ರೈತರ ಭಾರತ್ ಬಂದ್ ಕರೆಗೆ ದೆಹಲಿ ಗಡಿ ಹೊರತುಪಡಿಸಿ ಇತರೆಡೆ ನೀರಸ ಪ್ರತಿಕ್ರಿಯೆ
ಹಿಂಸಾಚಾರ ನಡೆಸಕೂಡದು ಎಂದು ರೈತ ಸಂಘಟನೆಗಳು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.
Team Udayavani, Mar 26, 2021, 11:23 AM IST
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತ ಸಂಘಟನೆಗಳು ದೆಹಲಿ ಗಡಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ನಾಲ್ಕು ತಿಂಗಳು ಪೂರೈಸಿರುವ ಹಿನ್ನೆಲೆಯಲ್ಲಿ ಶುಕ್ರವಾರ(ಮಾರ್ಚ್) ಭಾರತ್ ಬಂದ್ ಗೆ ಕರೆ ಕೊಟ್ಟಿದ್ದು, ದೆಹಲಿ ಗಡಿ ಭಾಗದಲ್ಲಿ ಪ್ರತಿಭಟನೆಯ ಬಿಸಿ ಹೊರತುಪಡಿಸಿದರೆ ದೇಶಾದ್ಯಂತ ಯಾವುದೇ ಪರಿಣಾಮ ಬೀರಿಲ್ಲ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಭಾರತದಲ್ಲಿರುವ ಮುಸ್ಲಿಮರು ಒಟ್ಟಾದರೆ ನಾಲ್ಕು ಪಾಕ್ ಸೃಷ್ಟಿ: ಟಿಎಂಸಿ ಮುಖಂಡ ಶೇಖ್
ದೆಹಲಿ, ಚಂಡೀಗಢ್, ಫಿರೋಜಾಬಾದ್ ಮತ್ತು ಅಮೃತ್ ಸರ್ ನಲ್ಲಿ ರೈತ ಮುಖಂಡರ ಪ್ರತಿಭಟನೆಯಿಂದ 30ಕ್ಕೂ ಅಧಿಕ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಗಾಜಿಪುರ್ ಗಡಿಯ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದ ಪರಿಣಾಮ ಸಂಚಾರ ವ್ಯವಸ್ಥೆಗೆ ಅಡ್ಡಿಯುಂಟಾಗಿದೆ ಎಂದು ವರದಿ ವಿವರಿಸಿದೆ.
ದೇಶದ ಇತರ ಭಾಗದಲ್ಲಿ ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಲ್ಲೆಡೆ ಬಸ್, ರೈಲು ಸಂಚಾರ ಹಾಗೂ ಎಂದಿನಂತೆ ವ್ಯಾಪಾರ, ವಹಿವಾಟು ಚಟುವಟಿಕೆ ನಡೆಯುತ್ತಿದೆ.
ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ನವೆಂಬರ್ 26ರಿಂದ ಸಿಂಘು ಗಡಿ, ಗಾಜಿಪುರ್ ಮತ್ತ ಟಿಖ್ರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಹಾಲು ಮತ್ತು ತರಕಾರಿ ಸರಬರಾಜು ನಿಲ್ಲಿಸುವುದಾಗಿ ಸಂಯುಕ್ತ್ ಕಿಸಾನ್ ಮೋರ್ಚಾ ಮುಖಂಡ ದರ್ಶನ್ ಪಾಲ್ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದರು.
ಬೆಳಗ್ಗೆ 6ಗಂಟೆಯಿಂದ ಸಂಜೆ 6ಗಂಟೆವರೆಗೆ ಪ್ರತಿಭಟನೆ ಶಾಂತಿಯುತವಾಗಿ ನಡೆಯಲಿದ್ದು, ಯಾವುದೇ ಕಾರಣಕ್ಕೂ ಅಹಿತಕರ ಘಟನೆಯಲ್ಲಿ ಶಾಮೀಲಾಗುವುದು, ಹಿಂಸಾಚಾರ ನಡೆಸಕೂಡದು ಎಂದು ರೈತ ಸಂಘಟನೆಗಳು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು