‘ಭಾರತ್ ಬಂದ್’:ಐಟೆಕ್ ಸಮೀತಿಯಿಂದ ವಿವಿಧ ಕಂಪನಿಗಳ ಪ್ರವೇಶದ್ವಾರದಲ್ಲಿ ಪ್ರತಿಭಟನೆಗೆ ನಿರ್ಧಾರ
Team Udayavani, Sep 25, 2021, 5:24 PM IST
ಪಣಜಿ: ದೇಶದಲ್ಲಿ ಕಾರ್ಮಿಕ ವಿರೋಧಿ ಧೊರಣೆ ಹಾಗೂ ಕೃಷಿಕರ ವಿರುದ್ಧ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ಸಪ್ಟೆಂಬರ್ 27 ರಂದು ವಿವಿಧ ಕಾರ್ಮಿಕ ಸಂಘಟನೆ ದೇಶವ್ಯಾಪಿ ‘ಭಾರತ್ ಬಂದ್’ ಗೆ ಕರೆ ನೀಡಿದೆ.
ಭಾರತ್ ಬಂದ್ ಅಡಿಯಲ್ಲಿ ಗೋವಾದ ಐಟೆಕ್ ಸಮೀತಿಯ ವತಿಯಿಂದ ವಿವಿಧ ಕಂಪನಿಗಳ ಪ್ರವೇಶದ್ವಾರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಈ ಚಳುವಳಿಯ ಒಂದು ಭಾಗವಾಗಿ ಸಪ್ಟೆಂಬರ್ 30 ರಂದು ಪಣಜಿಯ ಆಜಾದ ಮೈದಾನದಲ್ಲಿ ಕಾರ್ಮಿಕ ಮಹಾಮೇಳ ಹಾಗೂ ಧರಣಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಗೋವಾ ಐಟೆಕ್ ಸಂಘಟನೆಯ ಪ್ರಮುಖ ಕ್ರಿಸ್ತೊಫರ್ ಫೊನ್ಸೆಕಾ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ರಾಜ್ಯೋತ್ಸವ ಪ್ರಶಸ್ತಿಗೆ ಆನ್ ಲೈನ್ ಮೂಲಕ ಸಾರ್ವಜನಿಕರೇ ಸಾಧಕರನ್ನು ಶಿಫಾರಸ್ಸು ಮಾಡಬಹುದು
ಪಣಜಿಯ ಐಟೆಕ್ ಕಾರ್ಯಾಲಯದಲ್ಲಿ ಕರೆದಿದ್ದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು- ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯಿಂದಾಗಿ ಹೆಚ್ಚಿನ ತೊಂದರೆಯುಂಟಾಗುತ್ತಿದೆ, ಈ ಧೋರಣೆಯಿಂದಾಗಿ ಬೆರಳೆಣಿಕೆಯಷ್ಟು ಜನರಿಗೆ ಲಾಭವುಂಟಾಗುತ್ತಿದೆ. ದೇಶದಲ್ಲಿ ಕೃಷಿಕರ ಮತ್ತು ಕಾರ್ಮಿಕರ ಮೇಲಿನ ಅತ್ಯಾಚಾರ ಹಾಗೂ ಹಿಂಸೆಯನ್ನು ನಿಷೇಧಿಸಿ ಭಾರತ್ ಬಂದ್ಗೆ ಕರೆ ನೀಡಲಾಗಿದೆ ಎಂದು ಕ್ರಿಸ್ತೊಫರ್ ಫೊನ್ಸೆಕಾ ನುಡಿದರು.
ಅಧಿಕಾರಕ್ಕೆ ಬರುವ ಮುನ್ನ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಾಗೂ ರಾಜ್ಯ ಸರ್ಕಾರವು ಕಾರ್ಮಿಕರಿಗೆ ಹಲವು ಆಶ್ವಾಸನೆ ನೀಡಿತ್ತು, ಈ ಪೈಕಿ ಎಷ್ಟು ಆಶ್ವಾಸನೆ ಪೂರ್ಣಗೊಳಿಸಲಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕ್ರಿಸ್ತೊಫರ್ ಫೊನ್ಸೆಕಾ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?