ತಮಿಳುನಾಡಿನಲ್ಲಿ ಬೆಚ್ಚಿಬೀಳಿಸಿದ ಘಟನೆ: ಕರಡಿ ದಾಳಿ ಮಾಡಿ ಮೂವರ ಸ್ಥಿತಿ ಗಂಭೀರ
Team Udayavani, Nov 7, 2022, 10:20 AM IST
ತಮಿಳುನಾಡು : ಕರಡಿಯೊಂದು ದಾಳಿ ಮಾಡಿ ಮೂವರು ಗಂಭೀರ ಗಾಯಗೊಂಡ ಘಟನೆ ತಮಿಳುನಾಡಿನ ತೆಂಕಶಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶನಿವಾರ ನಡೆದಿದೆ.
ವ್ಯಕ್ತಿಯೊಬ್ಬರು ತಮ್ಮ ಬೈಕ್ ನಲ್ಲಿ ಅರಣ್ಯ ಪ್ರದೇಶದಲ್ಲಿ ತೆರಳುತ್ತಿದ್ದ ಸಂದರ್ಭ ಕರಡಿ ದಾಳಿ ನಡೆಸಿದೆ ಈ ವೇಳೆ ಆ ಪ್ರದೇಶದಲ್ಲಿ ಸಂಚರಿಸುತ್ತಿದ್ದ ಇತರರು ರಕ್ಷಣೆಗೆ ಬಂದಿದ್ದಾರೆ, ಆದರೂ ಕರಡಿ ಓಡಲಿಲ್ಲ ಈ ವೇಳೆ ಅಲ್ಲಿ ನೆರೆದ ಜನರು ಕರಡಿಯತ್ತ ಕಲ್ಲು ತೂರಾಟ ನಡೆಸಿದ್ದಾರೆ ಆದರೂ ಜಗ್ಗದ ಕರಡಿ ವ್ಯಕ್ತಿಯ ಮೇಲೆ ಮನಬಂದಂತೆ ದಾಳಿ ನಡೆಸಿದೆ, ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದಾಗ ಭಯಗೊಂಡ ಕರಡಿ ಜನರ ಮೇಲೆ ಹಾರಿ ದಾಳಿ ಮಾಡಿದೆ ಈ ವೇಳೆ ಮತ್ತೆ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ವಿಚಾರ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಗಂಭೀರ ಗಾಯಗೊಂಡ ಮೂವರನ್ನು ಕರಡಿ ಬಾಯಿಯಿಂದ ತಪ್ಪಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಕರಡಿಯನ್ನು ಸೆರೆ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡಲಾಯಿತು ಎಂದು ಅರಣ್ಯ ಇಲಾಖೆ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಘಟನೆಯಿಂದ ಮೂವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ : ಏರ್ ಏಷ್ಯಾ ವಿಮಾನದಲ್ಲಿ ತಾಂತ್ರಿಕ ದೋಷ: ಬೆಂಗಳೂರಿಗೆ ಬರಬೇಕಿದ್ದ ವಿಮಾನ ಪುಣೆಯಲ್ಲೇ ಬಾಕಿ