ಪ.ಬಂ ಉಪಚುನಾವಣೆ : ದೀದಿ ವಿರುದ್ಧ ಪ್ರಿಯಾಂಕಾ ಟಿಬ್ರೆವಾಲ್ ಬಿಜೆಪಿಯಿಂದ ಕಣಕ್ಕೆ..?!


Team Udayavani, Sep 9, 2021, 12:28 PM IST

Bhabanipur bypoll: BJP may field Priyanka Tibrewal against CM Mamata Banerjee

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಪ್ರಿಯಾಂಕಾ ಟಿಬ್ರೆವಾಲ್

ನವ ದೆಹಲಿ : ಸಪ್ಟೆಂಬರ್ 30 ರಂದು ನಡೆಯಲಿರುವ ಪಶ್ಚಿಮ ಬಂಗಾಳದ ಭವಾನಿ ಪುರ್ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ, ವಕಿಲೆ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಬಾಬುಲ್ ಸುಪ್ರಿಯೋ ಅವರ ಕಾನೂನು ಸಲಹೆಗಾರರಾಗಿದ್ದ ನ್ಯಾಯವಾದಿ ಪ್ರಿಯಾಂಕಾ ಟಿಬ್ರೆವಾಲ್, ಸಿಎಂ ಮಮತಾ ಬ್ಯಾನರ್ಜಿ ಅವರ ವಿರುದ್ಧ ಸ್ಥಾನಕ್ಕೆ ಸವಾಲು ಹಾಕುವ ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಪ್ರಿಯಾಂಕ ಈ ಹಿಂದೆ ಕೋಲ್ಕತಾ ಮುನ್ಸಿಪಲ್ ಕೌನ್ಸಿಲ್ ಚುನಾವಣೆಯಲ್ಲಿ 2015 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು, ಆದರೇ, ತೃಣಮೂಲ ಕಾಂಗ್ರೆಸ್ ನ ಸ್ವಪನ್ ಸಮ್ಮದರ್ ವಿರುದ್ಧ ಸೋತಿದ್ದರು. ಆದರೇ, ಬಿಜೆಪಿ ಈಗ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ದೀದಿ ವಿರುದ್ಧ ಉಪ ಚುನಾವಣೆಯಲ್ಲಿ ಕಣಕ್ಕಿಳಸುವುದಕ್ಕೆ ಮುಂದಾಗಿದೆ.

ಇದನ್ನೂ ಓದಿ : ಶರಿಯಾ ನೀತಿ; ತಾಲಿಬಾನಿಗಳು ಒಳ್ಳೆ ಆಡಳಿತ ಕೊಡಲಿ: ಫಾರುಕ್ ಅಬ್ದುಲ್ಲಾ

ಪ್ರಿಯಾಂಕಾ ಟಿಬ್ರೆವಾಲ್ ಯಾರು..?

ಜುಲೈ 7, 1981 ರಂದು ಕೋಲ್ಕತ್ತಾದಲ್ಲಿ ಜನಿಸಿದ ಪ್ರಿಯಾಂಕ ತನ್ನ ಶಾಲಾ ಶಿಕ್ಷಣವನ್ನು ವೆಲ್ಯಾಂಡ್ ಗೌಲ್ಡ್ ಸ್ಮಿತ್ ಶಾಲೆಯಲ್ಲಿ ಪಡೆದರು. ಮತ್ತು ದೆಹಲಿ ವಿಶ್ವವಿದ್ಯಾಲಯದಿಂದ ಪದವಿ ಪಡೆದರು. ಅದರ ನಂತರ, ಅವರು 2007 ರಲ್ಲಿ ಕೋಲ್ಕತ್ತಾ ವಿಶ್ವವಿದ್ಯಾಲಯದ ಅಡಿಯಲ್ಲಿರುವ ಹಜ್ರಾ ಕಾನೂನು ಕಾಲೇಜಿನಿಂದ ಕಾನೂನು ಪದವಿಯನ್ನು ಪಡೆದಿದ್ದಾರೆ.

ವೃತ್ತಿಯಲ್ಲಿ ವಕಿಲೆಯಾಗಿರುವ ಪ್ರಿಯಾಂಕ, 2014 ರಲ್ಲಿ ಪಶ್ಚಿಮ ಬಂಗಾಳದ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆ. ಪಕ್ಷದಲ್ಲಿ ಹಲವು ಜವಾಬ್ದಾರಿಯನ್ನು ನಿಭಾಯಿಸಿ ಸೈ ಎನ್ನಿಸಿಕೊಂಡ ಪ್ರಿಯಾಂಕಾ ಗೆ ಬಿಜೆಪಿ, ಯುವ ಮೋರ್ಚಾ ದ ಅಧ್ಯಕ್ಷ ಗಿರಿಯನ್ನು ಸ್ಥಾನ ಮಾಡುತ್ತದೆ. 2021, ಅವರು ಎಂಟಲ್ಲಿಯಿಂದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದರು. ಆದರೆ ಟಿಎಂಸಿಯ ಸ್ವರ್ಣ ಕಮಲ್ ಸಾಹಾ ವಿರುದ್ಧ 58,257 ಮತಗಳ ಅಂತರದಿಂದ ಸೋತಿದ್ದರು.

ಇನ್ನು, ಈ ಬಗ್ಗೆ ರಾಷ್ಟ್ರೀಯ ಸುದ್ದಿ ಸಂಸ್ಥೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಪಕ್ಷ ನನ್ನನ್ನು ಈ ಕುರಿತಾಗಿ ಸಂಪರ್ಕಿಸಿದೆ ಹಾಗೂ ನನ್ನ ಅಭಿಪ್ರಾಯವನ್ನು ಕೇಳಿದೆ. ಭವಾನಿಪುರದಿಂದ ಸ್ಪರ್ಧೆಗೆ ಕಣಕ್ಕೆ ಯಾರನ್ನು ಇಳಿಸುವುದು ಎನ್ನುವುದರ ಬಗ್ಗೆ ಇನ್ನೂ ಪಕ್ಷದೊಳಗೆ ಚರ್ಚೆಯಾಗುತ್ತಿದೆ. ಆ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಹೆಸರೂ ಕೂಡ ಇದೆ. ನಾನೂ ನನ್ನ ಪಕ್ಷದ ಹಿರಿಯ ಮುಖಂಡರಿಗೆ ಕೃತಜ್ಞನಾಗಿರುತ್ತೇನೆ. ನನ್ನ ಮೇಲೆ ಪಕ್ಷ ಇಟ್ಟುಕೊಂಡಿರುವ ವಿಶ್ವಾಸಕ್ಕೆ ನಾನು ಆಭಾರಿಯಾಗಿದ್ದೇನೆ ಎಂದಿದ್ದಾರೆ.

ಒಂದು ವೇಳೆ ಭವಾನಿಪುರ ವಿಧಾನ ಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧೆಗೆ ನನ್ನನ್ನು ಕಣಕ್ಕಿಳಿಸಿದರೇ, ನಾನು ಪಕ್ಷಕ್ಕಾಗಿ ನನ್ನ ಸರ್ವ ಪ್ರಯತ್ನವನ್ನು ಮಾಡುತ್ತೇನೆ. ಪಕ್ಷದ ಬೆಂಬಲ ಇದ್ದೇ ಇದೆ. ಜನರು ಕೂಡ ಬಿಜೆಪಿಯನ್ನು ಬೆಂಬಲಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಏತನ್ಮಧ್ಯೆ, ಕಾಂಗ್ರಸ್ ಪಕ್ಷ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದು, ಚುನಾವಣೆ ಲೆಕ್ಕಾಚಾರ ಆರಂಭವಾಗಿದೆ.

ಸಪ್ಟೆಂಬರ್ 30 ರಂದು ಉಪ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 3 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣೆ ಆಯೋಗ ಇತ್ತೀಚೆಗೆ ತಿಳಿಸಿತ್ತು.

ಇದನ್ನೂ ಓದಿ : ವೈರಲ್ ವೀಡಿಯೋ : ಚಿನ್ನದ ಹುಡುಗ ನೀರಜ್ ಗೆ ಅಡುಗೆ ಮಾಡಿ ಬಡಿಸಿದ ಸಿಎಂ ಅಮರಿಂದರ್ ಸಿಂಗ್.!

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.