ಮೆಡಿಕಲ್ ಶಾಪ್ ಎದುರೇ ಕುಸಿದುಬಿದ್ದು ಮೃತಪಟ್ಟ ವ್ಯಕ್ತಿ: 6ಗಂಟೆ ಕಳೆದರೂ ಬಾರದ ಅಧಿಕಾರಿಗಳು !
Team Udayavani, Jul 16, 2020, 9:11 AM IST
ಬಿಹಾರ: ಔಷಧಿ ತರಲೆಂದು ಮೆಡಿಕಲ್ ಶಾಫ್ ಗೆ ತೆರಳಿದ ವ್ಯಕ್ತಿಯೋರ್ವ ಅಂಗಡಿಯೆದುರೇ ಕುಸಿದು ಬಿದ್ದ ಘಟನೆ ಭಾಘಲಾಪುರ ಬಳಿ ನಡೆದಿದೆ. ದುರಂತವೆಂದರೇ ಕೋವಿಡ್ ಭೀತಿಯಿಂದ ಯಾರೋಬ್ಬರೂ ಆತನ ಸಹಾಯಕ್ಕೆ ಮುಂದಾಗಿಲ್ಲ. ಅಧಿಕಾರಿಗಳು ಕೂಡ 6 ಗಂಟೆಯ ನಂತರ ಬಂದಿದ್ದು, ಆದರೇ ಅದಾಗಲೇ ವ್ಯಕ್ತಿ ಮೃತಪಟ್ಟಿದ್ದ ಎಂದು ವರದಿಯಾಗಿದೆ.
ಅಸ್ತಮಾಕ್ಕೆಂದು ಔಷಧಿ ಖರೀದಿಸಲು ವ್ಯಕ್ತಿ ಬಂದಿದ್ದು, ತದನಂತರದಲ್ಲಿ ಅಂಗಡಿಯೆದುರೇ ಕುಸಿದು ಬಿದ್ದಿದ್ದಾರೆ. ಕೋವಿಡ್-19 ಭೀತಿಯಿಂದ ಯಾರೋಬ್ಬರೂ ಸಹಾಯಕ್ಕೆ ಬರಲಿಲ್ಲವಾಗಿದ್ದು, ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಸರ್ಕಾರ ಕೈಚೆಲ್ಲಿ ಕುಳಿತಿದ್ದು, ಅಧಿಕಾರಿಗಳು ಕೂಡ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಮೃತದೇಹ 5ರಿಂದ 6ಗಂಟೆ ಸ್ಥಳದಲ್ಲಿದ್ದು, ಆ್ಯಂಬುಲೆನ್ಸ್, ಪೊಲೀಸರು ಬಂದರೂ ಕೂಡ ಯಾವುದೇ ಕ್ರಮ ತೆಗೆದುಕೊಳ್ಳದೆ ಹಿಂದಿರುಗಿದ್ದಾರೆ. ಇದೊಂದು ಹಾಸ್ಯಸ್ಪದ ಎಂದು ವ್ಯಕ್ತಿಯೊಬ್ಬರು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಔಷಧಿ ಅಂಗಡಿಯ ವ್ಯಕ್ತಿಯೊಬ್ಬರು “ಕೋವಿಡ್ ತುರ್ತು ಸಹಾಯವಾಣಿಗೆ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಮಾತ್ರವಲ್ಲದೆ ಪೊಲೀಸರಿಗೂ ಮಾಹಿತಿ ನೀಡಲಾಗಿತ್ತು. ಆದರೇ 6 ಗಂಟೆ ನಂತರ ನಗರಸಭೆ ಸಿಬ್ಬಂದಿಗಳು ಪಿಪಿಇ ಕಿಟ್ ಧರಿಸಿ ಬಂದು ಮೃತದೇಹ ತೆಗೆದುಕೊಂಡು ಹೋಗಿದ್ದಾರೆ ಎಂದಿದ್ದಾರೆ.
ಬಿಹಾರದಲ್ಲಿ 20,000ಕ್ಕಿಂತ ಹೆಚ್ಚು ಕೋವಿಡ್ ಸೋಂಕಿತರಿದ್ದು, ಭಾಘಲಾಪುರದಲ್ಲಿ 1,000 ಜನರು ವೈರಾಣುವಿಗೆ ಭಾಧಿತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್