ಆರ್ಥಿಕ ಕಾರಿಡಾರ್: ಭಾರತದ ಜತೆ ಚರ್ಚೆಗೆ ಸಿದ್ಧ
Team Udayavani, Jan 30, 2018, 9:59 AM IST
ಬೀಜಿಂಗ್/ಕೋಲ್ಕತಾ: ಪಾಕಿಸ್ತಾನದ ಜತೆ ಸಹಿ ಹಾಕಲಾಗಿರುವ 50 ಸಾವಿರ ಕೋಟಿ ರೂ. ವೆಚ್ಚದ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ವಿವಾದವನ್ನು ಬಗೆಹರಿಸುವ ಸಲುವಾಗಿ ಭಾರತದ ಜತೆ ಚರ್ಚೆಗೆ ಸಿದ್ಧವಿರುವುದಾಗಿ ಚೀನಾ ಹೇಳಿದೆ. ಪಾಕ್ ಆಕ್ರಮಿತ ಕಾಶ್ಮೀರದ ಭಾಗದಲ್ಲಿ ಈ ಯೋಜನೆ ಹಾದುಹೋಗುತ್ತಿದ್ದು, ಅದರ ಅನ್ವಯ ನಿರ್ಮಾಣ ಮಾಡಲಾಗುವ ಬೆಲ್ಟ್ ಆ್ಯಂಡ್ ರೋಡ್ ಇನಿಶಿಯೇಟಿವ್ (ಬಿಆರ್ಐ)ಗೆ ಭಾರತವು ಆಕ್ಷೇಪ ವ್ಯಕ್ತಪಡಿಸಿದೆ. ಚೀನಾದಲ್ಲಿ ಭಾರತದ ರಾಯಭಾರಿಯಾಗಿರುವ ಗೌತಮ್ ಬಂಬಾವಲೆ ಅವರು ಸರ್ಕಾರಿ ಸ್ವಾಮ್ಯದ “ಗ್ಲೋಬಲ್ ಟೈಮ್ಸ್’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಪೂರಕವಾಗಿ ಕೇಂದ್ರದ ಜತೆಗೆ ಮಾತುಕತೆ ನಡೆಸುವ ಪ್ರಸ್ತಾಪವನ್ನು ಚೀನಾ ಮುಂದಿಟ್ಟಿದೆ.
ಸಂದರ್ಶನದಲ್ಲಿ ಸಿಪಿಇಸಿ ಮತ್ತು ಅದರ ವ್ಯಾಪ್ತಿಯಲ್ಲಿ ಜಾರಿಯಾಗಲಿರುವ ಯೋಜನೆಗಳ ಬಗ್ಗೆ ಭಾರತದ ಆಕ್ಷೇಪ ತಳ್ಳಿಹಾಕಲಾಗದು ಎಂದು ಬಂಬಾವಲೆ ಹೇಳಿದ್ದರು. ಜತೆಗೆ ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆಯಾಗುತ್ತದೆ ಎಂದಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಚೀನಾ ವಿದೇಶಾಂಗ ಇಲಾಖೆ ವಕ್ತಾರ “ಸಂದರ್ಶನದಲ್ಲಿ ಭಾರತದ ರಾಯಭಾರಿ ವ್ಯಕ್ತಪಡಿಸಿದ ಅಭಿಪ್ರಾಯ ಗಮನಿಸಲಾಗಿದೆ. ಈ ಬಗ್ಗೆ ಭಾರತ ಜತೆ ಮಾತುಕತೆ ನಡೆಸಲಾಗುತ್ತದೆ’ ಎಂದು ಹೇಳಿದ್ದಾರೆ.
ಇದೇ ವೇಳೆ ಭಾರತ ಮತ್ತು ಚೀನಾ ನಡುವೆ ಇರುವ ಡೋಕ್ಲಾಂ ವಿವಾದವನ್ನು ಸಮಾಧಾನಕರವಾಗಿಯೇ ಬಗೆಹರಿಸಬೇಕು ಎಂದಿರುವ ನೆರೆಯ ರಾಷ್ಟ್ರ, ವಿವಾದಿತ ಪ್ರದೇಶದಲ್ಲಿ ನಿರ್ಮಿಸುತ್ತಿರುವ ಕಾಮಗಾರಿಯನ್ನು ಸಮರ್ಥಿಸಿಕೊಂಡಿದೆ.
ಚೀನಾದಲ್ಲಿ ಭಾರತದ ರಾಯಭಾರಿ ಪ್ರಬಲ ಆಕ್ಷೇಪದ ಬಳಿಕ ತಗ್ಗಿದ ಚೀನಾ ಡೋಕ್ಲಾಂನಲ್ಲಿ ಸೇನಾ ಕಾಮಗಾರಿಗೆ ಸಮರ್ಥನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ