ಇನ್ನು ಏಕ ಸದಸ್ಯ ಪೀಠದಿಂದ ಜಾಮೀನು ಅರ್ಜಿ ವಿಚಾರಣೆ
Team Udayavani, Sep 21, 2019, 4:23 AM IST
ಹೊಸದಿಲ್ಲಿ: ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇದೇ ಮೊದಲ ಬಾರಿಗೆ ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಗಳ ಇತ್ಯರ್ಥಕ್ಕೆ ಏಕ ಸದಸ್ಯ ಪೀಠ ರಚಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾದ ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಿಚಾ ರಣೆಗೆ ಇಬ್ಬರು ಅಥವಾ ಮೂವರು ಸದ ಸ್ಯರ ನ್ಯಾಯಪೀಠದ ಬದಲಿಗೆ ಕೇವಲ ಏಕಸದಸ್ಯ ಪೀಠವನ್ನು ರಚಿಸಲು ಸೆ. 17 ರಂದು ನಿಯಮ ಬದಲಾವಣೆ ಮಾಡಲಾಗಿತ್ತು. ಈವರೆಗೆ ಕೋರ್ಟ್ ನಂಬರ್ 1 ರಲ್ಲಿ ಇಬ್ಬರು ಸದಸ್ಯರ ನ್ಯಾಯಪೀಠವು ಜಾಮೀನು ಅರ್ಜಿ ವಿಚಾರಣೆ ನಡೆಸುತ್ತಿತ್ತು. ಕೆಲವು ಬಾರಿ ಮೂರು ನ್ಯಾಯಮೂರ್ತಿಗಳೂ ಇರುತ್ತಿದ್ದರು.
ಅಷ್ಟೇ ಅಲ್ಲ, ಪ್ರಕರಣಗಳ ವರ್ಗಾವಣೆ ಮತ್ತು ತುರ್ತು ಪ್ರಕರಣಗಳ ವರ್ಗಾವಣೆ ಯನ್ನೂ ಏಕ ಸದಸ್ಯ ಪೀಠ ನಿರ್ವಹಿಸಲಿದೆ. ಈ ಪೀಠಕ್ಕೆ ನ್ಯಾಯಮೂರ್ತಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯ ಮೂರ್ತಿ ನೇಮಿಸಲಿದ್ದಾರೆ. 1950ರ ಸಮಯದಲ್ಲಿ ಎಲ್ಲ ನ್ಯಾಯ ಮೂರ್ತಿಗಳೂ ಜಾಮೀನು ಅರ್ಜಿ ವಿಚಾರಣೆ ಯನ್ನು ನಡೆಸುತ್ತಿದ್ದರು. ಆದರೆ ಪ್ರಕರಣಗಳ ಸಂಖ್ಯೆ ಹೆಚ್ಚಾದಂತೆ ನ್ಯಾಯಮೂರ್ತಿ ಗಳ ಸಂಖ್ಯೆಯನ್ನೂ ಹೆಚ್ಚಿಸಲಾಯಿತು. ಹೀಗಾಗಿ ಅನಂತರ 2 ಅಥವಾ 3 ನ್ಯಾಯಮೂರ್ತಿಗಳು ಜಾಮೀನು ಅರ್ಜಿಗಳ ವಿಚಾರಣೆ ನಡೆಸಲು ಆರಂಭಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!