ಕಿರುಕುಳ ಅನುಭವಿಸಿದವರಿಗೆ ಉತ್ತಮ ನಾಳೆ: ಮೋದಿ
Team Udayavani, Dec 7, 2019, 2:20 AM IST
ಹೊಸದಿಲ್ಲಿ: ಪಾಕಿಸ್ಥಾನ, ಅಫ್ಘಾನಿಸ್ಥಾನ, ಬಾಂಗ್ಲಾದೇಶಗಳಲ್ಲಿ ಕಿರುಕುಳ ಅನುಭವಿಸುತ್ತಿದ್ದವರಿಗೆ ಉತ್ತಮ ನಾಳೆಯ ಅವಕಾಶವನ್ನು ಕಲ್ಪಿಸುವುದೇ ಪೌರತ್ವ (ತಿದ್ದುಪಡಿ) ವಿಧೇಯಕದ ಉದ್ದೇಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆದ ‘ದ ಹಿಂದುಸ್ತಾನ್ ಟೈಮ್ಸ್ ನಾಯಕತ್ವ ಶೃಂಗ’ದಲ್ಲಿ ಮಾತನಾಡಿದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪೌರತ್ವ (ತಿದ್ದುಪಡಿ) ಕಾಯ್ದೆಗೆ ಹಲವು ಆಕ್ಷೇಪಗಳು ವ್ಯಕ್ತವಾಗಿರುವಂತೆಯೇ ಪ್ರಧಾನಿ ಮೋದಿ ತಮ್ಮ ಮೊದಲ ಅಭಿಪ್ರಾಯ ನೀಡಿದ್ದಾರೆ.
ಸರಕಾರಿ ಸ್ವಾಮ್ಯದ ಬ್ಯಾಂಕುಗಳನ್ನು ವಿಲೀನಗೊಳಿಸಲು ನಮ್ಮ ಸರಕಾರ ಧೈರ್ಯ ಮಾಡಿದ ಕಾರಣ, ಬ್ಯಾಂಕುಗಳ ಮರುಬಂಡ ವಾಳೀಕರಣ ಸಾಧ್ಯವಾಯಿತು. ಜತೆಗೆ, ಅವುಗಳು ಬಲಿಷ್ಠಗೊಳ್ಳಲೂ ನೆರವಾಯಿತು. ನಮ್ಮ ನಿರ್ಧಾರಗಳಿಂದಾಗಿ ಬ್ಯಾಂಕಿಂಗ್ ವಲಯವು ಈ ಹಿಂದಿಗಿಂತ ಈಗ ಬಲಿಷ್ಠವಾಗಿವೆ ಎಂದಿದ್ದಾರೆ ಮೋದಿ.
ಜತೆಗೆ, ನಿಮ್ಮ ವಹಿವಾಟಿನ ನಿರ್ಧಾರಗಳನ್ನು ನಾವು ಪ್ರಶ್ನಿಸುವುದಿಲ್ಲ ಎಂಬ ಭರವಸೆಯನ್ನೂ ಬ್ಯಾಂಕಿಂಗ್ ಅಧಿಕಾರಿಗಳಿಗೆ ನೀಡಿದ್ದಾರೆ. ಬ್ಯಾಂಕಿಂಗ್ ವಲಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ