ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ ಮಾಜಿ ಸಿಎಂ ಪುತ್ರಿ


Team Udayavani, Jun 21, 2023, 6:14 PM IST

ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ ಮಾಜಿ ಸಿಎಂ ಪುತ್ರಿ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರ ಪುತ್ರಿ ಸುಚೇತನಾ ಭಟ್ಟಾಚಾರ್ಯ ಅವರು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ್ದಾರೆ.

ಇತ್ತೀಚೆಗೆ ಎಲ್​ಜಿಬಿಟಿಕ್ಯೂ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಸುಚೇತನಾ ತಾನು ಪುರುಷ ಎಂದು ಗುರುತಿಸಿಕೊಂಡಿದ್ದೇನೆ ಮತ್ತು ದೈಹಿಕವಾಗಿಯೂ ಪುರುಷನಾಗಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ “ಇಂಡಿಯಾ ಟುಡೇ” ಮಾತನಾಡಿರುವ ಅವರು, “ ನನಗೆ ನನ್ನ ಪೋಷಕರ ಗುರುತು ಅಥವಾ ಕುಟುಂಬದ ಗುರುತು ದೊಡ್ಡ ವಿಷಯವಲ್ಲ. ನನ್ನ ಎಲ್​ಜಿಬಿಟಿಕ್ಯೂ( LGBTQ) ಚಳುವಳಿಯ ಭಾಗವಾಗಿ ನಾನು ಇದನ್ನು ಮಾಡುತ್ತಿದ್ದೇನೆ. ಟ್ರಾನ್ಸ್ ಮ್ಯಾನ್ ಆಗಿ ನಾನು ಪ್ರತಿದಿನ ಎದುರಿಸುತ್ತಿರುವ ಸಾಮಾಜಿಕ ಕಿರುಕುಳವನ್ನು ನಿಲ್ಲಿಸಲು ನಾನು ಬಯಸಿದ್ದೇನೆ. ನಾನು ವಯಸ್ಕನಾಗಿದ್ದೇನೆ. ನನಗೆ ಈಗ 41 ವರ್ಷ ಆಗಿದೆ ನನ್ನ ಜೀವನಕ್ಕೆ ಸಂಬಂಧಿಸಿದ ಎಲ್ಲಾ ನಿರ್ಧಾರಗಳನ್ನು ನಾನೇ ತೆಗೆದುಕೊಳ್ಳಬಹುದು. ಅದೇ ರೀತಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ದಯವಿಟ್ಟು ನನ್ನ ಪೋಷಕರನ್ನು ಇದಕ್ಕೆ ಎಳೆಯಬೇಡಿ. ಮಾನಸಿಕವಾಗಿ ತನ್ನನ್ನು ತಾನು ಪುರುಷನೆಂದು ಪರಿಗಣಿಸುವವನು ಸಹ ಮನುಷ್ಯನೇ, ನಾನು ಮಾನಸಿಕವಾಗಿ ಪುರುಷ ಎಂದು ಪರಿಗಣಿಸಿದ್ದೇನೆ. ಅದು ಈಗ ದೈಹಿಕವಾಗಿರಬೇಕೆಂದು ನಾನು ಬಯಸಿದ್ದೇನೆ” ಎಂದಿದ್ದಾರೆ.

“ನನ್ನ ಈ ನಿರ್ಧಾರದ ವಿರುದ್ಧ ಏನೇ ಬಂದರೂ ನಾನು ಹೋರಾಡುತ್ತೇನೆ. ಯಾರು ಏನೇ ಹೇಳಿದರೂ ನಾನು ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಲು ಸಿದ್ದ. ದಯವಿಟ್ಟು ಮಾಧ್ಯಮಗಳು ಈ ಸುದ್ದಿಯನ್ನು ತಿರುಚಿಕೊಂಡು ಹಾಕಬೇಡಿ”ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ನನ್ನನು ಬಾಲ್ಯದಿಂದಲೂ ಅರ್ಥ ಮಾಡಿಕೊಂಡ ನನ್ನ ಪೋಷಕರು ನನ್ನ ನಿರ್ಧಾರವನ್ನು ಬೆಂಬಲಿಸಬಹುದು ಎಂದು ಅವರು ಹೇಳಿದ್ದಾರೆ.

ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ʼಸುಚೇತನಾʼ ದಿಂದ ‘ಸುಚೇತನ್’ ಆಗಲು ಬಯಸಿದ್ದೇನೆ.  ಈ ಸಂಬಂಧ ಕಾನೂನು ಸಲಹೆಯನ್ನು ತೆಗೆದುಕೊಳ್ಳಲು ಪ್ರಾರಂಭಿಸಿದ್ದೇನೆ ಮತ್ತು ಕಾರ್ಯವಿಧಾನಕ್ಕೆ ಅಗತ್ಯವಿರುವ ಎಲ್ಲಾ ಪ್ರಮಾಣಪತ್ರಗಳಿಗಾಗಿ ಮನೋವೈದ್ಯರನ್ನು ಸಂಪರ್ಕಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.