Bengal;ಸಂದೇಶಖಾಲಿಯಲ್ಲಿ ಪೊಲೀಸರೊಂದಿಗೆ ಘರ್ಷಣೆ: ಬಿಜೆಪಿ ರಾಜ್ಯಾಧ್ಯಕ್ಷ ಆಸ್ಪತ್ರೆಗೆ
Team Udayavani, Feb 14, 2024, 6:11 PM IST
ಕೋಲ್ಕತಾ: ಟಿಎಂಸಿ ನಾಯಕ ಶಾಜಹಾನ್ ಶೇಖ್ ಮತ್ತು ಬೆಂಬಲಿಗರು ತಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗಿಳಿದಿರುವ ಸಂದೇಶ್ಖಾಲಿಗೆ ಪ್ರವೇಶಿಸದಂತೆ ತಡೆದಾಗ ಪಕ್ಷದ ಕಾರ್ಯಕರ್ತರು ಪೊಲೀಸ್ ಸಿಬಂದಿಯೊಂದಿಗೆ ಘರ್ಷಣೆ ನಡೆದ ಕಾರಣ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಗಾಯಗೊಂಡಿದ್ದಾರೆ.
ಉತ್ತರ 24 ಪರಗಣ ಜಿಲ್ಲೆಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಪೊಲೀಸರೊಂದಿಗೆ ವಾಗ್ವಾದದ ಸಂದರ್ಭದಲ್ಲಿ, ಲೋಕಸಭಾ ಸಂಸದರೂ ಆದ ಮಜುಂದಾರ್ ನಿಯಂತ್ರಣ ಕಳೆದುಕೊಂಡು ಅವರು ನಿಂತಿದ್ದ ಕಾರಿನ ಬಾನೆಟ್ ಮೇಲೆ ಬಿದ್ದಿದ್ದಾರೆ.ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಜೆಪಿ ನಾಯಕರು ಸಂದೇಶಖಾಲಿ ಕಡೆಗೆ ತೆರಳದಂತೆ ತಡೆಯಲು ಭಾರೀ ಪೊಲೀಸ್ ಬಂದೋಬಸ್ತ್ ಮಾಡಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಬಿಜೆಪಿ ನಾಯಕರು ನಿಷೇಧಾಜ್ಞೆಗಳನ್ನು ಧಿಕ್ಕರಿಸಿ ಸಂದೇಶಖಾಲಿ ಕಡೆಗೆ ಪ್ರತಿಭಟನಾ ಮೆರವಣಿಗೆಯನ್ನು ಮುಂದುವರೆಸಿದ ಕಾರಣ ಪೊಲೀಸರೊಂದಿಗೆ ಸಂಘರ್ಷದ ವಾತಾವರಣ ನಿರ್ಮಾಣಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ