ಸೋನಿಯಾ ಗಾಂಧಿಗೆ ಸುಳ್ಳು ಪತ್ತೆ ಪರೀಕ್ಷೆ ನಡೆಸಲು ಬಾದಲ್ ಆಗ್ರಹ
Team Udayavani, Nov 21, 2018, 4:28 PM IST
ಹೊಸದಿಲ್ಲಿ : 1984ರ ಸಿಕ್ಖ ವಿರೋಧಿ ದೊಂಬಿ ಪ್ರಕರಣಕ್ಕೆ ಸಂಬಂಧಿಸಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಿ ಪ್ರಶ್ನಿಸಬೇಕು ಎಂದು ಪಂಜಾಬಿನ ಮಾಜಿ ಉಪ ಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಇಂದು ಬುಧವಾರ ಆಗ್ರಹಿಸಿದ್ದಾರೆ.
ವಿಶೇಷ ತನಿಖಾ ತಂಡ ಸೋನಿಯಾ ಗಾಂಧಿಗೆ ಸಮನ್ಸ್ ಜಾರಿ ಮಾಡಿ ಆಕೆಯನ್ನು ತನಿಖೆಗೆ ಗುರಿಪಡಿಸಬೇಕು ಎಂದು ಸುಖಬೀರ್ ಒತ್ತಾಯಿಸಿದ್ದಾರೆ.
‘ಸೋನಿಯಾ ಗಾಂಧಿ ಅವರ ಪತಿ (ರಾಜೀವ್ ಗಾಂಧಿ) ಅಧಿಕಾರದಲ್ಲಿದ್ದಾಗ ಸೋನಿಯಾ ನಿವಾಸದಲ್ಲೇ 1984ರ ಸಿಕ್ಖ ವಿರೋಧಿ ದೊಂಬಿಯ ಸಂಚನ್ನು ರೂಪಿಸಲಾಗಿತ್ತು. ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಸೋನಿಯಾಗೆ ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡುವಂತೆ ಕೇಳಿಕೊಳ್ಳಬೇಕು’ ಎಂದು ಬಾದಲ್ ಹೇಳಿರುವುದನ್ನು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
1984ರ ಸಿಕ್ಖ ವಿರೋದಿ ದೊಂಬಿಯ ಇಬ್ಬರು ಅಪರಾಧಿಗಳಾದ ಯಶ್ಪಾಲ್ ಸಿಂಗ್ಗೆ ಮರಣ ದಂಡನೆ ಮತ್ತು ನರೇಶ್ ಸೆಹರಾವತ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ದಿಲ್ಲಿ ಕೋರ್ಟ್ ತೀರ್ಪು ನೀಡಿದ ಮರು ದಿನವೇ ಸುಖಬೀರ್ ಈ ಹೇಳಿಕೆ ನೀಡಿದ್ದಾರೆ.
ಶಿರೋಮಣಿ ಅಕಾಲಿ ದಳ (ಎಸ್ಎಡಿ) ಅಧ್ಯಕ್ಷ ಬಾದಲ್ ಅವರು 34 ವರ್ಷಗಳ ಬಳಿಕ ಹೊರಬಂದಿರುವ ಕೋರ್ಟ್ ತೀರ್ಪಿಗೆ ತೃಪ್ತಿ ವ್ಯಕ್ತಪಡಿಸಿ ಕಾಂಗ್ರೆಸ್ ವಿರುದ್ಧ ವಾಕ್ ಪ್ರಹಾರ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ಬೆಳಗಾವಿ; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ