ಪಶ್ಚಿಮ ಬಂಗಾಳವನ್ನು ವಿಭಜಿಸಲು ಕೇಂದ್ರ ಸಂಚು ರೂಪಿಸಿದೆ : ದೀದಿ ಆರೋಪ
Team Udayavani, Jun 23, 2021, 9:01 PM IST
ಕೋಲ್ಕತ್ತಾ : ಕೇಂದ್ರ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೆ ವಾಗ್ದಾಳಿ ಮಾಡಿದ್ದಾರೆ.
ಕೇಂದ್ರ ಸರ್ಕಾರದ ಕೋವಿಡ್ ಸೋಂಕಿನ ಎರಡನೇ ಅಲೆಯ ನಿರ್ವಹಣೆಯನ್ನು ಟೀಕಿಸುತ್ತಾ, ಕೋಲ್ಕತ್ತಾದಲ್ಲಿ ಸುದ್ದಿಗೋಷ್ಟೀಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದ ಜಂಗ್ಲೆಮಹಲ್ ಪ್ರದೇಶದಿಂದ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವನ್ನು ರಚಿಸಬೇಕೆಂದು ಅಲಿಪುರ್ದಾರ್ನ ಬಿಜೆಪಿ ಸಂಸದ ಜಾನ್ ಬಾರ್ಲಾ ಒತ್ತಾಯಿಸಿದ್ದನ್ನು ಉಲ್ಲೇಖಿಸಿ, ಪಶ್ಚಿಮ ಬಂಗಾಳ ರಾಜ್ಯವನ್ನು ವಿಭಜಿಸಲು ಕೇಂದ್ರ ಸರ್ಕಾರ ಸಂಚು ರೂಪಿಸಿದೆ ಎಂದು ಅವರು ಆರೋಪಿಸಿದ್ದಾರೆ.
ಇದನ್ನೂ ಓದಿ : ಗಂಗಾವತಿ : ಪಡಿತರ ಅಕ್ಕಿ ಅಕ್ರಮ ಸಾಗಾಟ : ಆಹಾರ ಇಲಾಖೆ- ಪೊಲೀಸರ ದಾಳಿ
ಇನ್ನು, ರಾಜ್ಯದ ಮಾಜಿ ಮುಖ್ಯ ಕಾರ್ಯದರ್ಶಿ ಅಲಾಪನ್ ಬಂಡ್ಯೋಪಾಧ್ಯಾಯರಿಗೆ ಬರೆದ ಪತ್ರದ ಬಗ್ಗೆ ಕೇಳಿದಾಗ, “ಅವರು ಇದರ ವಿರುದ್ಧ ಹೋರಾಡಲು ಸಮರ್ಥ ವ್ಯಕ್ತಿ. ನಮ್ಮ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ” ಎಂದು ಹೇಳಿದ್ದಾರೆ.
ಅಲಾಪನ್ ಬಂಡ್ಯೋಪಾಧ್ಯಾಯ ಅವರನ್ನು ಕೇಂದ್ರ ಸರ್ಕಾರ ಬಲಿ ಪಶು ಮಾಡಿದೆ. ಒಂದು ತಿಂಗಳಲ್ಲಿ ತನ್ನ ಸಹೋದರ ಮತ್ತು ತಾಯಿಯನ್ನು ಕಳೆದುಕೊಂಡ ವ್ಯಕ್ತಿಯನ್ನು ಕೇಂದ್ರ ಬಲಿಪಶು ಮಾಡುತ್ತಿದ್ದಾರೆ ಎಂದು ಕೇಂದ್ರವು ತಿಳಿದಿರಬೇಕು … ತನ್ನ ಇಡೀ ಜೀವನವನ್ನು ದೇಶಕ್ಕಾಗಿ ಕೆಲಸ ಮಾಡಿದರೂ ಮಾನಸಿಕ ಸಂಕಟದಲ್ಲಿದ್ದಾರೆ.
ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಿತ್ತು, ಶೇಕಡಾ 33 ರಷ್ಟಿದ್ಧ ಪಾಸಿಟಿವಿಟಿ ರೇಟ್ ಈಗ ಶೇಕಡಾ 3ಕ್ಕೆ ಬಂದು ತಲುಪಿದೆ. ಉತ್ತರ ಪ್ರದೇಶದಲ್ಲಿ ಕೋವಿಡ್ ಸೋಂಕಿನ ಸಾವಿನ ಪ್ರಮಾಣ ಹೆಚ್ಚಿದೆ. ನದಿಗಳ ಮೂಲಕ ನೂರಾರು ಕೋವಿಡ್ ಮೃತ ದೇಹಗಳು ತೇಲಿ ಬರುತ್ತಿವೆ. ಬಿಹಾರದ ಮೂಲಕ ಬಂಗಾಳಕ್ಕೆ ಬರುತ್ತವೆ. ಈ ವ್ಯವಸ್ಥೆಯ ಬಗ್ಗೆ ನಿಮಗೆ ನಾಚಿಕೆಯಾಗುವುದಿಲ್ಲವೇ..? ಎಂದು ದೀದಿ ಕಟುವಾಗಿ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ : ಅಲೋಪತಿ ವಿರುದ್ಧ ಹೇಳಿಕೆ: ಎಫ್ ಐಆರ್ ವಿಚಾರಣೆಗೆ ತಡೆ ನೀಡಿ- ಬಾಬಾ ಸುಪ್ರೀಂಗೆ ಮೊರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ