ಗೋವಾದಲ್ಲಿ ರಾತ್ರಿ 10ರ ಬಳಿಕ ಪಾರ್ಟಿಗೆ ನಿರ್ಬಂಧ ; ಶಾಸಕ ವಿಜಯ್ ಸರ್ದೇಸಾಯಿ ಆಕ್ರೋಶ
Team Udayavani, Dec 14, 2022, 5:33 PM IST
ಮಡಗಾಂವ್ : ಗೋವಾ ರಾಜ್ಯದಲ್ಲಿ ರಾತ್ರಿ 10 ಗಂಟೆಯ ನಂತರ ಯಾವುದೇ ರೀತಿಯ ಸಂಗೀತ ಪಾರ್ಟಿ ಅಥವಾ ಅಬ್ಬರದ ಕಾರ್ಯಕ್ರಮಗಳನ್ನು ಹೈಕೋರ್ಟ್ ನಿಷೇಧಿಸಿದೆ. ಪರಿಣಾಮವಾಗಿ, ರಾತ್ರಿ 10 ಗಂಟೆಯ ನಂತರ ಯಾವುದೇ ರೀತಿಯ ಸಂಗೀತ ಪಾರ್ಟಿ ನಡೆದರೆ ಕಾನೂನು ಕ್ರಮ ಜರುಗಿಸಲಾಗುತ್ತಿದೆ. ಈ ನಿರ್ಬಂಧಗಳನ್ನು ಸಡಿಲಿಸಬೇಕು ಎಂದು ಆಗ್ರಹಿಸಿ ಗೋವಾ ಫಾರ್ವರ್ಡ್ ಪಾರ್ಟಿ ಶಾಸಕ ವಿಜಯ್ ಸರ್ದೇಸಾಯಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಡಗಾಂವ್ ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಬೀಚ್ ಹೋಟೆಲ್ ಗಳು ಅಥವಾ ಅಂತಹುದೇ ವ್ಯವಹಾರಗಳಿಗೆ ತೆಗೆದುಕೊಂಡ ನಿರ್ಧಾರಗಳು ಸ್ವಾಗತಾರ್ಹ ಎಂದ ಅವರು,ಮದುವೆ ಸಮಾರಂಭಗಳು, ಸಾಂಸ್ಕ್ರತಿಕ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮಗಳು, ಸ್ಥಳೀಯ ನಾಗರಿಕರ ಖಾಸಗಿ ಕಾರ್ಯಕ್ರಮಗಳಿಗೆ ವಿನಾಯತಿ ನೀಡಬೇಕು. ಅಂತಹ ಕಾರ್ಯಕ್ರಮಗಳಿಗೆ ರಾತ್ರಿ 10 ರ ನಂತರ ಕನಿಷ್ಠ ಒಂದು ಗಂಟೆ ಯಾದರೂ ಕಾಲಾವಕಾಶ ನೀಡಬೇಕು. ಸಾಮಾನ್ಯ ನಾಗರಿಕರು ಪ್ರತಿದಿನ ಕಾರ್ಯಕ್ರಮ ನಡೆಸುವುದಿಲ್ಲ. ತಮ್ಮ ತಮ್ಮ ಕಾರ್ಯಕ್ರಮದಲ್ಲಿ ಒಂದು ದಿನ ಮಾತ್ರ ನಡೆಸುತ್ತಾರೆ. ಇದು ಗೋವಾದ ಸಂಸ್ಕೃತಿಯ ಭಾಗವಾಗಿದೆ, ಇದನ್ನು ಪರಿಗಣಿಸಬೇಕಾಗಿದೆ ಎಂದು ಶಾಸಕ ವಿಜಯ್ ಸರ್ದೇಸಾಯಿ ಹೇಳಿದರು.
ಗೋವಾ ರಾಜ್ಯದಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಇದು ಉತ್ಸವಗಳು, ಯಾತ್ರೆಗಳು, ಜಾತ್ರೆಗಳನ್ನು ಒಳಗೊಂಡಿದೆ. ಇದರೊಂದಿಗೆ ಕೆಲವು ಸಾಮಾಜಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ. ಇದು ಗೋವಾದವರ ಜೀವನದ ಭಾಗವಾಗಿದೆ.ಇದರಿಂದಾಗಿಯೇ ಗೋವಾದ ವಿಶಿಷ್ಟತೆ ಉಳಿದುಕೊಂಡಿದೆ. ಇದರ ಪ್ರಾಮುಖ್ಯತೆಯನ್ನು ಪರಿಗಣಿಸಿ, ಗೋವಾ ಸರ್ಕಾರವು ಈ ನಿಟ್ಟಿನಲ್ಲಿ ನ್ಯಾಯಾಲಯವನ್ನು ಕೋರಬೇಕು ಮತ್ತು ಸ್ಥಳೀಯ ನಾಗರಿಕರ ಮೇಲೆ ದಬ್ಬಾಳಿಕೆ ಮಾಡುತ್ತಿರುವ ನಿರ್ಬಂಧಗಳನ್ನು ಸಡಿಲಿಸಲು ಪ್ರಯತ್ನಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ