ಬಾಬರಿ ಮಸೀದಿ ಧ್ವಂಸ ಪ್ರಕರಣ: ಆಡ್ವಾಣಿಗೆ ಬಂತೇ ಸಂಕಷ್ಟ?


Team Udayavani, Mar 7, 2017, 3:45 AM IST

LK-800–A.jpg

ನವದೆಹಲಿ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಆಡ್ವಾಣಿ ಅವರಿಗೆ ಸಂಕಷ್ಟ ಎದುರಾಗಲಿದೆಯೇ? ಆಡ್ವಾಣಿ, ಮುರಳಿ ಮನೋಹರ್‌ ಜೋಷಿ, ಉಮಾಭಾರತಿ ಸೇರಿದಂತೆ 13 ಮಂದಿ ಮತ್ತೂಮ್ಮೆ ವಿಚಾರಣೆ ಎದುರಿಸಬೇಕಾಗಿದೆಯೇ?

ಇಂತಹದೊಂದು ಸುಳಿವನ್ನು ಸುಪ್ರೀಂ ಕೋರ್ಟ್‌ ನೀಡಿದೆ. ಮಸೀದಿ ಧ್ವಂಸ ಪ್ರಕರಣದಲ್ಲಿ ಆಡ್ವಾಣಿ ಹಾಗೂ ಇತರರ ವಿರುದ್ಧದ ಆರೋಪಗಳನ್ನು ತಾಂತ್ರಿಕ ಕಾರಣಗಳಿಗಾಗಿ ಕೈಬಿಟ್ಟಿರುವುದನ್ನು ಒಪ್ಪಲಾಗದು ಎಂದು ನ್ಯಾ. ಪಿ.ಸಿ.ಘೋಷ್‌ ಮತ್ತು ನ್ಯಾ.ಆರ್‌.ಎಸ್‌. ನಾರಿಮನ್‌ ಅವನ್ನೊಳಗೊಂಡ ಪೀಠ ಅಭಿಪ್ರಾಯಪಟ್ಟಿದೆ. ಜತೆಗೆ, ಬಾಬರಿ ಮಸೀದಿ ಧ್ವಂಸಕ್ಕೆ ಸಂಚು ರೂಪಿಸಿದ ಆರೋಪ ಎದುರಿಸುತ್ತಿರುವ ಆಡ್ವಾಣಿ (89) ಹಾಗೂ ಇತರರ ವಿರುದ್ಧ ವಿಚಾರಣೆ ನಡೆಸಬೇಕೇ, ಬೇಡವೇ ಎಂಬ ಕುರಿತ ಆದೇಶವನ್ನು ಮಾ.22ರಂದು ಹೊರಡಿಸುವುದಾಗಿ ಹೇಳಿದೆ.

ಸುಪ್ರೀಂ ಮೆಟ್ಟಿಲೇರಿದ್ದ ಸಿಬಿಐ: 1992ರ ಡಿ.6ರಂದು ನಡೆದ ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸಕ್ಕೆ ಕ್ರಿಮಿನಲ್‌ ಸಂಚು ರೂಪಿಸಿದ ಆರೋಪ ಹೊತ್ತಿದ್ದ ಆಡ್ವಾಣಿ, ಮುರಳಿ ಮನೋಹರ್‌ ಜೋಷಿ, ಉಮಾಭಾರತಿ, ವಿನಯ್‌ ಕಟಿಯಾರ್‌, ಕಲ್ಯಾಣ್‌ ಸಿಂಗ್‌ ಹಾಗೂ ಇತರರನ್ನು ರಾಯ್‌ಬರೇಲಿಯ ಕೆಳಹಂತದ ನ್ಯಾಯಾಲಯವು ಖುಲಾಸೆಗೊಳಿಸಿತ್ತು. ಈ ತೀರ್ಪನ್ನು ನಂತರ 2010ರಲ್ಲಿ ಅಲಹಾಬಾದ್‌ ಹೈಕೋರ್ಟ್‌ ಕೂಡ ಎತ್ತಿಹಿಡಿದಿತ್ತು. ಅದನ್ನು ಪ್ರಶ್ನಿಸಿ ಸಿಬಿಐ 2011ರ ಫೆ.18ರಂದು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಹಾಜಿ ಮಹಬೂಬ್‌ ಅಹ್ಮದ್‌(ದಿವಂಗತ) ಎಂಬವರೂ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದರು. ಕರಸೇವಕರ ವಿರುದ್ಧ ದಾಖಲಾಗಿರುವ ಮಸೀದಿ ಧ್ವಂಸದ ಪ್ರಮುಖ ಪ್ರಕರಣವು ಲಖನೌ ವಿಚಾರಣಾ ನ್ಯಾಯಾಲಯದಲ್ಲಿ ಇನ್ನೂ ವಿಚಾರಣಾ ಹಂತದಲ್ಲಿದೆ.

ಮರು ವಿಚಾರಣೆಯ ಸುಳಿವು: ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, “ಆಡ್ವಾಣಿ ಮತ್ತಿತರರ ವಿರುದ್ಧದ ಕ್ರಿಮಿನಲ್‌ ಸಂಚು ಆರೋಪ ಕೈಬಿಟ್ಟಿರುವುದನ್ನು ಒಪ್ಪಲಾಗದು. ಸಂಚು ಮಾಡಿದ ಆರೋಪವನ್ನು ಸೇರಿಸಿ 9 ಮಂದಿಯ ವಿರುದ್ಧ ಪೂರಕ ಆರೋಪಪಟ್ಟಿ ಸಲ್ಲಿಸಲು ನಾವು ನಿಮಗೆ(ಸಿಬಿಐ) ಅವಕಾಶ ಕಲ್ಪಿಸುತ್ತೇವೆ. ಅಲ್ಲದೆ, ಬಾಬರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಜಂಟಿಯಾಗಿ ವಿಚಾರಣೆ ನಡೆಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸುತ್ತೇವೆ,’ ಎಂದಿದೆ. ಸುಪ್ರೀಂನ ಈ ಆದೇಶದಿಂದಾಗಿ, ಲಕ್ನೋ ಮತ್ತು ರಾಯ್‌ಬರೇಲಿಯ ನ್ಯಾಯಾಲಯಗಳಲ್ಲಿರುವ ಪ್ರತ್ಯೇಕ ಪ್ರಕರಣಗಳನ್ನು ಯಾವುದಾದರೂ ಒಂದೇ ವಿಚಾರಣಾ ನ್ಯಾಯಾಲಯ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.

ವಕೀಲರ ಆಕ್ಷೇಪ: ಸುಪ್ರೀಂ ಕೋರ್ಟ್‌ನ ಈ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಆಡ್ವಾಣಿ ಪರ ವಕೀಲರು, “ಪ್ರಕರಣದಲ್ಲಿ ಸಂಚು ಆರೋಪವನ್ನು ಮರುಸೇರ್ಪಡೆಗೊಳಿಸಿದರೆ, ರಾಯ್‌ಬರೇಲಿಯ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದ ಎಲ್ಲ 183 ಮಂದಿ ಸಾಕ್ಷಿಗಳನ್ನೂ ನಾವು ಮತ್ತೆ ಹಾಜರುಪಡಿಸಬೇಕಾಗುತ್ತದೆ,’ ಎಂದರು. ಆದರೆ, ಇವರ ವಾದವನ್ನು ಸುಪ್ರೀಂ ಕೋರ್ಟ್‌ ಒಪ್ಪಿಕೊಳ್ಳಲಿಲ್ಲ.

ಬಾಬರಿ ಮಸೀದಿ ಧ್ವಂಸ ವಿಚಾರದಲ್ಲಿ ಎರಡು ರೀತಿಯ ಪ್ರಕರಣಗಳು ದಾಖಲಾಗಿವೆ. ಒಂದು ರಾಮಕಥಾ ಕುಂಜ್‌ನಲ್ಲಿದ್ದ ಆಡ್ವಾಣಿ ಹಾಗೂ ಇತರೆ ಬಿಜೆಪಿ ನಾಯಕರ ವಿರುದ್ಧವಾದರೆ, ಮತ್ತೂಂದು ಮಸೀದಿಯನ್ನು ನೆಲಸಮಗೊಳಿಸಿದ ಲಕ್ಷಾಂತರ ಕರಸೇವಕರ ವಿರುದ್ಧ. ಈ ಪೈಕಿ ಶಿವಸೇನೆ ಸ್ಥಾಪಕ ಬಾಳಠಾಕ್ರೆ ಅವರೂ ಆರೋಪಿ ಸ್ಥಾನದಲ್ಲಿದ್ದರು. ಅವರ ನಿಧನದ ನಂತರ ಆರೋಪಿಗಳ ಪಟ್ಟಿಯಿಂದ ಅವರ ಹೆಸರನ್ನು ಕೈಬಿಡಲಾಗಿತ್ತು.

ಏನಿದು ಪ್ರಕರಣ?
ಅಯೋಧ್ಯೆಯಲ್ಲಿರುವ 16ನೇ ಶತಮಾನದ, ಮೊಘಲರ ಆಳ್ವಿಕೆ ಕಾಲದ ಪುರಾತನ ಮಸೀದಿಯನ್ನು ವಿಶ್ವ ಹಿಂದೂ ಪರಿಷತ್‌(ವಿಎಚ್‌ಪಿ)ನ ಕರಸೇವಕರು 1992ರ ಡಿಸೆಂಬರ್‌ 6ರಂದು ನೆಲಸಮಗೊಳಿಸಿದ್ದರು. ಮಸೀದಿ ಇರುವ ಜಾಗವೇ ಶ್ರೀರಾಮನ ಜನ್ಮಭೂಮಿ ಎನ್ನುವುದು ಕರಸೇವಕರ ವಾದವಾಗಿತ್ತು. ಮಸೀದಿ ಧ್ವಂಸದ ವೇಳೆ ಬಿಜೆಪಿ ಹಿರಿಯ ನಾಯಕರಾದ ಎಲ್‌.ಕೆ.ಆಡ್ವಾಣಿ ಹಾಗೂ  ಮುರಳಿ ಮನೋಹರ್‌ ಜೋಷಿ ಅವರು ಸ್ಥಳದಲ್ಲೇ ಇದ್ದರು. ಬಾಬರಿ ಮಸೀದಿಯ ಧ್ವಂಸವು ಸ್ವತಂತ್ರ ಭಾರತದಲ್ಲಾದ ಅತಿದೊಡ್ಡ ಘಟನೆಗಳಲ್ಲೊಂದು. ಮಸೀದಿ ನೆಲಕ್ಕುರುಳುತ್ತಿದ್ದಂತೆಯೇ ದೇಶಾದ್ಯಂತ ಕೋಮು ದಳ್ಳುರಿ ಆರಂಭವಾಗಿ, ನೂರಾರು ಮಂದಿ ಹಿಂಸಾಚಾರಕ್ಕೆ ಬಲಿಯಾಗಿದ್ದರು.

ಆಡ್ವಾಣಿ ವಿರುದ್ಧದ ಆರೋಪಗಳು
– ಕ್ರಿಮಿನಲ್‌ ಸಂಚು
– ವರ್ಗಗಳ ನಡುವೆ ವೈರತ್ವಕ್ಕೆ ಉತ್ತೇಜನ
– ರಾಷ್ಟ್ರೀಯ ಸಮಗ್ರತೆಗೆ ಧಕ್ಕೆ
– ಸಾರ್ವಜನಿಕ ಶಾಂತಿ ಹಾಳುಮಾಡುವಂಥ ಸುಳ್ಳು ಹೇಳಿಕೆಗಳು, ವದಂತಿಗಳ ರವಾನೆ

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.