ವಿಶ್ವಾಸದ್ರೋಹ; ಬಿಎಸ್ ಎಫ್ ಮಾಜಿ ಯೋಧ ತೇಜ್ ಬಹದ್ದರೂ ಜೆಜೆಪಿಗೆ ಗುಡ್ ಬೈ
Team Udayavani, Oct 26, 2019, 11:33 AM IST
ಹರ್ಯಾಣ: ಜನನಾಯಕ್ ಜನತಾ ಪಕ್ಷದ ವರಿಷ್ಠ ದುಶ್ಯಂತ್ ಚೌಟಾಲ ವಿಶ್ವಾಸದ್ರೋಹ ಎಸಗಿರುವುದಾಗಿ ಆರೋಪಿಸಿರುವ ಹರ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಮನೋಹರ್ ಲಾಲ್ ಖಟ್ಟರ್ ವಿರುದ್ಧ ಸ್ಪರ್ಧಿಸಿದ್ದ ಬಿಎಸ್ ಎಫ್ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಜೆಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿರುವುದಾಗಿ ಘೋಷಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ಜತೆ ಕೈಜೋಡಿಸುವುದಾಗಿ ದುಶ್ಯಂತ್ ಪಟೇಲ್ ಘೋಷಿಸಿದ್ದ ಹಿನ್ನೆಲೆಯಲ್ಲಿ ಜೆಜೆಪಿ ಪಕ್ಷವನ್ನು ತೊರೆಯುತ್ತಿರುವುದಾಗಿ ಬಿಎಸ್ಎಫ್ ನಿಂದ ವಜಾಗೊಂಡಿರುವ ತೇಜ್ ಬಹದ್ದೂರ್ ತಿಳಿಸಿದ್ದಾರೆ.
ಯೋಧರಿಗೆ ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವುದಾಗಿ ತೇಜ್ ಬಹದ್ದೂರ್ ಆರೋಪಿಸಿದ್ದ ವೀಡಿಯೋ ವೈರಲ್ ಆದ ನಂತರ ಬಿಎಸ್ ಎಫ್ ನಿಂದ ವಜಾಗೊಳಿಸಲಾಗಿತ್ತು. ಸೆಪ್ಟೆಂಬರ್ ನಲ್ಲಿ ತೇಜ್ ಬಹದ್ದೂರ್ ಜನನಾಯಕ್ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
2017ರಲ್ಲಿ ಬಿಎಸ್ ಎಫ್ ನಿಂದ ವಜಾಗೊಂಡ ನಂತರ ತೇಜ್ ಬಹದ್ದೂರ್ ಯಾದವ್ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ನಂತರ ಬಿಎಸ್ಪಿ, ಎಸ್ಪಿ ಮತ್ತು ಆರ್ ಎಲ್ ಡಿ ಮಹಾಮೈತ್ರಿಕೂಟದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಸಮಾಜವಾದಿ ಪಕ್ಷ ತೊರೆದ ನಂತರ ಯಾದವ್ ಜೆಜೆಪಿ ಪಕ್ಷ ಸೇರ್ಪಡೆಗೊಂಡಿದ್ದರು. ಅಲ್ಲದೇ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಮನೋಹರ್ ಲಾಲ್ ಖಟ್ಟರ್ ವಿರುದ್ಧ ಸ್ಪರ್ಧಿಸಿ ಪರಾಜಯಗೊಂಡಿದ್ದರು.
ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯದೆ ಅಧಿಕಾರಕ್ಕೆ ಏರಲು ಪಕ್ಷೇತರರ ಹಾಗೂ ಜೆಜೆಪಿ ಬೆಂಬಲ ಕೋರಿತ್ತು. ಈ ನಿಟ್ಟಿನಲ್ಲಿ ದುಶ್ಯಂತ್ ಚೌಟಾಲ ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಚೌಟಾಲಗೆ ಉಪಮುಖ್ಯಮಂತ್ರಿ ಹುದ್ದೆ ಕೊಡುವುದಾಗಿ ಬಿಜೆಪಿ ಆಫರ್ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ