ಬಾಂಬೆ ಹೈಕೋರ್ಟ್ ತೀವ್ರ ತರಾಟೆ: ಮುಷ್ಕರ ಹಿಂಪಡೆದ ಬೆಸ್ಟ್ ನೌಕರರು
Team Udayavani, Jan 16, 2019, 9:55 AM IST
ಮುಂಬಯಿ : ಬಾಂಬೆ ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡದ್ದನ್ನು ಅನುಸರಿಸಿ ಮುಂಬಯಿಯ ಬೆಸ್ಟ್ (ಬೃಹನ್ಮುಂಬಯಿ ವಿದ್ಯುತ್ ಪೂರೈಕೆ ಮತ್ತು ಸಾರಿಗೆ) ನೌಕರರು ತಮ್ಮ ಮುಷ್ಕರವನ್ನು ಹಿಂದೆಗೆದುಕೊಳ್ಳಲು ಒಪ್ಪಿದ್ದಾರೆ.
ಬೆಸ್ಟ್ ನೌಕರರ ಬೇಡಿಕೆ ಪೂರೈಸುವ ನಿಟ್ಟಿನಲ್ಲಿ ಮಧ್ಯಸ್ಥಿಕೆದಾರರನ್ನಾಗಿ ಬಾಂಬೆ ಹೈಕೋರ್ಟ್, ನಿವೃತ್ತ ನ್ಯಾಯಾಧೀಶರೋರ್ವರನ್ನು ನೇಮಿಸಿದ ಹಿನ್ನೆಲೆಯಲ್ಲಿ ಬೆಸ್ಟ್ ನೌಕರರು ತಮ್ಮ ಮುಷ್ಕರವನ್ನು ಹಿಂದೆಗೆದುಕೊಂಡರು.
ಮುಷ್ಕರದ ವಿಷಯದಲ್ಲಿ ಎಲ್ಲ ಕಕ್ಷಿದಾರರ ವಾದ – ಪ್ರತಿವಾದಗಳನ್ನು ಆಲಿಸಿದ ಬಳಿಕ ಬಾಂಬೆ ಹೈಕೋರ್ಟ್, ಬೆಸ್ಟ್ ನೌಕರರ ಸಂಘಕ್ಕೆ ಒಂದು ತಾಸಿನೊಳಗೆ ಮುಷ್ಕರವನ್ನು ಹಿಂಪಡೆಯಲು ಸೂಚಿಸಿತು. ಆ ಪ್ರಕಾರ ನೌಕರರ ಸಂಘ ಮುಷ್ಕರವನ್ನು ನಿಲ್ಲಿಸುವ ನಿರ್ಧಾರವನ್ನು ತೆಗೆದುಕೊಂಡಿತು.
ಬೆಸ್ಟ್ ನೌಕರರಿಗೆ 10 ಸ್ಟೆಪ್ ಗಳ ಇನ್ಕ್ರಿಮೆಂಟ್ ನೀಡಬೇಕೆಂದು ಹೈಕೋರ್ಟ್ಆದೇಶಿಸಿತು. ಆದರೆ ಬೆಸ್ಟ್ ನೌಕರರ ಸಂಘದ ವಕೀಲರು 15 ಸ್ಟೆಪ್ ಗಳ ಇನ್ಕ್ರಿಮೆಂಟ್ಗೆ ಆಗ್ರಹಿಸಿದರು.
ಬಿಎಂಸಿ ಮತ್ತು ಮಹಾರಾಷ್ಟ್ರ ಸರಕಾರ ಸಾಧ್ಯವಿರುವಷ್ಟು ಬೇಗನೆ ಬಜೆಟ್ ವಿಲಯನ ಪ್ರಕ್ರಿಯೆಯನ್ನು ಆರಂಭಿಸಬೇಕು ಎಂದು ಹೈಕೋರ್ಟ್ ಸೂಚಿಸಿತು.
ಮುಷ್ಕರ ನಿರತರ ವಿಷಯದಲ್ಲಿ ಯಾವುದೇ ಕ್ರಮಕ್ಕೆ ಆದೇಶ ಇಲ್ಲದಿರುವ ಹಿನ್ನೆಲೆಯಲ್ಲಿ, ಬೆಸ್ಟ್ ಅಧಿಕಾರಿಗಳು ನೌಕರರೊಂದಿಗಿನ ಉಳಿದ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆ ಹರಿಸಿಕೊಳ್ಳಬೇಕೆಂದು ಹೈಕೋರ್ಟ್ ಸೂಚಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
MUST WATCH
ಹೊಸ ಸೇರ್ಪಡೆ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
UV Fusion: ಇಂಡಿ ಪಂಪ್ ಮಟ..
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ