ಜ್ಞಾನವಾಪಿ ವಿವಾದ: ಶಿವಲಿಂಗದ ಕುರಿತು ಅವಹೇಳನಕಾರಿ ಪೋಸ್ಟ್; ಪ್ರೊಫೆಸರ್ ಗೆ ಬೇಲ್
ವೈಯಕ್ತಿಕ ಬಾಂಡ್ ನೀಡಿದ ನಂತರ ಪ್ರೊಫೆಸರ್ ರತನ್ ಲಾಲ್ ಜೈಲಿನಿಂದ ಬಿಡುಗಡೆಗೊಳ್ಳಲಿದ್ದಾರೆ
Team Udayavani, May 21, 2022, 5:47 PM IST
ನವದೆಹಲಿ: ವಾರಾಣಸಿಯ ಜ್ಞಾನವಾಪಿ ಮಸೀದಿ ಆವರಣದೊಳಗೆ ಪತ್ತೆಯಾದ ಶಿವಲಿಂಗದ ಕುರಿತು ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಆರೋಪದಡಿ ಬಂಧಿಸಲ್ಪಟ್ಟಿದ್ದ ದೆಹಲಿ ಯೂನಿರ್ವಸಿಟಿಯ ಹಿಂದೂ ಕಾಲೇಜಿನ ಇತಿಹಾಸದ ಪ್ರೊಫೆಸರ್ ರತನ್ ಲಾಲ್ ಗೆ ದೆಹಲಿ ಕೋರ್ಟ್ ಶನಿವಾರ (ಮೇ 21) ಜಾಮೀನು ಮಂಜೂರು ಮಾಡಿರುವುದಾಗಿ ವರದಿ ತಿಳಿಸಿದೆ.
50,000 ಸಾವಿರ ಮೊತ್ತದ ವೈಯಕ್ತಿಕ ಬಾಂಡ್ ನೀಡಿದ ನಂತರ ಪ್ರೊಫೆಸರ್ ರತನ್ ಲಾಲ್ ಜೈಲಿನಿಂದ ಬಿಡುಗಡೆಗೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ.
ಜ್ಞಾನವಾಪಿ ಮಸೀದಿ ಆವರಣದೊಳಗೆ ಪತ್ತೆಯಾಗಿರುವ ಶಿವಲಿಂಗದ ಬಗ್ಗೆ ಪ್ರೊಫೆಸರ್ ರತನ್ ಲಾಲ್ ಅವಹೇಳನಕಾರಿ ಕಮೆಂಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಇಂದು (ಮೇ 21) ತೀಸ್ ಹಜಾರಿ ಕೋರ್ಟ್ ನ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಿದ್ದಾರ್ಥ ಮಲಿಕ್ ಅವರ ಮುಂದೆ ಹಾಜರುಪಡಿಸಲಾಗಿತ್ತು.
“ತನಗೆ ಪ್ರಕರಣದಲ್ಲಿ ಜಾಮೀನು ನೀಡಬೇಕು ಮತ್ತು ರಕ್ಷಣೆ ಕೋರಿ ಪ್ರೊಫೆಸರ್ ಲಾಲ್ ದೆಹಲಿ ಕೋರ್ಟ್ ಮೆಟ್ಟಿಲೇರಿದ್ದರು. “ನಾವು ಜಾಮೀನು ಅರ್ಜಿಯನ್ನು ಪರಿಗಣಿಸಿದ್ದೇವೆ. ಅವರೇನು ಕ್ರಿಮಿನಲ್ ಅಲ್ಲ, ಇಲ್ಲಿಂದ ಓಡಿಹೋಗಲ್ಲ. ದೂರಿನ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನೀವು (ಪೊಲೀಸರು) ಯಾವುದೇ ಅವಕಾಶ ನೀಡಿಲ್ಲ “ ಎಂದು ಪ್ರೊಫೆಸರ್ ಪರ ವಕೀಲರು ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ