ಪ.ಬಂಗಾಲದ ವಿವಿಗಳಿಗಿನ್ನು ಸಿಎಂ ಕುಲಪತಿ
Team Udayavani, May 27, 2022, 6:45 AM IST
ಕೋಲ್ಕತ: ಪಶ್ಚಿಮ ಬಂಗಾಳದಲ್ಲಿ ರಾಜ್ಯ ಸರ್ಕಾರದ ಅಧೀನದಲ್ಲಿರುವ ಎಲ್ಲ ವಿಶ್ವವಿದ್ಯಾಲಯಗಳಿಗೆ ರಾಜ್ಯಪಾಲರನ್ನು ಕುಲಪತಿಯಾಗಿಸುವ ಬದಲು ಮುಖ್ಯಮಂತ್ರಿಯನ್ನೇ ಕುಲಪತಿಯಾಗಿ ನೇಮಿಸುವ ಪ್ರಸ್ತಾವನೆಯನ್ನು ಮಮತಾ ಬ್ಯಾನರ್ಜಿ ಅವರ ಸಂಪುಟ ಮಾಡಿದೆ.
ಗುರುವಾರ ಕೋಲ್ಕತದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಅದರಲ್ಲಿ ಈ ಪ್ರಸ್ತಾವನೆ ಮಾಡಲಾಗಿದೆ. “ಮುಖ್ಯಮಂತ್ರಿಯನ್ನೇ ವಿಶ್ವವಿದ್ಯಾಲಯಗಳ ಕುಲಪತಿಗಳಾಗಿಸುವ ಪ್ರಸ್ತಾವನೆಯನ್ನು ಶೀಘ್ರವೇ ವಿಧಾನಸಭೆಯಲ್ಲಿ ಮಸೂದೆ ರೂಪದಲ್ಲಿ ಮಂಡಿಸಲಾಗುವುದು’ ಎಂದು ರಾಜ್ಯ ಶಿಕ್ಷಣ ಸಚಿವ ಬ್ರಾತ್ಯ ಬಸು ತಿಳಿಸಿದ್ದಾರೆ. ಈ ಬಗ್ಗೆ ರಾಜ್ಯಪಾಲರಾಗಿರುವ ಜಗದೀಪ್ ಧಂಖರ್ ಅವರು ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಪಶ್ಚಿಮ ಬಂಗಾಳದಲ್ಲಿ ಒಟ್ಟು 17 ವಿಶ್ವವಿದ್ಯಾಲಯಗಳು ರಾಜ್ಯ ಸರ್ಕಾರದ ಅಧೀನದಲ್ಲಿವೆ.
ಈ ಹಿಂದೆ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವರಾಗಿರುವ ಕೆ.ಪೊನ್ಮುಡಿ ಅವರು ಇಂಥದ್ದೇ ಪ್ರಸ್ತಾಪ ಮಾಡಿದ್ದರು. “ರಾಜ್ಯಪಾಲರು ನೇಮಕವಾದವರು. ಆದರೆ ಸಿಎಂ ಆಯ್ಕೆಯಾದವರು. ಹಾಗಾಗಿ ಕುಲಪತಿ ಸ್ಥಾನ ಮುಖ್ಯಮಂತ್ರಿಗೇ ಸೇರಬೇಕು’ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ