
ಆನೆಗಳ ಹಿಮ್ಮೆಟ್ಟಿಸಲು “ಜೇನು ಸೇನೆ’ ! ಮಧ್ಯಪ್ರದೇಶದಲ್ಲಿ ಹೊಸ ಪ್ರಯೋಗ
ಮೊರನಾ ಜಿಲ್ಲೆಯಲ್ಲಿ ರೈತರಿಗೆ ಜೇನು ಸಾಕಣೆಗೆ ಪ್ರೋತ್ಸಾಹ
Team Udayavani, Jan 23, 2023, 7:00 AM IST

ಭೋಪಾಲ: ಕರ್ನಾಟಕವೂ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಕಾಡಂಚಿನಲ್ಲಿ ಇರುವ ಕೃಷಿ ಭೂಮಿಗೆ ದಾಳಿ ಇಡುವುದು ಸಾಮಾನ್ಯ. ಅದನ್ನು ಪರಿಹರಿಸುವುದು ಹೇಗೆ ಎಂದು ಸರ್ಕಾರಗಳು, ರೈತರು ತಲೆಕೆಡಿಸಿಕೊಂಡಿರುವಂತೆಯೇ, ಮಧ್ಯಪ್ರದೇಶದಲ್ಲಿ ಅದಕ್ಕೆ ಪರಿಹಾರ ಕಂಡುಕೊಳ್ಳಲು ಪ್ರಯತ್ನ ಮಾಡಲಾಗಿದೆ. ಆನೆಗಳನ್ನು ಹಿಮ್ಮೆಟ್ಟಿಸಲು ಜೇನು ಸೇನೆಯನ್ನು ಬಳಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಆನೆಗಳು ಸ್ವಭಾವತಃ ಜೇನುನೊಣಗಳಿಗೆ ಹೆದರುತ್ತವೆ ಮಾತ್ರವಲ್ಲದೆ ಅವು ಇರುವ ಪ್ರದೇಶಕ್ಕೆ ಪ್ರವೇಶಿಸಲು ಗಜ ಪಡೆ ಹಿಂಜರಿಯುತ್ತವೆ. ಈ ಸ್ವಭಾವದ ಉಪಯೋಗವನ್ನೇ ಮಧ್ಯಪ್ರದೇಶ ಸರ್ಕಾರ ಪಡೆದುಕೊಂಡಿದೆ. ಅದಕ್ಕಾಗಿ “ಹನಿ ಮಿಷನ್ ‘ ಎನ್ನುವ ಯೋಜನೆ ರೂಪಿಸಿದೆ.
ಮೊರೆನಾ ಜಿಲ್ಲೆಯಲ್ಲಿ ಯೋಜನೆಯ ಉದ್ಘಾಟನೆ ಭಾಗವಾಗಿ 10 ಫಲಾನುಭವಿಗಳಿಗೆ 100 ಜೇನು ಸಾಕಾಣಿಕೆ ಪೆಟ್ಟಿಗೆಗಳನ್ನು ನೀಡಿದೆ. ರಾಜ್ಯದ ಎಲ್ಲ ರೈತರಿಗೂ ತಮ್ಮ ತೋಟಗಳಲ್ಲಿ ಇತರೆ ಬೆಳೆಗಳ ನಡುವೆ ಜೇನು ಸಾಕಾಣಿಕೆ ಮಾಡುವಂತೆ ಸೂಚನೆ ನೀಡಿದೆ.
ಹಾಥಿ ಮಿತ್ರ ದಳ:
ಆನೆಗಳಿಂದಾಗುತ್ತಿರುವ ಬೆಳೆಹಾನಿಯನ್ನು ರಕ್ಷಿಸುವುದರ ಜತೆಗೆ ಅವುಗಳಿಗೆ ತೊಂದರೆ ನೀಡದಂತೆ ಹಿಮ್ಮೆಟ್ಟಿಸಲು ಅನುವಾಗುವಂತೆ “ಹಾಥಿ ಮಿತ್ರದಳ’ ವನ್ನು ಸರ್ಕಾರ ಸ್ಥಾಪಿಸಿದೆ.
ಉಪಟಳವೇಕೆ ?
ನೆರೆ ರಾಜ್ಯ ಛತ್ತೀಸ್ಗಢದೊಂದಿಗೆ ಗಮಧ್ಯಪ್ರದೇಶ ಗಡಿ ಹಂಚಿಕೊಂಡಿದೆ. ಗಡಿ ಭಾಗದಲ್ಲಿ ಬೆಳೆಯಲಾಗುವ ಮಹುವಾ ಹೂಗಳ ಬೆಳೆಗಳನ್ನು ಅರಸಿ,ಆನೆಗಳು ಮಧ್ಯಪ್ರದೇಶ ಪ್ರವೇಶಿಸುತ್ತಿವೆ. ಹೀಗಾಗಿ, ಅಲ್ಲಿ ಕಾಡಾನೆಗಳ ಸಮಸ್ಯೆಗಳ ಹೆಚ್ಚಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh: ಮದುವೆಯಾಗಿ 17 ದಿನದಲ್ಲೇ ಪತ್ನಿಯ ಕತ್ತು ಸೀಳಿ ಹತ್ಯೆಗೈದ ಪತಿ

ಒಡಿಶಾದಲ್ಲಿ ಮತ್ತೊಂದು ದುರಂತ; ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು: ಆರು ಮಂದಿ ಸಾವು

Mumbai: ಭೀಕರ ಹತ್ಯೆ; ದೇಹದ ಭಾಗವನ್ನು ತುಂಡು ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಪ್ರಿಯಕರ

ಸುರಿನಾಮ್ ಅಭಿವೃದ್ಧಿಗೆ ಭಾರತದ ಬೆಂಬಲ: ದ್ರೌಪದಿ ಮುರ್ಮು

Kerala: ದೇವರನಾಡಿನಲ್ಲಿ ಪರಿಸರ ಸಂರಕ್ಷಣೆಗೆ ಸರ್ಕಾರದಿಂದ ದೈವಿಕಮಾರ್ಗ !
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
ಹೊಸ ಸೇರ್ಪಡೆ

Chitradurga : 39 ರ ಹರೆಯದ ಪೊಲೀಸ್ ಅಧಿಕಾರಿ ಹೃದಯಾಘಾತದಿಂದ ಮೃತ್ಯು

‘ಯಾವ ಮೋಹನ ಮುರಳಿ ಕರೆಯಿತು…’: ಶ್ವಾನ ಪ್ರೀತಿಯ ಸುತ್ತ ಮತ್ತೊಂದು ಚಿತ್ರ

Vijayapura ;ವಾಲ್ ಟ್ಯಾಂಕ್ ನಲ್ಲಿ ಬಿದ್ದು ಸಾಹಿತಿ ರಾಜೇಂದ್ರ ಬಿರಾದಾರ ಮೃತ್ಯು

Ramanagara : ಭೀತಿ ಮೂಡಿಸಿದ್ದ ಒಂಟಿ ಸಲಗ ಸೆರೆ ; ಕಾರ್ಯಾಚರಣೆ ಯಶಸ್ವಿ

ಪಿಎಸ್ ಜಿ ತೊರೆದು ಅಮೆರಿಕದ ಕ್ಲಬ್ ಸೇರಲಿದ್ದಾರೆ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ