ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ತೀವ್ರ: ಮಾರ್ಚ್ 26ರಂದು ಭಾರತ್ ಬಂದ್ ಗೆ ರೈತರ ಕರೆ
ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆಯಿಂದ ಇರಬೇಕು
Team Udayavani, Mar 25, 2021, 11:50 AM IST
Representative Image
ನವದೆಹಲಿ:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ನೂತನ ಕೃಷಿ ಕಾಯ್ದೆ ವಿರೋಧಿಸಿ ಕಳೆದ ನಾಲ್ಕು ತಿಂಗಳಿನಿಂದ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಮಾರ್ಚ್ 26ರಂದು ಭಾರತ್ ಬಂದ್ ಗೆ ಕರೆ ನೀಡಿವೆ.
ಇದನ್ನೂ ಓದಿ:ಗ್ರಾಹಕರೆ ಗಮನಿಸಿ : 27 ರಿಂದ ಬ್ಯಾಂಕ್ ಗೆ ಸಾಲು ಸಾಲು ರಜೆ..! ಪೂರ್ಣ ಮಾಹಿತಿ ಇಲ್ಲಿದೆ
ನವೆಂಬರ್ 26ರಿಂದ ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ದೆಹಲಿ ಗಡಿಯಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ಆರಂಭಿಸಿದ್ದವು. ಪಿಟಿಐ ನ್ಯೂಸ್ ಏಜೆನ್ಸಿ ಪ್ರಕಾರ, ಮಾರ್ಚ್ 26ರ ಬೆಳಗ್ಗೆ 6ಗಂಟೆಯಿಂದ ಸಂಜೆ 6ಗಂಟೆವರೆಗೆ ಭಾರತ್ ಬಂದ್ ಗೆ ರೈತ ಸಂಘಟನೆಗಳು ಕರೆ ಕೊಟ್ಟಿರುವುದಾಗಿ ತಿಳಿಸಿದೆ.
ಈ ಬಾರಿ ಪ್ರತಿಭಟನೆ ಸಂದರ್ಭದಲ್ಲಿ ದೇಶಾದ್ಯಂತ ಎಲ್ಲಾ ರಸ್ತೆ, ರೈಲು ಸಂಚಾರ, ಮಾರುಕಟ್ಟೆ ಮತ್ತು ಇತರ ಸಾರ್ವಜನಿಕ ಸ್ಥಳಗಳನ್ನು ಬಂದ್ ಮಾಡಲಾಗುವುದು. ಜನರು ನಮ್ಮ ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಸಹಕಾರ ನೀಡಬೇಕೆಂದು ರೈತ ಮುಖಂಡ ದರ್ಶನ್ ಪಾಲ್ ಮನವಿ ಮಾಡಿಕೊಂಡಿದ್ದಾರೆ.
ಮಾರ್ಚ್ 26ರಂದು ನಡೆಯಲಿರುವ ನಮ್ಮ ಭಾರತ್ ಬಂದ್ ಶಾಂತಿಯುತವಾಗಿ ನಡೆಯಲಿದ್ದು, ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆಯಿಂದ ಇರಬೇಕು ಎಂದು ವಿನಂತಿಸಿಕೊಂಡಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್