ಇನ್ನು ಏಕ ಸದಸ್ಯ ಪೀಠದಿಂದ ಜಾಮೀನು ಅರ್ಜಿ ವಿಚಾರಣೆ
Team Udayavani, Sep 21, 2019, 4:23 AM IST
ಹೊಸದಿಲ್ಲಿ: ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇದೇ ಮೊದಲ ಬಾರಿಗೆ ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಗಳ ಇತ್ಯರ್ಥಕ್ಕೆ ಏಕ ಸದಸ್ಯ ಪೀಠ ರಚಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾದ ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಿಚಾ ರಣೆಗೆ ಇಬ್ಬರು ಅಥವಾ ಮೂವರು ಸದ ಸ್ಯರ ನ್ಯಾಯಪೀಠದ ಬದಲಿಗೆ ಕೇವಲ ಏಕಸದಸ್ಯ ಪೀಠವನ್ನು ರಚಿಸಲು ಸೆ. 17 ರಂದು ನಿಯಮ ಬದಲಾವಣೆ ಮಾಡಲಾಗಿತ್ತು. ಈವರೆಗೆ ಕೋರ್ಟ್ ನಂಬರ್ 1 ರಲ್ಲಿ ಇಬ್ಬರು ಸದಸ್ಯರ ನ್ಯಾಯಪೀಠವು ಜಾಮೀನು ಅರ್ಜಿ ವಿಚಾರಣೆ ನಡೆಸುತ್ತಿತ್ತು. ಕೆಲವು ಬಾರಿ ಮೂರು ನ್ಯಾಯಮೂರ್ತಿಗಳೂ ಇರುತ್ತಿದ್ದರು.
ಅಷ್ಟೇ ಅಲ್ಲ, ಪ್ರಕರಣಗಳ ವರ್ಗಾವಣೆ ಮತ್ತು ತುರ್ತು ಪ್ರಕರಣಗಳ ವರ್ಗಾವಣೆ ಯನ್ನೂ ಏಕ ಸದಸ್ಯ ಪೀಠ ನಿರ್ವಹಿಸಲಿದೆ. ಈ ಪೀಠಕ್ಕೆ ನ್ಯಾಯಮೂರ್ತಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯ ಮೂರ್ತಿ ನೇಮಿಸಲಿದ್ದಾರೆ. 1950ರ ಸಮಯದಲ್ಲಿ ಎಲ್ಲ ನ್ಯಾಯ ಮೂರ್ತಿಗಳೂ ಜಾಮೀನು ಅರ್ಜಿ ವಿಚಾರಣೆ ಯನ್ನು ನಡೆಸುತ್ತಿದ್ದರು. ಆದರೆ ಪ್ರಕರಣಗಳ ಸಂಖ್ಯೆ ಹೆಚ್ಚಾದಂತೆ ನ್ಯಾಯಮೂರ್ತಿ ಗಳ ಸಂಖ್ಯೆಯನ್ನೂ ಹೆಚ್ಚಿಸಲಾಯಿತು. ಹೀಗಾಗಿ ಅನಂತರ 2 ಅಥವಾ 3 ನ್ಯಾಯಮೂರ್ತಿಗಳು ಜಾಮೀನು ಅರ್ಜಿಗಳ ವಿಚಾರಣೆ ನಡೆಸಲು ಆರಂಭಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ