ಪಶ್ಚಿಮ ಬಂಗಾಳ: ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರ ಆಕ್ರೋಶ
Team Udayavani, Mar 16, 2021, 4:52 PM IST
ಕೊಲ್ಕತ್ತಾ : ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯ ಕುರಿತು ರಾಜ್ಯದ ವಿವಿಧ ಭಾಗದ ನೂರಾರು ಬಿಜೆಪಿ ಕಾರ್ಯಕರ್ತರು ಇಲ್ಲಿನ ಪಕ್ಷದ ಚುನಾವಣಾ ಕಚೇರಿ ಎದುರುಗಡೆ ಮಂಗಳವಾರ(ಮಾ.16) ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.
ಪಕ್ಷದ ಕ್ಯಾನಿಂಗ್ ವೆಸ್ಟ್, ಮಗ್ರಾಹತ್, ಕುಲ್ತಾಲಿ, ಜಾಯ್ ನಗರ್ ಮತ್ತು ಬಿಷ್ಣುಪುರದ ನೂರಾರು ಕಾರ್ಯಕರ್ತರು ವಿಧಾನ ಸಭಾ ಚುನಾವಣೆಗೆ ಆಯ್ಕೆ ಮಾಡಲಾದ ಅಭ್ಯರ್ಥಿಗಳ ಪಟ್ಟಿಯನ್ನು ಖಂಡಿಸಿ ಪ್ರತಿಭಟನೆಯನ್ನು ಮಾಡಿದ್ದಾರೆ. ಕೆಲವೆಡೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿಗೂ ಈ ಘಟನೆ ಸಾಕ್ಷಿಯಾಗಿದೆ.
ಓದಿ : ‘ಬ್ಲ್ಯಾಕ್ ಮೇಲ್ ಸಂಪುಟ’ ‘ಕಾಂಗ್ರೆಸ್ ಹಗೆತನ’: ಮತ್ತೆ ಕಾಂಗ್ರೆಸ್- ಬಿಜೆಪಿ ಟ್ವೀಟ್ ವಾರ್
ಕ್ಯಾನಿಂಗ್ ವೆಸ್ಟ್ ವಿದಾನ ಸಭಾ ಕ್ಷೇತ್ರದಿಂದ ಅರ್ನಾಬ್ ರಾಯ್ ಅವರ ಉಮೇದುವಾರಿಕೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕೆಂದು ನಾವು ಬಯಸುತ್ತೇವೆ. ಕೇವಲ ಐದು ದಿನಗಳ ಹಿಂದಷ್ಟೇ ತೃಣಮೂಲ ಕಾಂಗ್ರೆಸ್ ನಿಂದ ಬಂದು ಬಿಜೆಪಿಗೆ ಸೇರ್ಪಡೆಗೊಂಡ ಅವರಿಗೆ ನಾಮ ನಿರ್ದೇಶನವನ್ನು ನೀಡಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತ ಪಡಿಸಿದರು.
ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದ ತೃಣಮೂಲ ಕಾಂಗ್ರೆಸ್ ನಿಂದ ಬಂದ ನಾಯಕರಿಗೆ ಬಿಜೆಪಿ ನಾಮನಿರ್ದೇಶನವನ್ನು ನೀಡಿದೆ, ಕೆಲವರು ಬಿಜೆಪಿ ನಾಯಕರ ವಿರುದ್ಧ ಈ ಹಿಂದೆ ಜಾತಿ ನಿಂದನೆ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಪ್ರತಿಭಟನಾ ನಿರತ ಬಿಜಪಿ ಕಾರ್ಯಕರ್ತರು ಆರೋಪಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ ನಿಂದ ಬಿಜೆಪಿಗೆ ವಲಸೆ ಬಂದವರಿಗೆ ನೀಡಿದ ನಾಮ ನಿರ್ದೇಶನವನ್ನು ಹಿಂತೆಗೆದುಕೊಳ್ಳದಿದ್ದರೇ, ನಾವು ಸುಮ್ಮನೆ ಕುಳಿತುಕೊಳ್ಳುತ್ತೇವೆ. ಪಕ್ಷಕ್ಕಾಗಿ ಕೆಲಸ ಮಾಡುವುದಿಲ್ಲವೆಂದು ಮಗ್ರಾಹತ್ ನ ಬಿಜೆಪಿ ಪಕ್ಷದ ಕಾರ್ಯಕರ್ತ ರೋನಿ ಮನ್ನಾ ಆಕ್ರೊಶ ಹೊರ ಹಾಕಿದ್ದಾರೆ.
ಓದಿ : ಪಶ್ಚಿಮ ಬಂಗಾಳ: ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಸ್ವಪನ್ ದಾಸ್ ಗುಪ್ತಾ ರಾಜಿನಾಮೆ
ಈ ಸಂದರ್ಭ, ಬಿಜೆಪಿ ಚುನಾವಣಾ ಕಚೇರಿ ಎದುರು ಹಾಕಲಾಗಿದ್ದ ಬ್ಯಾರಿಕೇಡ್ ಗಳನ್ನು ತೆಗೆಯಲು ಪ್ರತಿಭಟನಾಕಾರರು ಮುಂದಾದರು.
ಪಶ್ಚಿಮ ಬಂಗಾಳದಲ್ಲಿ ಮೂರನೇ ಮತ್ತು ನಾಲ್ಕನೇ ಹಂತದ ಚುನಾವಣೆಗೆ ಪಕ್ಷದ 63 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದ ನಂತರ ಭಾನುವಾರ ಸಂಜೆಯಿಂದ ಬಿಜೆಪಿಯ ಚುನಾವಣಾ ಕಚೇರಿ ಮತ್ತು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಪಕ್ಷದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಖಂಡಿಸಿ ನಡೆಸಿದ ಪ್ರತಿಭಟನೆ ಕೆಲವು ಕಡೆಗಳಲ್ಲಿ ಸ್ವಲ್ಪ ಮಟ್ಟಿಗೆ ಹಿಂಸಾಚಾರಕ್ಕೂ ತಿರುಗಿತು ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳಲ್ಲಿ ವರದಿಯಾಗಿವೆ.
ಬಿಜೆಪಿಗೆ ಹೆಚ್ಚು ಹೆಚ್ಚು ಮಂದಿ ಸೇರ್ಪಡೆಗೊಳ್ಳುತ್ತಿರುವ ಕಾರಣದಿಮದಾಗಿ ಆಕಂಕ್ಷಿಗಳ ಸಂಖ್ಯೆ ಜಾಸ್ತಿಯಾಗಿದೆ. ಈ ಸಮಸ್ಯೆಗಳನ್ನು ಪಕ್ಷ ಬಗೆಹರಿಸಲಿದೆ ಎಂದು ಬಿಜಿಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಯಮತನ್ ಬಸು ಸಮರ್ಥಿಸಿಕೊಂಡಿದ್ದಾರೆ.
ಓದಿ : ರಿಷಬ್-ಪ್ರಮೋದ್ ಸಂದರ್ಶನ: ”ಹೀರೋ” ಸಿನಿಮಾದ ತೆರೆಯ ಹಿಂದಿನ ಕಥೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್
ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ