ಬೆಂಗಳೂರಿಂದ ವಿಜಯವಾಡಕ್ಕೆ ಇನ್ನು 5 ಗಂಟೆ ಪ್ರಯಾಣ
Team Udayavani, Sep 30, 2022, 7:30 AM IST
ನವದೆಹಲಿ: ಇನ್ನು ಮುಂದೆ ಬೆಂಗಳೂರಿನಿಂದ ಆಂಧ್ರಪ್ರದೇಶದ ವಿಜಯವಾಡಕ್ಕೆ ಐದು ಗಂಟೆಗಳ ಅವಧಿಯಲ್ಲಿ ಪ್ರಯಾಣಿಸಲು ಸಾಧ್ಯ! ಕರ್ನಾಟಕದ ರಾಜಧಾನಿಯಿಂದ ಕಡಪಾ ಮೂಲಕ ವಿಜಯವಾಡದವರೆಗೆ 342 ಕಿಮೀ ದೂರಕ್ಕೆ ಗ್ರೀನ್ಫೀಲ್ಡ್ ಹೆದ್ದಾರಿಯನ್ನು 13,600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ.
ಆ ಕಾಮಗಾರಿ ಮುಕ್ತಾಯದ ಬಳಿಕ ಎರಡೂ ನಗರಗಳ ನಡುವೆ ಸದ್ಯ ಇರುವ 11 ಗಂಟೆಯ ಪ್ರಯಾಣದ ಅವಧಿ ಐದು ಗಂಟೆಗೆ ಇಳಿಯಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಗುರುವಾರ ಟ್ವೀಟ್ ಮಾಡಿದ್ದಾರೆ. ಜತೆಗೆ 75 ಕಿಮೀ ದೂರವೂ ಕಡಿಮೆಯಾಗಲಿದೆ ಎಂದು ಸಚಿವ ಗಡ್ಕರಿ ಬರೆದುಕೊಂಡಿದ್ದಾರೆ. ಇದರಿಂದ ಪ್ರಯಾಣದ ಅವಧಿಯಲ್ಲಿ 6 ಗಂಟೆ ಉಳಿತಾಯ ಆಗಲಿದೆ.
ಕರ್ನಾಟಕ ಮತ್ತು ಆಂಧ್ರಪ್ರದೇಶಗಳಿಗೆ ಈ ಹೆದ್ದಾರಿಯಿಂದ ಭಾರಿ ಪ್ರಯೋಜನ ಆಗಲಿದ್ದು, ವ್ಯಾಪಾರ ಮತ್ತು ವಾಣಿಜ್ಯಿಕ ವಹಿವಾಟುಗಳು ಹೆಚ್ಚಲಿವೆ. 2025-26ನೇ ವಿತ್ತೀಯ ವರ್ಷದ ವೇಳೆಗೆ ಕಾಮಗಾರಿ ಮುಕ್ತಾಯಗೊಳ್ಳುವ ನಿರೀಕ್ಷೆ ಇದೆ. ಗುಂಟೂರು, ಕಡಪಾ, ಕೋಪಾರ್ತಿಯಲ್ಲಿ ಉದ್ಯಮ ಮತ್ತು ಕೈಗಾರಿಕಾ ಚಟುವಟಿಕೆಗಳು ಹೆಚ್ಚಲಿವೆ.
ಮುಂದಿನ ಮೂರು ವರ್ಷಗಳಲ್ಲಿ ದೇಶದಲ್ಲಿ 26 ಹೊಸ ಗ್ರೀನ್ಫೀಲ್ಡ್ ಹೆದ್ದಾರಿಗಳು ನಿರ್ಮಾಣವಾಗಲಿವೆ ಎಂದು ಅವರು ಹೇಳಿದ್ದಾರೆ. ಬೆಂಗಳೂರು ಮತ್ತು ಚೆನ್ನೈ ನಡುವೆ ಇಂಥದ್ದೇ ಹೆದ್ದಾರಿ ನಿರ್ಮಾಣ ಮಾಡುವ ಬಗ್ಗೆ ಕೇಂದ್ರ ಸಚಿವರು ಈಗಾಗವೇ ಘೋಷಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?