Budaun: ಇಬ್ಬರು ಮಕ್ಕಳ ಹತ್ಯೆ ಪ್ರಕರಣ… 2ನೇ ಆರೋಪಿಯನ್ನು ಕೊಲ್ಲಬೇಡಿ ಎಂದ ಮಕ್ಕಳ ತಂದೆ
Team Udayavani, Mar 21, 2024, 4:21 PM IST
ಉತ್ತರ ಪ್ರದೇಶ: ಬದಿ ಮನೆಗೆ ನುಗ್ಗಿ ಇಬ್ಬರು ಅಮಾಯಕ ಮಕ್ಕಳನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎರಡನೇ ಆರೋಪಿಯನ್ನು ಇಂದು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಬದೌನ್ನಲ್ಲಿ ಬುಧವಾರ ನಡೆದ ಘೋರ ಘಟನೆಯಲ್ಲಿ ಕ್ಷೌರಿಕನೊಬ್ಬ ಪಕ್ಕದ ಮನೆಗೆ ನುಗ್ಗಿ ಮೂವರು ಮಕ್ಕಳ ಮೇಲೆ ಹರಿತವಾದ ಆಯುಧದಿಂದ ದಾಳಿ ನಡೆಸಿದ್ದ ಈ ಘಟನೆಯಲ್ಲಿ ಇಬ್ಬರು ಮಕ್ಕಳು ಅಸುನೀಗಿದ್ದು ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಘಟನೆಯಲ್ಲಿ ಪ್ರಮುಖ ಆರೋಪಿಯಾದ ಸಾಜಿದ್ ನನ್ನು ಪೊಲೀಸರು ಬಂಧಿಸಲು ಹೋದ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದ ಈ ವೇಳೆ ಆತನನ್ನು ಪೊಲೀಸರು ಎನಕೌಂಟರ್ ನಡೆಸಿದ್ದಾರೆ. ಇದಾದ ಬಳಿಕ ಇನ್ನೋರ್ವ ಆರೋಪಿಯಾಗಿರುವ ಸಾಜಿದ್ ನ ಸಹೋದರ ಜಾವೇದ್ ನನ್ನು ಪತ್ತೆಹಚ್ಚುವ ಕಾರ್ಯಕ್ಕೆ ಪೊಲೀಸರು ಮುಂದಾಗಿದ್ದರು ಅಲ್ಲದೆ ಆತನ ಪತ್ತೆಗೆ 25 ಸಾವಿರ ರೂಪಾಯಿ ಬಹುಮಾನವನ್ನು ಪೊಲೀಸರು ಘೋಷಿಸಿದ್ದರು.
ಅದರಂತೆ ಇಂದು (ಗುರುವಾರ) ಎರಡನೇ ಆರೋಪಿಯಾದ ಜಾವೇದ್ ನನ್ನ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಎನ್ಕೌಂಟರ್ ಮಾಡಬೇಡಿ:
ಇತ್ತ ಮಕ್ಕಳ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಜಾವೇದ್ ಬಂಧನ ಸುದ್ದಿ ಗೊತ್ತಾಗುತ್ತಿದ್ದಂತೆ ಹತ್ಯೆಯಾದ ಮಕ್ಕಳ ತಂದೆ ವಿನೋದ್ ಕುಮಾರ್ ಆರೋಪಿ ಜಾವೇದ್ ನನ್ನ ಎನ್ಕೌಂಟರ್ ಮಾಡಬೇಡಿ ಎಂದು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ ಆರೋಪಿಗಳನ್ನು ಎನ್ಕೌಂಟರ್ ಮಾಡಿದರೆ ನನ್ನ ಮಕ್ಕಳ ಹತ್ಯೆ ಯಾವ ಉದ್ದೇಶಕ್ಕೆ ಮಾಡಲಾಗಿದೆ ಎಂಬುದು ತಿಳಿಯುವುದು ಕಷ್ಟ ಸಾಧ್ಯವಾಗುತ್ತದೆ ಹಾಗಾಗಿ ಯಾವುದೇ ಕಾರಣಕ್ಕೂ ಎನ್ಕೌಂಟರ್ ಮಾಡಬೇಡಿ ಎಂದು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಮರಣೋತ್ತರ ಪರೀಕ್ಷೆ ವರದಿಯಲ್ಲೇನಿದೆ:
ನಿನ್ನೆ ಹತ್ಯೆಗೀಡಾದ ಇಬ್ಬರು ಮಕ್ಕಳಾದ ಆಯುಷ್(12) ಮತ್ತು ಅಹಾನ್ (6) ಅವರ ಮರಣೋತ್ತರ ಪರೀಕ್ಷಾ ವರದಿ ಬಂದಿದ್ದು ಅದರಂತೆ ಅಹಾನ್ಗೆ 23 ಬಾರಿ ಚಾಕುವಿನಿಂದ ಇರಿದಿರುವುದು ಬೆಳಕಿಗೆ ಬಂದಿದೆ ಜೊತೆಗೆ ಅಹಾನ್ ದೇಹದ ಭಾಗದಲ್ಲಿ 9 ಬಾರಿ ಇರಿದ ಗುರುತುಗಳು ಪತ್ತೆಯಾಗಿವೆ ಎಂದು ವರದಿಯಲ್ಲಿ ಪತ್ತೆಯಾಗಿವೆ.
ಇದನ್ನೂ ಓದಿ: IPL 2024: ನಾಯಕತ್ವ ತೊರೆದ ಎಂ.ಎಸ್.ಧೋನಿ; ಸಿಎಸ್ ಕೆ ತಂಡಕ್ಕೆ ಹೊಸ ಸಾರಥಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ