ಉತ್ತರಾಖಂಡದ ಬೇಸಗೆ ರಾಜಧಾನಿ ಭರಾರಿಸೈನ್
Team Udayavani, Jun 9, 2020, 1:13 PM IST
ಡೆಹ್ರಾಡೂನ್: ಉತ್ತರಾಖಂಡದ ಭರಾರಿಸೈನ್ (ಗೈರ್ಸೈನ್) ನಗರವನ್ನು ರಾಜ್ಯದ ಬೇಸಿಗೆ ರಾಜಧಾನಿ ಎಂದು ಘೋಷಿಸಲಾಗಿದೆ.
ಚಾಮೋಲಿ ಜಿಲ್ಲೆಯ ಗೈರ್ಸೈನ್ನಿಂದ 14 ಕಿ.ಮೀ. ದೂರದಲ್ಲಿರುವ ಭರಾರಿಸೈನ್ ನಗರವನ್ನು ಉತ್ತರಾಖಂಡದ ಬೇಸಿಗೆ ರಾಜಧಾನಿಯನ್ನಾಗಿ ಘೋಷಿಸಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ, ಇದಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ.
ಭರಾರಿಸೈನ್ ನಗರದಲ್ಲಿ ಈಗಾಗಲೇ ಹಲವಾರು ವಿಧಾನಸಭಾ ಕಲಾಪಗಳನ್ನು ಆಯೋಜಿಸಲಾಗಿದೆ. ಪ್ರಸ್ತುತ ರಾಜಧಾನಿಯಾಗಿರುವ ಡೆಹ್ರಾಡೂನ್ ಚಳಿಗಾಲದ ರಾಜಧಾನಿಯಾಗಿ ಉಳಿಯಲಿದೆ.
2000ದಲ್ಲಿ ಉತ್ತರಪ್ರದೇಶ ರಾಜ್ಯದ ಹಿಮಾಲಯ ಪರ್ವತ ಪ್ರಾಂತ್ಯವನ್ನು ಬೇರ್ಪಡಿಸಿ ಉತ್ತರಾಖಂಡ ರಾಜ್ಯವನ್ನು ರಚಿಸಲಾಗಿತ್ತು. ಇದೇ ರೀತಿ ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡು ರಾಜಧಾನಿಗಳಿದ್ದು, ಜಮ್ಮು ಚಳಿಗಾಲದ ರಾಜಧಾನಿಯಾಗಿದ್ದರೆ ಶ್ರೀನಗರ ಬೇಸಿಗೆ ರಾಜಧಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್