ಬೆಂಗಳೂರು-ವಿಜಯವಾಡ ಕಾರಿಡಾರ್ಗೆ ನಿತಿನ್ ಗಡ್ಕರಿ ಅಸ್ತು
ಆಂಧ್ರ-ಕರ್ನಾಟಕ ಕೈಗಾರಿಕ ಕೇಂದ್ರಗಳ ಬೆಸೆಯುವಿಕೆಗೆ ಅನುಕೂಲ
Team Udayavani, Feb 26, 2023, 7:20 AM IST
ಹೈದರಾಬಾದ್: ಕರ್ನಾಟಕ -ಆಂಧ್ರಪ್ರದೇಶದ ನಡುವೆ ಸಂಪರ್ಕ ಬೆಸೆಯಲಿರುವ ಮಹತ್ತರ ಯೋಜನೆ “ಬೆಂಗಳೂರು-ವಿಜಯವಾಡ ಆರ್ಥಿಕ ಕಾರಿಡಾರ್’. ಇದರ ಭಾಗವಾಗಿರುವ 32 ಕಿ.ಮೀ. ಉದ್ದದ ಷಟ³ಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಶನಿವಾರ ಅನುಮೋದನೆ ನೀಡಿದ್ದಾರೆ.
ಆಂಧ್ರಪ್ರದೇಶದ ಚಂದ್ರಶೇಖರಪುರಂ ಹಾಗೂ ಪೋಲಾವರಂ ನಡುವೆ ನಿರ್ಮಾಣಗೊಳ್ಳಲಿರುವ 32 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ವಿಜಯವಾಡ ಎಕಾನಮಿಕ್ ಕಾರಿಡಾರ್ನ ನಿರ್ಮಾಣದ ಮಹತ್ತರ ಘಟ್ಟ ವಾಗಿದ್ದು, ಭಾರತಮಾಲಾ ಪ್ರಯೋಜನ ಯೋಜನೆ ಅನ್ವಯ 1,292.65 ಕೋ. ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ.
ಮೋದಿ ಸರಕಾರದ ಮಹತ್ತರ ಯೋಜನೆಗಳಲ್ಲಿ ಒಂದಾಗಿರುವ ಕಾರಿಡಾರ್, ಒಟ್ಟಾರೆ 342.5 ಕಿ.ಮೀ. ವ್ಯಾಪ್ತಿಯನ್ನು ಹೊಂದಿದೆ. ಇಷ್ಟೂ ದೂರ ಪೂರ್ಣಗೊಂಡರೆ ಅನಂತಪುರ, ಕಡಪ, ಗುಂಟೂರು ಸಹಿತ ಆಂಧ್ರಪ್ರದೇಶದ ಹಲವು ಕೈಗಾರಿಕ ಕೇಂದ್ರಗಳನ್ನು ಬೆಂಗಳೂರಿನಿಂದ ನೇರವಾಗಿ ತಲುಪಲು ಯೋಜನೆ ಅನುವು ಮಾಡಿಕೊಡುವ ಮೂಲಕ ಆರ್ಥಿಕ ವ್ಯವಹಾರಗಳಿಗೆ ಉತ್ತೇಜನ ನೀಡಲಿದೆ. ಅಲ್ಲದೇ ಬೆಂಗಳೂರು -ಕಡಪ-ವಿಜಯವಾಡಗಳ ನಡುವಿನ ಸಾರಿಗೆ ಸಮಯವನ್ನೂ ಕಡಿಮೆಗೊಳಿಸಲಿದೆ.
19,200 ಕೋ.ರೂ. ವೆಚ್ಚ: ಈ ಎಕಾನಮಿಕ್ ಕಾರಿಡಾರನ್ನು ಭಾರತಮಾಲಾ ಪ್ರಯೋಜನ ಯೋಜನೆ ಅನ್ವಯ 19,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಯೋಜಿಸಲಾಗಿದ್ದು, ಇನ್ನೂ 14 ಹಂತಗಳ ಮೂಲಕ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ. 2026ರ ವೇಳೆಗೆ ಯೋಜನೆ ಪೂರ್ಣಗೊಳ್ಳುವುದೆಂದು ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್