ಸಾಧನೆಗೆ ಮುಂದಾಗಬೇಕು ಎಂದು ಶ್ರೀ ಶ್ರೀ ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
MUST WATCH
ಹೊಸ ಸೇರ್ಪಡೆ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್