ನದಿಗೆ ಬಿಯರ್ ಬಾಟಲಿ: ಗೋವಾದಲ್ಲಿ ಪ್ರವಾಸಿಗರ ವಾಹನ ಬೆನ್ನಟ್ಟಿ ದಂಡ !
Team Udayavani, May 27, 2022, 6:33 PM IST
ಪಣಜಿ: ಗೋವಾಕ್ಕೆ ಬಂದ ಪ್ರವಾಸಿಗರು ಇಲ್ಲಿ ಬೇಕಾಬಿಟ್ಟಿಯಾಗಿ ಎಲ್ಲೆಂದರಲ್ಲಿ ತ್ಯಾಜ್ಯವಸ್ತುಗಳನ್ನು ಎಸೆದು ಹೋಗುವುದು ಕಂಡುಬರುತ್ತದೆ. ಇಂತದ್ದೊಂದು ಘಟನೆಯಲ್ಲಿ ಟ್ರಾಫಿಕ್ ಪೋಲಿಸರು ಪ್ರವಾಸಿಗರ ವಾಹನದ ಬೆನ್ನಟ್ಟಿ ಬಂದು ದಂಡ ವಿಧಿಸಿದ ಘಟನೆ ಪಣಜಿಯಲ್ಲಿ ನಡೆದಿದೆ.
ಪಣಜಿಯ ಮಾಂಡವಿ ನದಿಯ ಅಟಲ್ ಸೇತುವೆಯ ಮೇಲಿಂದ ವೇಗವಾಗಿ ಬರುತ್ತಿದ್ದ ಪ್ರವಾಸಿಗರ ಕಾರಿನಿಂದ ನದಿಗೆ ಬಿಯರ್ ಬಾಟಲಿಗಳನ್ನು ಎಸೆಯುತ್ತಿರುವ ದೃಶ್ಯ ಟ್ರಾಫಿಕ್ ಪೋಲಿಸರ ಕಣ್ಣಿಗೆ ಬಿದ್ದಿದೆ. ಈ ಕೂಡಲೆ ಆ ಪ್ರವಾಸಿಗರ ಕಾರನ್ನು ಬೆನ್ನಟ್ಟಿ ಬಂದ ಪೋಲಿಸರು ಪ್ರವಾಸಿಗರಿಗೆ ಬುದ್ದಿ ಹೇಳಿ ನಂತರ ದಂಡ ವಿಧಿಸಿದ ಘಟನೆ ನಡೆದಿದೆ.
ಮಹಾರಾಷ್ಟ್ರದಿಂದ ಆಗಮಿಸಿದ ಪ್ರವಾಸಿಗರು ಮಾಡಿದ ತಪ್ಪಿಗೆ ದಂಡ ಭರಿಸಿ ತೆರಳುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ 24ಗಂಟೆಯಲ್ಲಿ 18,930 ಕೋವಿಡ್ ಪ್ರಕರಣ ದೃಢ; 35 ಮಂದಿ ಸಾವು
ತಮಿಳುನಾಡನ್ನು ಎರಡು ರಾಜ್ಯಗಳನ್ನಾಗಿ ಇಬ್ಭಾಗ ಮಾಡಬೇಕು: ಬಿಜೆಪಿ ಮುಖಂಡ ನೈನಾರ್
ಅಡುಗೆ ಎಣ್ಣೆ ಬೆಲೆ ಪ್ರತಿ ಲೀಟರ್ಗೆ 10 ರೂ.ಗಳಿಂದ 15 ರೂ. ವರೆಗೆ ಇಳಿಕೆ
ಕೋವಿಡ್ ಲಸಿಕೆಯ 2ನೇ, ಮುನ್ನೆಚ್ಚರಿಕಾ ಡೋಸ್ ನಡುವಿನ ಅಂತರ 6 ತಿಂಗಳಿಗೆ ಇಳಿಕೆ
ಉತ್ತರ ನೀಡಲು ಮೂರು ವಾರಗಳ ಅವಕಾಶ: 18 ದಿನಗಳಲ್ಲಿ 8 ಬಾರಿ ಲೋಪ