‘ದೇಶ ವಿರೋಧಿಗಳ ರಕ್ಷಕ ಕೇಜ್ರಿವಾಲ್’ ; ದೆಹಲಿಯಲ್ಲಿ ಹೀಗೊಂದು ಪೋಸ್ಟರ್ ವಾರ್!
Team Udayavani, Sep 8, 2019, 3:01 PM IST
ನವದೆಹಲಿ: ಭಾರತೀಯ ಜನತಾ ಪಕ್ಷದ ಕಪಿಲ್ ಮಿಶ್ರಾ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಪೋಸ್ಟರ್ ಅಭಿಯಾನ ಒಂದನ್ನು ಪ್ರಾರಂಭಿಸಿದ್ದಾರೆ. ‘ಕೇಜ್ರಿವಾಲ್ ಕಿ ಮನ್ ಕಿ ಬಾತ್’ (ಕೇಜ್ರಿವಾಲ್ ಮನದಾಳ) ಎಂಬ ಶೀರ್ಷಿಕೆಯಲ್ಲಿ ನಗರದ ಹಲವು ಕಡೆಗಳಲ್ಲಿ ಈ ಪೋಸ್ಟರ್ ಅನ್ನು ಹಾಕಲಾಗಿದೆ.
‘ಜೋ ದೇಶ್ ವಿರೋಧಿ ನಾರೇ ಲಗಾಯೇಗಾ, ಉಸೇ ಕೇಜ್ರಿವಾಲ್ ಬಚಾಯೇಗಾ’ (ದೇಶ ವಿರೋಧಿ ಘೋಷಣೆಗಳನ್ನು ಕೂಗುವವರನ್ನು ಕೇಜ್ರಿವಾಲ್ ರಕ್ಷಿಸುತ್ತಾರೆ) ಎಂದು ಶರ್ಮಾ ಅವರು ಕೇಜ್ರಿವಾಲ್ ವಿರುದ್ಧ ಹರಿಹಾಯ್ದಿದ್ದಾರೆ.
ಐ.ಟಿ.ಒ., ಮಂಡಿ ಹೌಸ್, ಅಶೋಕಾ ರಸ್ತೆ ಸೇರಿದಂತೆ ದೆಹಲಿ ನಗರದ ಹಲವು ಕಡೆಗಲ್ಲಿ ಇಂದು ಮುಂಜಾನೆಯಿಂದಲೇ ಕೆಜ್ರಿವಾಲ್ ವಿರುದ್ಧದ ಈ ಪೋಸ್ಟರ್ ಗಳು ರಾರಾಜಿಸುತ್ತಿವೆ.
ಜವಾಹರ್ ಲಾಲ್ ವಿಶ್ವವಿದ್ಯಾನಿಲಯದ ಹಿಂದಿನ ವಿದ್ಯಾರ್ಥಿ ಸಂಘಟನೆಯ ಮುಖಂಡ ಕನ್ಹಯ್ಯ ಕುಮಾರ್ ಅವರು ದೇಶ ವಿರೋಧಿ ಘೋಷಣೆ ಮೊಳಗಿಸಿದ ವಿಚಾರದಲ್ಲಿ ಭಾಗಿಯಾಗಿಲ್ಲ ಎಂದು ದೆಹಲಿ ಸರಕಾರದ ಗೃಹ ಸಚಿವಾಲಯ ಇತ್ತೀಚೆಗಷ್ಟೇ ತಾನು ಹೊರಡಿಸಿದ್ದ ಸೂಚನಾ ಪತ್ರದಲ್ಲಿ ತಿಳಿಸಿತ್ತು. ಮತ್ತು ದೆಹಲಿ ಸರಕಾರದ ಅಸಹಕಾರದ ಫಲವಾಗಿ ಕನ್ಹಯ್ಯಾ ಕುಮಾರ್ ವಿರುದ್ಧ ಹಾಕಲಾಗಿದ್ದ ಚಾರ್ಜ್ ಶೀಟ್ ವಿಫಲವಾಗಿತ್ತು. ಇದಕ್ಕೆ ಪ್ರತಿಯಾಗಿ ಕಪಿಲ್ ಮಿಶ್ರಾ ಅವರು ಈ ಪೋಸ್ಟರ್ ಅಭಿಯಾನವನ್ನು ಪ್ರಾರಂಭಿಸಿದ್ದಾರೆ ಎನ್ನಲಾಗುತ್ತಿದೆ.
ಈ ಮೊದಲು ಆಮ್ ಆದ್ಮಿ ಪಕ್ಷದಲ್ಲಿದ್ದ ಕಪಿಲ್ ಮಿಶ್ರಾ ಅವರು ಕಳೆದ ಆಗಸ್ಟ್ ತಿಂಗಳಲ್ಲಿ ಆಪ್ ತೊರೆದು ಭಾರತಿಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
आज सुबह दिल्ली की सड़कों पर लगे जगह जगह ये होर्डिंग्स –
जो देशद्रोही नारें लगाएगा
केजरीवाल उसे बचाएगाअफ़ज़ल के हमदर्दों को
दिल्ली सबक सिखाएगी pic.twitter.com/XplWEu383h— Kapil Mishra (@KapilMishra_IND) September 8, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ