
ಭಾರತ್ ಜೋಡೋ ಯಾತ್ರೆ ಎಲ್ಲಾ ಸಮಾಜ ವಿರೋಧಿ ಅಂಶಗಳನ್ನು ಒಟ್ಟುಗೂಡಿಸಿತು: ಬಿಜೆಪಿ
ಬಿಜೆಪಿ ನಾಯಕರ ತ್ಯಾಗದಿಂದ ರಾಹುಲ್ ರಾಷ್ಟ್ರಧ್ವಜವನ್ನು ಹಾರಿಸಲು ಸಾಧ್ಯವಾಯಿತು
Team Udayavani, Jan 30, 2023, 5:25 PM IST

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆ ಮುಕ್ತಾಯ ಗೊಳಿಸುತ್ತಿದ್ದಂತೆ ಬಿಜೆಪಿ ಟೀಕಾ ಪ್ರಹಾರ ನಡೆಸಿದ್ದು, ಯಾತ್ರೆ’ ಎಲ್ಲಾ ಸಮಾಜ ವಿರೋಧಿ ಅಂಶಗಳನ್ನು ಒಟ್ಟುಗೂಡಿಸಿತು ಎಂದಿದೆ.
ಬಿಜೆಪಿ ಸಂಸದ ಡಾ.ಸುಧಾಂಶು ತ್ರಿವೇದಿ ಅವರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿ, ಯಾತ್ರೆಯ ಮೂಲಕ ರಾಹುಲ್ ಗಾಂಧಿ ಎಲ್ಲಾ ಸಮಾಜ ವಿರೋಧಿ ಅಂಶಗಳನ್ನು ಒಟ್ಟುಗೂಡಿಸಿದ್ದಾರೆ. ಬಿಜೆಪಿ ನಾಯಕರು ಮಾಡಿದ ತ್ಯಾಗದಿಂದ ರಾಹುಲ್ ಗಾಂಧಿ ರಾಷ್ಟ್ರಧ್ವಜವನ್ನು ಹಾರಿಸಲು ಸಾಧ್ಯವಾಯಿತು ಎಂದು ಹೇಳಿದರು.
ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಪ್ರತಿಕ್ರಿಯಿಸಿ, 370 ಮತ್ತು 35ಎ ವಿಧಿ ರದ್ದುಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಲು ರಾಹುಲ್ ಗಾಂಧಿ ಮರೆತಿದ್ದಾರೆ. 2014 ರ ನಂತರ ಕಾಶ್ಮೀರದ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿದೆ ಎಂದುರು.
“ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಶ್ರೀನಗರದಲ್ಲಿ ಸ್ನೋಬಾಲ್ಗಳೊಂದಿಗೆ ಆಟವಾಡುವುದನ್ನು ನೀವು ನೋಡಿದ್ದೀರಿ, ಆದರೆ ಅವರು ಆರ್ಟಿಕಲ್ 370 ಮತ್ತು 35A ಅನ್ನು ರದ್ದುಗೊಳಿಸಿದ ಪ್ರಧಾನಿ ಮೋದಿಗೆ ಧನ್ಯವಾದ ಹೇಳಲು ಮರೆತಿದ್ದಾರೆ. 2014 ರ ನಂತರ ಪರಿಸ್ಥಿತಿ ಕಾಶ್ಮೀರ ಸಂಪೂರ್ಣವಾಗಿ ಬದಲಾಗಿದೆ, ಈಗ ಶಾಂತಿ ನೆಲೆಸಿದೆ ಮತ್ತು ಪ್ರವಾಸೋದ್ಯಮವೂ ಹೆಚ್ಚಿದೆ ಎಂದಿದ್ದಾರೆ.
”ಯಾತ್ರೆಯಲ್ಲಿ, ಭಾರತವನ್ನು ಒಗ್ಗೂಡಿಸುವವರ ಬದಲು ಭಾರತವನ್ನು ಒಡೆಯಲು ಕೆಲಸ ಮಾಡಿದವರನ್ನು ನೋಡಲಾಯಿತು, ಅಂತಹವರಿಗೆ ಕಾಂಗ್ರೆಸ್ ಏನು ಮಾಡಲು ಬಯಸುತ್ತದೆ ಎಂದು ಅವರೇ ಉತ್ತರಿಸಬೇಕು” ಎಂದುರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಆಯ್ಕೆ: ನಳಿನ್ ಕುಮಾರ್ ಕಟೀಲ್

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್