ಜಾಮೀನು ಕೊಟ್ಟರೆ ಎಲ್ಲೂ ಓಡಿ ಹೋಗಲ್ಲ


Team Udayavani, Oct 16, 2019, 3:09 AM IST

DKSHI

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ನನ್ನನ್ನು ಬಂಧಿಸಿರುವುದು ರಾಜಕೀಯ ಪಿತೂರಿ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ದೆಹಲಿ ಹೈಕೋರ್ಟ್‌ನಲ್ಲಿ ತಮ್ಮ ವಕೀಲರ ಮೂಲಕ ವಾದ ಮಂಡಿಸಿದ್ದಾರೆ. ತಮ್ಮ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಇಲ್ಲದಿದ್ದರೂ ಜಾರಿ ನಿರ್ದೇಶನಾಲಯವು (ಇ.ಡಿ) ತಮ್ಮನ್ನು ಅನಾವಶ್ಯವಾಗಿ ಬಂಧನದಲ್ಲಿಟ್ಟುಕೊಂಡಿದೆ ಎಂದು ಅವರು ಇದೇ ವೇಳೆ ಆಪಾದಿಸಿದ್ದಾರೆ.

ಮಂಗಳವಾರ ನಡೆದ ಡಿಕೆಶಿಯವರ ಜಾಮೀನು ಅರ್ಜಿ ವಿಚಾರಣೆಯ ವೇಳೆ ವಾದ ಮಂಡಿಸಿದ ಡಿಕೆಶಿ ಪರ ವಕೀಲರ ತಂಡ, “ಶಿವಕುಮಾರ್‌ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸೆಪ್ಟೆಂಬರ್‌ನಲ್ಲಿ ಅವರಿಗೆ ಆ್ಯಂಜಿಯೋಗ್ರಫಿ ನಡೆಸಲಾಗಿದೆ. ಹಾಗಿದ್ದರೂ, ಅವರನ್ನು 45 ದಿನಗಳವರೆಗೆ ಬಂಧನದಲ್ಲಿ ಇರಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಕಕ್ಷಿದಾರರನ್ನು ದೀರ್ಘಾವಧಿಯ ಬಂಧನದಲ್ಲಿ ಇರಿಸುವ ಹಾಗಿಲ್ಲ. ಹಾಗಾಗಿ, ಅವರಿಗೆ ಜಾಮೀನು ಮಂಜೂರು ಮಾಡಬೇಕು’ ಎಂದು ನ್ಯಾ. ಸುರೇಶ್‌ ಕೈಟ್‌ ಅವರಲ್ಲಿ ಮನವಿ ಮಾಡಿತು.

“ರಾಜಕೀಯ ಪಿತೂರಿ’: ಮಂಗಳವಾರದ ವಿಚಾರಣೆ ಯಲ್ಲಿ ತಮ್ಮ ವಾದ ಮಂಡಿಸಿದ ವಕೀಲ ಸಿದ್ದಾರ್ಥ್ ಲೂತ್ರಾ, “ಶಿವಕುಮಾರ್‌ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ಒಂದು ರಾಜಕೀಯ ಪಿತೂರಿಯಾಗಿದೆ. ಮೂಲತಃ ಅವರ ಮೇಲೆ ಇದ್ದಿದ್ದು ಆದಾಯ ತೆರಿಗೆ ಕಾಯ್ದೆಯ ಪ್ರಕರಣ. ಆ ಪ್ರಕರಣದ ಕ್ರಿಮಿನಲ್‌ ಸಂಚಿನ ಪ್ರಕರಣವನ್ನು ಹೊಸದಾಗಿ ಸೇರ್ಪಡೆಗೊಳಿಸಿರುವ ಇ.ಡಿ., ಶಿವಕುಮಾರ್‌ ವಿರುದ್ಧ ಅಕ್ರಮ ಹಣ ವರ್ಗಾವಣೆ (ಪಿಎಂಎಲ್‌ಎ) ಪ್ರಕರಣ ದಾಖಲಿಸಿದೆ.

ಶಿವಕುಮಾರ್‌ರನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದಲೇ ಇ.ಡಿ. ಈ ಪ್ರಕರಣವನ್ನು ದಾಖಲಿಸುತ್ತಿದೆ’ ಎಂದರು. ಅಲ್ಲದೆ, ಶಿವಕುಮಾರ್‌ ಈಗಾಗಲೇ ಏಳು ಬಾರಿ ಶಾಸಕರಾಗಿರುವವರು. ಸಮಾಜ ದೊಂದಿಗೆ ಉತ್ತಮ ಬಾಂಧವ್ಯ ಹೊಂದಿ ರು ವವರು. ಅವರು, ಜಾಮೀನು ಸಿಕ್ಕಕೂಡಲೇ ದೇಶ ಬಿಟ್ಟು ಓಡಿ ಹೋಗುವವರಲ್ಲ. ಅಷ್ಟು ಅನುಮಾನವಿದ್ದರೆ ಅವರ ಪಾಸ್‌ಪೋರ್ಟ್‌ನ್ನು ಸರ್ಕಾರ ವಶಪಡಿಸಿಕೊಳ್ಳಲಿ. ಜಾಮೀನಿನ ನಂತರವೂ ಶಿವಕುಮಾರ್‌ ತನಿಖೆಗೆ ಸಹಕರಿ ಸಲಿದ್ದಾರೆ. ಹಾಗಾಗಿ, ಅವರಿಗೆ ಜಾಮೀನು ನೀಡಬೇಕು ಎಂದು ಸಿದ್ದಾರ್ಥ್ ಮನವಿ ಮಾಡಿದರು.

ಇದು ಐಟಿ ಪ್ರಕರಣ, ಇ.ಡಿಯದ್ದಲ್ಲ!: ಈ ಸಂದರ್ಭದಲ್ಲಿ ಡಿಕೆಶಿ ಪರ ತಮ್ಮ ವಾದ ಮಂಡಿಸಿದ ಅಭಿಷೇಕ್‌ ಸಿಂಘ್ವಿ, “ಶಿವಕುಮಾರ್‌ ವಿರುದ್ಧ ಇ.ಡಿ ಮಾಡುತ್ತಿರುವ ಆರೋ ಪಗಳನ್ನು ಸಾಬೀತುಪಡಿಸುವ ಯಾವುದೇ ಸಾಕ್ಷ್ಯಾಧಾರಗಳನ್ನು ಇ.ಡಿ ಕಲೆಹಾಕಿಲ್ಲ. ಅಲ್ಲದೆ, ಅವರ ವಿರುದ್ಧ ದಾಖಲಾಗಿರುವ ಪ್ರಕರಣ ಕೇವಲ ಐಟಿ ಇಲಾಖೆಯ ವ್ಯಾಪ್ತಿಗೆ ಬರುವಂಥದ್ದು. ಇದರಲ್ಲಿ ಇ.ಡಿಯು ದೀರ್ಘಾವಧಿಯವರೆಗೆ ನಮ್ಮ ಕಕ್ಷಿದಾರರನ್ನು ಬಂಧನ ದಲ್ಲಿಟ್ಟುಕೊಂಡು ವಿಚಾರಣೆ ನಡೆಸುವ ಪ್ರಮೇಯವೇ ಇಲ್ಲ’ ಎಂದು ವಾದಿಸಿದರು.

ಗುರುವಾರಕ್ಕೆ ಮುಂದೂಡಿಕೆ: ಡಿಕೆಶಿ ಪರ ವಕೀಲರ ವಾದವನ್ನು ಆಲಿಸಿದ ನ್ಯಾಯಮೂರ್ತಿ ಸುರೇಶ್‌ ಕೈಟ್‌, ವಿಚಾರಣೆಯನ್ನು ಅ 17ಕ್ಕೆ ಮುಂದೂಡಿದರು. ಅಂದು, ಇ.ಡಿ ಪರ ವಕೀಲರು ತಮ್ಮ ಅಹವಾಲು ಸಲ್ಲಿಸುವಂತೆ ನ್ಯಾಯಮೂರ್ತಿ ಸೂಚಿಸಿದ್ದಾರೆ.

ಡಿ.ಕೆ. ಶಿವಕುಮಾರ್‌ ಆಪ್ತರಿಗೆ “ಮಧ್ಯಂತರ ರಕ್ಷಣೆ’
ಬೆಂಗಳೂರು: ಐಟಿ ದಾಳಿ ವೇಳೆ ದೆಹಲಿ ನಿವಾಸದಲ್ಲಿ ಸಿಕ್ಕ 8.69 ಕೋಟಿ ರೂ. ಬೇನಾಮಿ ಹಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಆಪ್ತರಾದ ಸಚಿನ್‌ ನಾರಾಯಣ ಹಾಗೂ ಸುನೀಲ್‌ ಶರ್ಮಾ ಅವರನ್ನು 1 ವಾರದ ಮಟ್ಟಿಗೆ ಬಂಧಿಸದಂತೆ ಹೈಕೋರ್ಟ್‌ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡಿದೆ.

ಈ ಕುರಿತು ಸಚಿನ್‌ ನಾರಾಯಣ, ಸುನೀಲ್‌ ಶರ್ಮಾ ಹಾಗೂ ಇತರರು ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಎಸ್‌.ಆರ್‌. ಕೃಷ್ಣಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಅರ್ಜಿದಾರರನ್ನು ಬಂಧಿಸದಂತೆ ಈ ಹಿಂದೆ ನೀಡಿದ್ದ ಮಧ್ಯಂತರ ರಕ್ಷಣೆಯನ್ನು ಒಂದು ವಾರ ವಿಸ್ತರಿಸಿ ಆದೇಶಿಸಿತು. ಪ್ರಕರಣದ ಸಂಬಂಧ ಏಕಸದಸ್ಯ ಪೀಠ ನೀಡಿದ್ದ ತೀರ್ಪು ಪ್ರಶ್ನಿಸಿ ಸುಪ್ರಿಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ಕೋರಿದ್ದ ಅರ್ಜಿದಾರರು ಅಲ್ಲಿಯವರೆಗೆ ತಮ್ಮನ್ನು ಬಂಧಿಸದಂತೆ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದರು.

ಬಂಧನಾವಧಿ ವಿಸ್ತರಣೆ: ಡಿ.ಕೆ.ಶಿವಕುಮಾರ್‌ರವರ ನ್ಯಾಯಾಂಗ ಬಂಧನವನ್ನು ದೆಹಲಿ ಸ್ಥಳೀಯ ನ್ಯಾಯಾಲಯ ಅ.25ರವರೆಗೆ ವಿಸ್ತರಿಸಿದೆ. ಈ ಹಿಂದೆ ವಿಧಿಸಲಾಗಿದ್ದ ಬಂಧನಾವಧಿಯು ಅ.15ರಂದು (ಮಂಗಳವಾರ) ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ವೇಳೆ, ಇ.ಡಿ ಪರ ವಕೀಲರು, ಹೆಚ್ಚುವರಿ ವಿಚಾರಣೆಗಾಗಿ ಕಾಲಾವಕಾಶ ಕೋರಿದರು. ಇದಕ್ಕೆ ಡಿಕೆಶಿ ಪರ ವಕೀಲರು ವಿರೋಧಿಸಲಿಲ್ಲ. ಹಾಗಾಗಿ, ನ್ಯಾ.ಅಜಯ್‌ ಕುಮಾರ್‌ ಕುಹರ್‌, ಡಿಕೆಶಿಯವರ ಬಂಧನಾವಧಿಯನ್ನು ಅ.25ರವರೆಗೆ ವಿಸ್ತರಿಸಿ ಆದೇಶ ನೀಡಿದರು.

ಕುರ್ಚಿ ನೀಡಲು ಕೋರ್ಟ್‌ ಸೂಚನೆ: ತಿಹಾರ್‌ ಜೈಲಿನಲ್ಲಿರುವ ಡಿಕೆಶಿರವರ ಸೆಲ್‌ಗೆ ಕುರ್ಚಿ, ಟಿವಿಯನ್ನು ಕೊಡಬೇಕೆಂದು ದೆಹಲಿಯ ಸಿಬಿಐ ನ್ಯಾಯಾಲಯ, ಜೈಲಿನ ಅಧಿಕಾರಿಗಳಿಗೆ ಸೂಚಿಸಿದೆ. ಶಿವಕುಮಾರ್‌ ಬೆನ್ನುನೋವಿನಿಂದ ಬಳಲುತ್ತಿದ್ದಾರೆ ಎಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ಜೈಲಿನ ನಿಯಮಗಳಿಗೆ ಅನುಸಾರವಾಗಿ ನೀಡಬೇಕಿರುವ ಸೌಲಭ್ಯಗಳನ್ನು ನೀಡುವಂತೆ ನ್ಯಾಯಾಧೀಶರು ಸೂಚಿಸಿದರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.