ಕೇರಳ ಸಂತ್ರಸ್ತರಿಗೆ ವಿಶೇಷ ಸಾಲ
Team Udayavani, Sep 4, 2018, 6:00 AM IST
ಹೊಸದಿಲ್ಲಿ: ಕೇರಳ ಪ್ರವಾಹದಿಂದ ಹಾನಿಗೊಂಡಿರುವ ಮನೆಗಳ ಮಾಲೀಕರ ನೆರವಿಗೆ ಬಂದಿರುವ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ), ಮನೆ ರಿಪೇರಿಗಾಗಿ ಕಡಿಮೆ ಬಡ್ಡಿ ದರವುಳ್ಳ ಸಾಲ ನೀಡಲು ಮುಂದಾಗಿದೆ. ಮನೆ ದುರಸ್ತಿ ಅಥವಾ ಮರು ನಿರ್ಮಾಣ ಮಾಡ ಬಯಸುವ ಸಂತ್ರಸ್ತರಿಗೆ 10 ಲಕ್ಷ ರೂ.ಗಳವರೆಗಿನ ಸಾಲಕ್ಕೆ ವಾರ್ಷಿಕ ಶೇ. 8.45ರ ಬಡ್ಡಿ ದರ ನಿಗದಿ ಪಡಿಸಿರುವ ಬ್ಯಾಂಕ್, ಈ ಸಾಲ ಪಾವತಿಗೆ ಸಾಮಾನ್ಯವಾಗಿ ವಿಧಿಸಲಾಗುವ ಪ್ರೊಸೆಸಿಂಗ್ ಶುಲ್ಕದಿಂದ ವಿನಾಯ್ತಿ ನೀಡಿದೆ. ಎಲ್ಐಸಿ ಹೌಸಿಂಗ್ ಸಂಸ್ಥೆ ಕೂಡ, ಮನೆ ರಿಪೇರಿ ಅಥವಾ ಮರು ನಿರ್ಮಾಣ ಮಾಡ ಬಯಸುವವರಿಗೆ ಶೇ. 8.50ರ ಬಡ್ಡಿ ದರದಲ್ಲಿ 15 ಲಕ್ಷ ರೂ.ವರೆಗೆ ಸಾಲ ನೀಡಲು ಹಾಗೂ ಮುತ್ತೂಟ್ ಹೋಂ ಫೈನಾನ್ಸ್ ಸಂಸ್ಥೆ ದೀರ್ಘಾವಧಿ ಗೃಹ ಸಾಲ ನೀಡಲು ಮುಂದಾಗಿದೆ.
ಕೇಂದ್ರ ಗರಂ: ಕೇರಳ ಪ್ರವಾಹ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡದ್ದಕ್ಕೆ ಕೇಂದ್ರ ಸರಕಾರ ಅಸಮಾಧಾನ ವ್ಯಕ್ತ ಪಡಿಸಿದೆ. ಅಲ್ಲಿ ಹವಾಮಾನ ಪ್ರತಿಕೂಲವಾಗಿ ಅದು ತಾರಕಕ್ಕೇರುತ್ತದೆ ಎಂದಷ್ಟೇ ಮಾಹಿತಿ ನೀಡಿತ್ತು. ಆದರೆ, ಅಗಾಧ ಮಳೆಯ ಬಗ್ಗೆ ಮುನ್ನೆಚ್ಚರಿಕೆ ನೀಡಿರಲಿಲ್ಲ ಎಂದು ಕೇಂದ್ರ ಬೇಸರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ