ಆರ್ಥಿಕ ಸ್ವಾಯತ್ತತೆಗೆ ಬಜೆಟ್ನಲ್ಲಿ ಹಣ ಮೀಸಲಿಗೆ ಹೊರಟ್ಟಿ ಮನವಿ
Team Udayavani, Nov 18, 2021, 9:00 PM IST
ಶಿಮ್ಲಾ: ವಿಧಾನ ಮಂಡಲಗಳ ಸ್ವತಂತ್ರ ನಿರ್ವಹಣೆ ಹಾಗೂ ಪûಾತೀತ ಕಾರ್ಯನಿರ್ವಹಣೆ ದೃಷ್ಟಿಯಿಂದ ಆರ್ಥಿಕ ಸ್ವಾಯತ್ತತೆ ನೀಡುವುದು ಅಗತ್ಯವಾಗಿದ್ದು, ಬಜೆಟ್ನಲ್ಲಿ ಪ್ರತ್ಯೇಕ ಹಣ ಮೀಸಲಿಡಬೇಕೆಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮನವಿ ಮಾಡಿದರು.
ಶಿಮ್ಲಾದಲ್ಲಿ ನಡೆದ ಎರಡು ದಿನಗಳ 82ನೇ ಅಖೀಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನ ಮತ್ತು ಶತಮಾನೋತ್ಸವ ಸಮಾರಂಭದಲ್ಲಿ ಸಮ್ಮೇಳನದ ನಿರ್ಣಯ ಕುರಿತ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ವಿಧಾನ ಮಂಡಲದ ಸಚಿವಾಲಯಕ್ಕೆ ಆರ್ಥಿಕ ಸ್ವಾಯತ್ತತೆ ನೀಡುವ ಕುರಿತು ಸಮ್ಮೇಳನ ಪೂರಕ ನಿರ್ಣಯ ಸ್ವೀಕರಿಸಿ, ಸದನಗಳ ಗೌರವ, ಘನತೆ ಹಾಗೂ ಪ್ರಾಮುಖ್ಯತೆ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಲೋಕಸಭಾಧ್ಯಕ್ಷರು ನಿರ್ಣಯ ಅಂಗೀಕರಿಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಇದಕ್ಕೆ ಪೂರಕವಾಗಿ ಸ್ಪಂದಿಸಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೂಡಲೇ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡುವುದಾಗಿ ಭರವಸೆ ನೀಡಿದರು.
ಇ- ವಿಧಾನ್ ತಂತ್ರಜ್ಞಾನ ಅಳವಡಿಕೆಗೆ ಮನವಿ:
ವಿಧಾನ ಮಂಡಲದ ದೈನಂದಿನ ಕಾರ್ಯಚಟುವಟಿಕೆ ಹಾಗೂ ಆಡಳಿತವನ್ನು ಕಾಗದ ರಹಿತವನ್ನಾಗಿಸಲು ಇ-ವಿಧಾನ್ ತಂತ್ರಜ್ಞಾನವನ್ನು ಕೂಡ ಅಳವಡಿಸಿಕೊಳ್ಳುವುದು ಪ್ರಸ್ತುತ ಎಂದು ಹೇಳಿದರು. ಇದಕ್ಕೆ ಸ್ಪಂದಿಸಿದ ಸಭೆ, ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನಿಸಿತು.
ವಿಧಾನ ಮಂಡಲಗಳ ಸ್ವತಂತ್ರ ನಿರ್ವಹಣೆ ಹಾಗೂ ಪಕ್ಷಾತೀತ ಕಾರ್ಯನಿರ್ವಹಣೆ ದೃಷ್ಟಿಯಿಂದ ಆರ್ಥಿಕ ಸ್ವಾಯತ್ತತೆ ನೀಡುವುದು ಮತ್ತು ಎರಡು ದಿನಗಳ ಸಮ್ಮೇಳನದ ಎಲ್ಲಾ ನಿರ್ಣಯಗಳನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಲು ಮನವಿ ಮಾಡಿದರು.
ಸಭಾಪತಿಗಳ ಮನವಿಗೆ ಸಹಮತ ವ್ಯಕ್ತಪಡಿಸಿದ ಓಂ ಬಿರ್ಲಾ, ದೇಶದ ಎಲ್ಲಾ ವಿಧಾನ ಮಂಡಲಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿ, ಪಾರದರ್ಶಕ ಹಾಗೂ ಸುಗಮ ಕಲಾಪಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ನಾರಾಯಣ ಸಿಂಗ್ ಮಾತನಾಡಿ, ಮೊದಲ ಪೀಠಾಸೀನಾಧಿಕಾರಿಗಳ ಸಮ್ಮೇಳನ 1921ರಲ್ಲಿ ಮತ್ತು ಶತಮಾನತದ ಸಮ್ಮೇಳನ ಎರಡೂ ಕೂಡ ಹಿಮಾಚಲ ಪ್ರದೇಶದಲ್ಲಿಯೇ ನಡೆಯುತ್ತಿರುವುದು ಸಂತಸದ ಸಂಗತಿ ಎಂದರು.
ಇದನ್ನೂ ಓದಿ : ಭಾರಿ ಮಳೆ ಸಾಧ್ಯತೆ :ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ
ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೆಕರ್, ಎರಡು ದಿನಗಳ ಸಮ್ಮೇಳನ ಫಲಪ್ರದವಾಗಿದೆ. ಪ್ರಜಾಪ್ರಭುತ್ವದ ಯಶಸ್ಸಿಗೆ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳನ್ನು ಜಾರಿಗೊಳಿಸಿ ಪ್ರಜಾಸತ್ತಾತ್ಮಕ ಮೌಲ್ಯಗಳ ಬಲವರ್ಧನೆಗೆ ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.
ಕರ್ನಾಟಕ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಹಿಮಾಚಲ ಪ್ರದೇಶದ ವಿಧಾನಸಭಾ ಸ್ಪೀಕರ್ ವಿಪಿನ್ ಸಿಂಗ್ ಪರಮಾರ್ ಸೇರಿದಂತೆ ವಿವಿಧ ರಾಜ್ಯಗಳ ವಿಧಾನ ಸಭಾಧ್ಯಕ್ಷರು ಹಾಗೂ ಸಭಾಪತಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ