ಇಂದು ಬಾಂಗ್ಲಾದೇಶ – ಭಾರತ “ಮೈತ್ರಿ ದಿನ’
Team Udayavani, Dec 6, 2021, 5:29 AM IST
ಹೊಸದಿಲ್ಲಿ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೈತ್ರಿ ಮತ್ತಷ್ಟು ಗಾಢವಾಗುವ ನಿಟ್ಟಿನಲ್ಲಿ ಸೋಮವಾರ (ಡಿ.6)ವನ್ನು “ಮೈತ್ರಿ ದಿನ’ ಎಂದು ಆಚರಿಸಲು ನಿರ್ಧರಿಸಲಾಗಿದೆ.
ಈ ಬಗ್ಗೆ ಕೇಂದ್ರ ಸರಕಾರ ನಿರ್ಧಾರ ಕೈಗೊಂಡಿದೆ. ಢಾಕಾ ಬಾಂಗ್ಲಾದೇಶದ ರಾಜಧಾನಿ ಎಂದು 1971ರ ಡಿ.6ರಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಅಂದಿನ ಸರಕಾರ ಮಾನ್ಯತೆ ನೀಡಿತ್ತು. ಅದರ ಸ್ಮರಣೆಯನ್ನು ಶಾಶ್ವತವಾಗಿ ಇರಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಹೊಸದಿಲ್ಲಿಯಲ್ಲಿರುವ ಇಂಡಿಯನ್ ಕೌನ್ಸಿಲ್ ಆಫ್ ವರ್ಲ್ಡ್ ಅಫೇರ್ಸ್ ಸೋಮವಾರ ವಿಶೇಷ ಕಾರ್ಯ ಕ್ರಮ ಆಯೋಜಿಸಿದೆ. ಅದರಲ್ಲಿ ಎರಡೂ ರಾಷ್ಟ್ರಗಳ ಪ್ರಮುಖ ಅಧಿಕಾರಿಗಳು ಮತ್ತು ಇತರರು ಭಾಗವಹಿಸಲಿದ್ದಾರೆ.
ಇದನ್ನೂ ಓದಿ:ಲಾವಾ ಸ್ಫೋಟಕ್ಕೆ 13 ಸಾವು : ಇಂಡೋನೇಷ್ಯಾದ ಪೂರ್ವಭಾಗದಲ್ಲಿರುವ ಲುಮಾಜಂಗ್ನಲ್ಲಿ ಘಟನೆ
ಭಾರತದ್ದೇ ಪಾತ್ರ: 1971ರಲ್ಲಿ ಭಾಂಗ್ಲಾದೇಶಕ್ಕೆ ಸ್ವಾತಂತ್ರ್ಯಸಿಗಲು ಭಾರತ ಕಾರಣವಾಗಿದೆ. ಡಿ.6ಕ್ಕೆ ಸರಿಯಾಗಿ ಆ ಸಂಭ್ರಮಕ್ಕೆ 50 ವರ್ಷ ಭರ್ತಿಯಾಗುತ್ತದೆ. ಈ ಸುವರ್ಣ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಡಿ.14 ರಿಂದ 16ರವರೆಗೆ ದಿಲ್ಲಿಯ ಇಂಡಿಯಾ ಗೇಟ್ನಲ್ಲಿ ಭರ್ಜರಿ ಕಾರ್ಯಕ್ರಮಗಳು ನಡೆಯಲಿವೆ. ಅವುಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ